ಬ್ರೇಕಿಂಗ್ ನ್ಯೂಸ್
13-12-22 02:35 pm Source: Vijayakarnataka ಸಿನಿಮಾ
ನಟ ಸಲ್ಮಾನ್ ಖಾನ್ ಬಾಲಿವುಡ್ನ ಮೋಸ್ಟ್ ಎಲಿಜಿಬಲ್ ಬ್ಯಾಚುಲರ್ ಅನ್ನೋದು ಎಲ್ಲರಿಗೂ ಗೊತ್ತಿದೆ. ಆಗಾಗ ಅವರ ಲವ್ ಲೈಫ್ ಬಗ್ಗೆ ಒಂದಲ್ಲಾ ಒಂದು ಗಾಸಿಪ್ಗಳು ಬರುತ್ತಿರುತ್ತವೆ. ಸದ್ಯ ಅವರು ‘ಕಿಸಿ ಕಾ ಭಾಯ್ ಕಿಸಿ ಕಿ ಜಾನ್' ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಸಲ್ಲುಗೆ ನಾಯಕಿಯಾಗಿ ಪೂಜಾ ಹೆಗ್ಡೆ ಕಾಣಿಸಿಕೊಂಡಿದ್ದಾರೆ. ಇದೀಗ ಸಲ್ಲು ಮತ್ತು ಪೂಜಾ ಪ್ರೀತಿ ಮಾಡುತ್ತಿದ್ದಾರೆ ಎಂಬ ಗಾಸಿಪ್ ಕೇಳಿಬಂದಿದೆ.
ಈ ಗಾಸಿಪ್ ನಿಜವೇ?
ಸಲ್ಮಾನ್ ಖಾನ್ಗೆ ಈಗ 56 ವರ್ಷ ವಯಸ್ಸು. ಪೂಜಾ ಹೆಗ್ಡೆಗೆ ಈಗ 32 ವರ್ಷ ವಯಸ್ಸು. ಸಲ್ಮಾನ್ ಖಾನ್ ಹೀರೋ ಆಗಿ ಬಣ್ಣ ಹಚ್ಚಿದ್ದಾಗ, ಆಗಿನ್ನೂ ಪೂಜಾ ಹೆಗ್ಡೆ ಹುಟ್ಟಿರಲಿಲ್ಲ. ಇಷ್ಟೊಂದು ವಯಸ್ಸಿನ ಅಂತರವಿರುವ ಇವರ ಮಧ್ಯೆ ಪ್ರೀತಿ ಹುಟ್ಟಿದ್ದಾದರೂ ಹೇಗೆ ಅನ್ನೋದು ನೆಟ್ಟಿಗರ ಪ್ರಶ್ನೆ ಆಗಿತ್ತು. ಆದರೆ ಇಂಥದ್ದೊಂದು ಗಾಸಿಪ್ ಬಲವಾಗಿ ಹಬ್ಬಿದ್ದಂತೂ ಸುಳ್ಳಲ್ಲ. ಅದರಲ್ಲೂ ಈ ಸುದ್ದಿ ಸಲ್ಮಾನ್ ಖಾನ್ ಅವರ ಆಪ್ತ ವಲಯದ ಸ್ನೇಹಿತರಿಗೆ ಮಾತ್ರ ಸಖತ್ ಸಿಟ್ಟು ತರಿಸಿದೆಯಂತೆ!

'ನಾಚಿಕೆ ಆಗಬೇಕು..' ಎಂದ ಸಲ್ಲು ಫ್ರೆಂಡ್ಸ್
'ಇಂಥ ಸುಳ್ಳು ವದಂತಿಗಳನ್ನು ಹಬ್ಬಿಸುವವರಿಗೆ ನಾಚಿಕೆ ಆಗಬೇಕು. ನಟಿ ಪೂಜಾ ಹೆಗ್ಡೆ ಅವರಿಗೆ ಸಲ್ಮಾನ್ ಖಾನ್ ಅವರ ಮಗಳ ವಯಸ್ಸು. ಇಬ್ಬರು ಒಂದೇ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ ಎಂದಮಾತ್ರಕ್ಕೆ, ಅದನ್ನೇ ಈ ರೀತಿ ಪ್ರಚಾರಕ್ಕೆ ಬಳಸಿಕೊಳ್ಳಬಹುದು ಎಂದು ಕೆಲವು ಮೂರ್ಖರು ತಿಳಿದುಕೊಂಡಿದ್ದಾರೆ. ಆದರೆ ಇದು ಮುಜುಗರ ಉಂಟು ಮಾಡುತ್ತದೆ' ಎಂದು ಸಲ್ಮಾನ್ ಖಾನ್ ಸ್ನೇಹಿತರು ಗರಂ ಆಗಿದ್ದಾರೆ ಎಂದು ತಿಳಿದುಬಂದಿದೆ.
ಇಂಥದ್ದೊಂದು ಹುಟ್ಟಿಕೊಳ್ಳಲು ಕಾರಣವಾಗಿದ್ದು ವಿದೇಶಿ ಸೆನ್ಸಾರ್ ಮಂಡಳಿ ಸದಸ್ಯ, ಸಿನಿಮಾ ವಿಮರ್ಶಕ ಎಂದು ಹೇಳಿಕೊಳ್ಳುವ ಉಮೈರ್ ಸಂಧು ಎಂಬಾತ! ಉಮೈರ್ ಸಂಧು ಕಳೆದ ವಾರ ಒಂದು ಟ್ವೀಟ್ ಮಾಡಿದ್ದು, ಅದರಲ್ಲಿ 'ನಟ ಸಲ್ಮಾನ್ ಖಾನ್ ಅವರು ಪೂಜಾ ಹೆಗ್ಡೆಯ ಪ್ರೀತಿಯಲ್ಲಿ ಬಿದ್ದಿದ್ದಾರೆ. ಸಲ್ಮಾನ್ ಪ್ರೊಡಕ್ಷನ್ ಹೌಸ್ನಲ್ಲಿ ಎರಡು ಸಿನಿಮಾಗಳಲ್ಲಿ ನಟಿಸಲು ಪೂಜಾ ಸಹಿ ಮಾಡಿದ್ದಾರೆ. ಇತ್ತೀಚೆಗೆ ಇಬ್ಬರೂ ಈ ಜೋಡಿ ಒಟ್ಟಿಗೆ ಸಮಯ ಕಳೆಯುತ್ತಿದ್ದಾರೆ. ಸಲ್ಮಾನ್ ಆಪ್ತ ಮೂಲಗಳು ಇದನ್ನು ಖಚಿತಪಡಿಸಿವೆ' ಎಂದು ಅವರು ಬರೆದುಕೊಂಡಿದ್ದರು. ಅಲ್ಲಿಂದ ಈ ವದಂತಿಗೆ ಜೀವ ಸಿಕ್ಕಿತ್ತು.
ಸದ್ಯ ಅಂಥ ಯಾವ ಬೆಳವಣಿಗೆಯೂ ನಡೆದಿಲ್ಲ ಎಂಬುದು ಸಲ್ಮಾನ್ ಖಾನ್ ಅವರ ಸ್ನೇಹಿತರ ಮಾತುಗಳಿಂದ ಗೊತ್ತಾಗಿದೆ. ಸದ್ಯ ಪೂಜಾ ಹಿಂದಿ ಮತ್ತು ತೆಲುಗು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಸಲ್ಮಾನ್ ಖಾನ್ ಮತ್ತು ಪೂಜಾ ನಟನೆಯ ‘ಕಿಸಿ ಕಾ ಭಾಯ್ ಕಿಸಿ ಕಿ ಜಾನ್' ಸಿನಿಮಾವು 2023ರ ಏಪ್ರಿಲ್ ಮೂರನೇ ವಾರದಲ್ಲಿ ತೆರೆಗೆ ಬರಲಿದೆ.
Salman Khan Pooja Hegde Dating Gossip Actors Friend Reveals The Truth.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm