ಬ್ರೇಕಿಂಗ್ ನ್ಯೂಸ್
07-12-22 02:31 pm Source: Vijayakarnataka ಸಿನಿಮಾ
ಮಾಸ್, ಹೊಡಿ ಬಡಿ ಸಿನಿಮಾಗಳು ಹೆಚ್ಚಾಗಿ ಬರುತ್ತಿರುವ ಈ ಹೊತ್ತಿನಲ್ಲಿ ಕಾಲೇಜು ಕಥೆಯೊಂದು ಸೆಟ್ಟೇರಲು ಸಜ್ಜಾಗಿದೆ. ಅದರ ಹೆಸರು ‘ಜಸ್ಟ್ ಪಾಸ್’. ಇದರಲ್ಲಿ 'ಇರುವುದೆಲ್ಲವ ಬಿಟ್ಟು' ಸಿನಿಮಾ ಖ್ಯಾತಿಯ ಶ್ರೀ ಮಹದೇವ್ ನಟಿಸುತ್ತಿದ್ದು, ರಘು ಕೆ ಎಂ ಎಂಬವರು ನಿರ್ದೇಶನ ಮಾಡುತ್ತಿದ್ದಾರೆ.
100 ಅಂಕಗಳಿಗೆ 35 ಅಂಕ ಪಡೆದರೆ ಅವರನ್ನು ಜಸ್ಟ್ ಪಾಸಾದವರು ಎಂದು ಕರೆಯುತ್ತಾರೆ. ಅಂತಹದೇ ಒಂದು ಕಥೆಯನ್ನು ನಿರ್ದೇಶಕ ರಘು ಸಿನಿಮಾ ಮಾಡಿದ್ದಾರೆ. ನಟ ಶ್ರೀ ಈ ಕಥೆಗೆ ಸೂಕ್ತವಾಗಿ ಹೊಂದಿಕೆಯಾಗುತ್ತಾರೆ ಎಂಬ ಕಾರಣಕ್ಕೆ ಅವರನ್ನು ನಾಯಕರನ್ನಾಗಿ ಮಾಡಲಾಗಿದೆ. ರಘು ಕೆ ಎಂ ಈ ಮೊದಲು ‘ತರ್ಲೆ ವಿಲೇಜ್’, ‘ಪರಸಂಗ’, ‘ದೊಡ್ಡಟ್ಟಿ ಬೋರೇಗೌಡ’ ಎಂಬ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ಇದರಲ್ಲಿ‘ದೊಡ್ಡಟ್ಟಿ ಬೋರೇಗೌಡ’ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಪಡೆದಿತ್ತು.
‘ಜಸ್ಟ್ ಪಾಸ್ ಒಂದು ಯೂತ್ಫುಲ್ ಸಬ್ಜೆಕ್ಟ್. ಕಾಲೇಜು ಹಿನ್ನೆಲೆಯಲ್ಲಿ ಮೂಡಿ ಬರಲಿರುವ ಈ ಸಿನಿಮಾದಲ್ಲಿಇಂದಿನ ಯುವಕರ ಬದುಕಿನಲ್ಲಿ ಸಾಮಾನ್ಯವಾಗಿ ನಡೆಯುವಂತಹ ಘಟನೆಗಳಿವೆ. ಅದರ ಜತೆಗೆ ಒಂದಷ್ಟು ವಿಶೇಷ ಮನರಂಜನೆಗಳಿರುತ್ತವೆ. ನಾಯಕ ಶ್ರೀಗೆ ನಾಯಕಿಯ ಆಯ್ಕೆ ಇನ್ನೊಂದು ವಾರದಲ್ಲಿ ಆಗಲಿದೆ. ಡಿಸೆಂಬರ್ 14ರಂದು ಮುಹೂರ್ತ ನಡೆಯಲಿದೆ. ಜಸ್ಟ್ ಪಾಸ್ ಸಿನಿಮಾದಲ್ಲಿ ಹೊಸ ರೀತಿಯ, ವಿಭಿನ್ನ ನಿರೂಪಣೆಯಿದೆ' ಎಂದು ನಿರ್ದೇಶಕ ರಘು ಹೇಳಿದ್ದಾರೆ. ರಂಗಾಯಣ ರಘು, ಪ್ರಕಾಶ್ ತುಮ್ಮಿನಾಡ್, ದೀಪಕ್ ರೈ, ಸಾಧು ಕೋಕಿಲ ಸೇರಿದಂತೆ ಹಲವು ಕಲಾವಿದರು ಈ ಸಿನಿಮಾದಲ್ಲಿ ನಟಿಸಲಿದ್ದಾರೆ.
'ಶ್ರೀರಸ್ತು ಶುಭಮಸ್ತು', 'ನೀಲಿ', 'ಚಿಟ್ಟೆಹೆಜ್ಜೆ', 'ಇಷ್ಟದೇವತೆ' ಮುಂತಾದ ಧಾರಾವಾಹಿ ಮೂಲಕ ಗಮನ ಸೆಳೆದಿದ್ದ ನಟ ಶ್ರೀ ಮಹದೇವ್, 'ಹೊಂದಿಸಿ ಬರೆಯಿರಿ', 'ಬೆಂಗಳೂರು ಬಾಯ್ಸ್' ಮುಂತಾದ ಸಿನಿಮಾಗಳಲ್ಲಿ ಬ್ಯುಸಿ ಇದ್ದಾರೆ. 'ಗಜಾನನ & ಗ್ಯಾಂಗ್' ಸಿನಿಮಾ ಈ ವರ್ಷ ತೆರೆಕಂಡಿದೆ. ಇನ್ನು, ಅವರ 'ಹೊಂದಿಸಿ ಬರೆಯಿರಿ' ಸಿನಿಮಾದ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ರಾಮೇನಹಳ್ಳಿ ಜಗನ್ನಾಥ್ ಆ್ಯಕ್ಷನ್-ಕಟ್ ಹೇಳಿರುವ ಈ ಸಿನಿಮಾವು ಅತೀ ಶೀಘ್ರದಲ್ಲೇ ತೆರೆಗೆ ಬರಲಿದೆ.
ಈ ಹಿಂದೆ 'ಬ್ರಹ್ಮ ವಿಷ್ಣು ಮಹೇಶ್ವರ' ಸಿನಿಮಾವನ್ನು ನಿರ್ದೇಶನ ಮಾಡಿದ್ದ ಯುವ ನಿರ್ದೇಶಕ ಸ್ವರೂಪ್ ಈಗ 'ಲೆಟ್ಸ್ ಬ್ರೇಕಪ್' ಸಿನಿಮಾ ಮಾಡುತ್ತಿದ್ದು, ಆ ಸಿನಿಮಾದಲ್ಲೂ ಶ್ರೀ ಮಹದೇವ್ ನಟಿಸುತ್ತಿದ್ದಾರೆ. ಈ ಸಿನಿಮಾದ ಸ್ಕ್ರಿಪ್ಟ್ ಪೂಜೆ ಕೂಡ ಮುಗಿದಿದೆ. 'ಲವ್ ಮಾಕ್ಟೇಲ್' ಸಿನಿಮಾ ಖ್ಯಾತಿಯ ನಟಿ ರಚನಾ ಇಂದರ್ 'ಲೆಟ್ಸ್ ಬ್ರೇಕಪ್'ನಲ್ಲಿ ಶ್ರೀ ಮಹದೇವ್ ಎದುರು ನಾಯಕಿಯಾಗಿದ್ದಾರೆ.
Actor Shri Mahadev Starrer New Movie Titled Just Pass.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 04:31 pm
HK News Staffer
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
11-07-26 04:26 pm
HK News Staffer
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
11-07-26 04:28 pm
HK News Staffer
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm