ಬ್ರೇಕಿಂಗ್ ನ್ಯೂಸ್
13-12-22 05:59 pm Mangalore Correspondent ಸಿನಿಮಾ
ಮಂಗಳೂರು, ಡಿ.13: ಬಾಲಿವುಡ್ಡಿನಲ್ಲಿ ತ್ರೀ ಈಡಿಯಟ್ಸ್ ಎನ್ನುವ ಕಾಮೆಡಿ ಚಿತ್ರ ಸಿನಿರಸಿಕರ ಮನ ಗೆದ್ದಿತ್ತು. ಅದೇ ಮಾದರಿಯಲ್ಲಿ ಕನ್ನಡ, ತಮಿಳಿನಲ್ಲಿಯೂ ಚಿತ್ರಗಳು ಬಂದಿದ್ದವು. ಇದೀಗ, ಅದೇ ರೀತಿ ಮೂವರು ಹೀರೋಗಳನ್ನು ಬಳಸ್ಕೊಂಡು ತುಳುವಿನಲ್ಲಿ ಲಾಸ್ಟ್ ಬೆಂಚ್ ಹೆಸರಿನಲ್ಲಿ ಚಿತ್ರ ತಯಾರಾಗಿದೆ. ಕಾಲೇಜು ದಿನಗಳನ್ನು ನೆನಪಿಸುವ ಈ ಚಿತ್ರ ಇದೇ ಡಿಸೆಂಬರ್ 16ರಂದು ತೆರೆಗೆ ಬರಲಿದೆ.
ದಿಯಾ ಖ್ಯಾತಿಯ ಪೃಥ್ವಿ ಅಂಬರ್, ರೂಪೇಶ್ ಶೆಟ್ಟಿ, ವಿನೀತ್ ಕುಮಾರ್ ಮುಖ್ಯ ಭೂಮಿಕೆಯಲ್ಲಿದ್ದು, ಈ ಮೂವರು ಪೋಕರಿ ಹುಡುಗರ ಕಾಲೇಜು ದಿನಚರಿ ಆಧರಿಸಿ ಸಿನಿಮಾವನ್ನು ಹೆಣೆಯಲಾಗಿದೆ. ವಿಐಪೀಸ್ ಲಾಸ್ಟ್ ಬೆಂಚ್ ಎಂಬ ಹೆಸರಿನ ಈ ಚಿತ್ರದಲ್ಲಿ ಕಾಮೆಡಿಯ ಜೊತೆಗೆ ಒಳ್ಳೆಯ ಕಥೆಯನ್ನೂ ತೋರಿಸಲಾಗಿದೆ. ತುಳು ಸಿನಿಮಾ ಅಂದರೆ ಕೇವಲ ಕಾಮೆಡಿ ಮಾತ್ರ ಎಂಬ ಟೀಕೆಗೆ ಇಲ್ಲಿ ಕಥೆಯನ್ನೂ ಕೊಡಲಾಗಿದೆ ಎಂದು ನಾಯಕ ನಟರಲ್ಲಿ ಒಬ್ಬರಾಗಿರುವ ವಿನೀತ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ತ್ರೀ ಈಡಿಯಟ್ಸ್ ಚಿತ್ರದ ಪ್ರೇರಣೆ ಅಥವಾ ಅನುಕರಣೆ ಮಾಡಿದ್ದೀರಾ ಎಂಬ ಪ್ರಶ್ನೆಗೆ, ಅಂಥ ಯಾವುದೇ ಅನುಕರಣೆ ಮಾಡಿಲ್ಲ. ಇದು ಸ್ವಂತದ್ದೇ ಕತೆ. ಮೂವರು ಹುಡುಗರ ಕಾಲೇಜು ದಿನಗಳು, ಅಲ್ಲಿ ಆಗುವ ಪೋಕರಿತನಗಳು ಮತ್ತು ಅದರ ಜೊತೆಗೆ ಕಾಮೆಡಿ, ಕತೆ ಇದೆ. ಜನರಿಗೆ ಇಷ್ಟವಾಗುತ್ತೆ ಎಂದು ನಂಬುತ್ತೇವೆ ಎಂದು ಸಿನಿಮಾದ ನಿರ್ದೇಶಕ ಪ್ರಧಾನ್ ಎಂ.ಪಿ. ಹೇಳಿದ್ದಾರೆ. ಚಿತ್ರದಲ್ಲಿ ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ವಿಸ್ಮಯ ವಿನಾಯಕ್, ರವಿ ರಾಮಕುಂಜ, ಪ್ರವೀಣ್ ಮರ್ಕಮೆ, ಆರಾಧ್ಯ ಶೆಟ್ಟಿ, ನಿರೀಕ್ಷಾ ಶೆಟ್ಟಿ, ರೂಪಾ ವರ್ಕಾಡಿ, ಅನಿತಾ, ಐಸಿರಿ ಜೈನ್ ಹೀಗೆ ಬಹು ತಾರಾಗಣ ಇದೆ. ಮೂವರು ಹೀರೋಗಳನ್ನು ಜೊತೆಯಾಗಿಸಿ ತುಳುವಿನಲ್ಲಿ ಚಿತ್ರ ಮಾಡಿದ್ದು ಇದೇ ಮೊದಲು.

ಸಿನಿಮಾಕ್ಕೆ ಉಡುಪಿ ಮೂಲದ ಆಶಿಕಾ ಸುವರ್ಣ ನಿರ್ಮಾಪಕರಾಗಿದ್ದು, ಕಿರಣ್ ಶೆಟ್ಟಿ, ಕಿಶೋರ್ ಮತ್ತು ಮುರಳಿ ಸಹ ನಿರ್ಮಾಣದ ಜವಾಬ್ದಾರಿ ಹೊತ್ತಿದ್ದಾರೆ. ಮೊದಲಿಗೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ 15 ಸೆಂಟರ್ ಗಳಲ್ಲಿ ರಿಲೀಸ್ ಮಾಡುತ್ತಿದ್ದೇವೆ. ಹೊರ ದೇಶದಲ್ಲಿಯೂ ಚಿತ್ರವನ್ನು ಬಿಡುಗಡೆ ಮಾಡುತ್ತೇವೆ. ಈಗಾಗಲೇ ಅದಕ್ಕೂ ತಯಾರಿ ನಡೆದಿದೆ ಎಂದು ಚಿತ್ರದ ವಿತರಣೆ ಮಾಡಲಿರುವ ಸಚಿನ್ ಉಪ್ಪಿನಂಗಡಿ ಹೇಳಿದರು.
College movie Last bench movie to be released on Dec 16.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 04:31 pm
HK News Staffer
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
11-07-26 04:26 pm
HK News Staffer
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
11-07-26 04:28 pm
HK News Staffer
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm