ಬ್ರೇಕಿಂಗ್ ನ್ಯೂಸ್
13-12-22 02:35 pm Source: Vijayakarnataka ಸಿನಿಮಾ
ನಟ ಸಲ್ಮಾನ್ ಖಾನ್ ಬಾಲಿವುಡ್ನ ಮೋಸ್ಟ್ ಎಲಿಜಿಬಲ್ ಬ್ಯಾಚುಲರ್ ಅನ್ನೋದು ಎಲ್ಲರಿಗೂ ಗೊತ್ತಿದೆ. ಆಗಾಗ ಅವರ ಲವ್ ಲೈಫ್ ಬಗ್ಗೆ ಒಂದಲ್ಲಾ ಒಂದು ಗಾಸಿಪ್ಗಳು ಬರುತ್ತಿರುತ್ತವೆ. ಸದ್ಯ ಅವರು ‘ಕಿಸಿ ಕಾ ಭಾಯ್ ಕಿಸಿ ಕಿ ಜಾನ್' ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಸಲ್ಲುಗೆ ನಾಯಕಿಯಾಗಿ ಪೂಜಾ ಹೆಗ್ಡೆ ಕಾಣಿಸಿಕೊಂಡಿದ್ದಾರೆ. ಇದೀಗ ಸಲ್ಲು ಮತ್ತು ಪೂಜಾ ಪ್ರೀತಿ ಮಾಡುತ್ತಿದ್ದಾರೆ ಎಂಬ ಗಾಸಿಪ್ ಕೇಳಿಬಂದಿದೆ.
ಈ ಗಾಸಿಪ್ ನಿಜವೇ?
ಸಲ್ಮಾನ್ ಖಾನ್ಗೆ ಈಗ 56 ವರ್ಷ ವಯಸ್ಸು. ಪೂಜಾ ಹೆಗ್ಡೆಗೆ ಈಗ 32 ವರ್ಷ ವಯಸ್ಸು. ಸಲ್ಮಾನ್ ಖಾನ್ ಹೀರೋ ಆಗಿ ಬಣ್ಣ ಹಚ್ಚಿದ್ದಾಗ, ಆಗಿನ್ನೂ ಪೂಜಾ ಹೆಗ್ಡೆ ಹುಟ್ಟಿರಲಿಲ್ಲ. ಇಷ್ಟೊಂದು ವಯಸ್ಸಿನ ಅಂತರವಿರುವ ಇವರ ಮಧ್ಯೆ ಪ್ರೀತಿ ಹುಟ್ಟಿದ್ದಾದರೂ ಹೇಗೆ ಅನ್ನೋದು ನೆಟ್ಟಿಗರ ಪ್ರಶ್ನೆ ಆಗಿತ್ತು. ಆದರೆ ಇಂಥದ್ದೊಂದು ಗಾಸಿಪ್ ಬಲವಾಗಿ ಹಬ್ಬಿದ್ದಂತೂ ಸುಳ್ಳಲ್ಲ. ಅದರಲ್ಲೂ ಈ ಸುದ್ದಿ ಸಲ್ಮಾನ್ ಖಾನ್ ಅವರ ಆಪ್ತ ವಲಯದ ಸ್ನೇಹಿತರಿಗೆ ಮಾತ್ರ ಸಖತ್ ಸಿಟ್ಟು ತರಿಸಿದೆಯಂತೆ!

'ನಾಚಿಕೆ ಆಗಬೇಕು..' ಎಂದ ಸಲ್ಲು ಫ್ರೆಂಡ್ಸ್
'ಇಂಥ ಸುಳ್ಳು ವದಂತಿಗಳನ್ನು ಹಬ್ಬಿಸುವವರಿಗೆ ನಾಚಿಕೆ ಆಗಬೇಕು. ನಟಿ ಪೂಜಾ ಹೆಗ್ಡೆ ಅವರಿಗೆ ಸಲ್ಮಾನ್ ಖಾನ್ ಅವರ ಮಗಳ ವಯಸ್ಸು. ಇಬ್ಬರು ಒಂದೇ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ ಎಂದಮಾತ್ರಕ್ಕೆ, ಅದನ್ನೇ ಈ ರೀತಿ ಪ್ರಚಾರಕ್ಕೆ ಬಳಸಿಕೊಳ್ಳಬಹುದು ಎಂದು ಕೆಲವು ಮೂರ್ಖರು ತಿಳಿದುಕೊಂಡಿದ್ದಾರೆ. ಆದರೆ ಇದು ಮುಜುಗರ ಉಂಟು ಮಾಡುತ್ತದೆ' ಎಂದು ಸಲ್ಮಾನ್ ಖಾನ್ ಸ್ನೇಹಿತರು ಗರಂ ಆಗಿದ್ದಾರೆ ಎಂದು ತಿಳಿದುಬಂದಿದೆ.
ಇಂಥದ್ದೊಂದು ಹುಟ್ಟಿಕೊಳ್ಳಲು ಕಾರಣವಾಗಿದ್ದು ವಿದೇಶಿ ಸೆನ್ಸಾರ್ ಮಂಡಳಿ ಸದಸ್ಯ, ಸಿನಿಮಾ ವಿಮರ್ಶಕ ಎಂದು ಹೇಳಿಕೊಳ್ಳುವ ಉಮೈರ್ ಸಂಧು ಎಂಬಾತ! ಉಮೈರ್ ಸಂಧು ಕಳೆದ ವಾರ ಒಂದು ಟ್ವೀಟ್ ಮಾಡಿದ್ದು, ಅದರಲ್ಲಿ 'ನಟ ಸಲ್ಮಾನ್ ಖಾನ್ ಅವರು ಪೂಜಾ ಹೆಗ್ಡೆಯ ಪ್ರೀತಿಯಲ್ಲಿ ಬಿದ್ದಿದ್ದಾರೆ. ಸಲ್ಮಾನ್ ಪ್ರೊಡಕ್ಷನ್ ಹೌಸ್ನಲ್ಲಿ ಎರಡು ಸಿನಿಮಾಗಳಲ್ಲಿ ನಟಿಸಲು ಪೂಜಾ ಸಹಿ ಮಾಡಿದ್ದಾರೆ. ಇತ್ತೀಚೆಗೆ ಇಬ್ಬರೂ ಈ ಜೋಡಿ ಒಟ್ಟಿಗೆ ಸಮಯ ಕಳೆಯುತ್ತಿದ್ದಾರೆ. ಸಲ್ಮಾನ್ ಆಪ್ತ ಮೂಲಗಳು ಇದನ್ನು ಖಚಿತಪಡಿಸಿವೆ' ಎಂದು ಅವರು ಬರೆದುಕೊಂಡಿದ್ದರು. ಅಲ್ಲಿಂದ ಈ ವದಂತಿಗೆ ಜೀವ ಸಿಕ್ಕಿತ್ತು.
ಸದ್ಯ ಅಂಥ ಯಾವ ಬೆಳವಣಿಗೆಯೂ ನಡೆದಿಲ್ಲ ಎಂಬುದು ಸಲ್ಮಾನ್ ಖಾನ್ ಅವರ ಸ್ನೇಹಿತರ ಮಾತುಗಳಿಂದ ಗೊತ್ತಾಗಿದೆ. ಸದ್ಯ ಪೂಜಾ ಹಿಂದಿ ಮತ್ತು ತೆಲುಗು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಸಲ್ಮಾನ್ ಖಾನ್ ಮತ್ತು ಪೂಜಾ ನಟನೆಯ ‘ಕಿಸಿ ಕಾ ಭಾಯ್ ಕಿಸಿ ಕಿ ಜಾನ್' ಸಿನಿಮಾವು 2023ರ ಏಪ್ರಿಲ್ ಮೂರನೇ ವಾರದಲ್ಲಿ ತೆರೆಗೆ ಬರಲಿದೆ.
Salman Khan Pooja Hegde Dating Gossip Actors Friend Reveals The Truth.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm