ಬ್ರೇಕಿಂಗ್ ನ್ಯೂಸ್
24-12-22 02:10 pm Source: Vijayakarnataka ಸಿನಿಮಾ
ವರ್ಷದ ಕೊನೆಯ ಹಬ್ಬ ಕ್ರಿಸ್ಮಸ್ಗೆ ತಾರಾ ಲೋಕ ಸಜ್ಜಾಗಿದೆ. ಈ ತಿಂಗಳಿನ ಆರಂಭದಿಂದಲೇ ಈ ಹಬ್ಬದ ವಿವಿಧ ತಯಾರಿಯಲ್ಲಿ ನಿರತರಾಗಿರುವ ಕೆಲವು ನಟ, ನಟಿಯರು ತಮ್ಮದೇ ರೀತಿಯಲ್ಲಿ ಹಬ್ಬ ಆಚರಿಸಲು ನಿರ್ಧರಿಸಿದ್ದಾರೆ. ಕೆಲವರು ತಮ್ಮ ಕ್ರಿಸ್ಮಸ್ ಸಿದ್ಧತೆಯನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದರೆ, ಇನ್ನು ಕೆಲವರು ತಮ್ಮ ಕ್ರಿಸ್ಮಸ್ ಲುಕ್ ಫೋಟೊಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಇನ್ನು ಕೆಲವರು ಕ್ರಿಸ್ಮಸ್ ವೆಕೇಶನ್ಗೆ ಹೋಗಲು ನಿರ್ಧರಿಸಿದ್ದು, ಇನ್ನು ಕೆಲವರು ಹಬ್ಬದ ಮೊದಲೇ ಫ್ಯಾಮಿಲಿ ಗೆಟ್ಟುಗೇದರ್ ಮತ್ತು ಡಿನ್ನರ್ಗಳನ್ನು ಆಯೋಜಿಸಿದ್ದಾರೆ. ವಿವಿಧ ತಾರೆಯರ ಕ್ರಿಸ್ಮಸ್ ತಯಾರಿಯ ಝಲಕ್ ಹೀಗಿದೆ.


ಫೆಸ್ಟಿವಲ್ ವೆಕೇಶನ್
ಕ್ರಿಸ್ಮಸ್ ಸೀಸನ್ ರಜಾ ಸಮಯವೂ ಆಗಿರುವುದರಿಂದ ಕೆಲವು ತಾರೆಯರು ಈ ಸಂದರ್ಭದಲ್ಲಿ ಪ್ರವಾಸ ಹೋಗಿ ಕ್ರಿಸ್ಮಸ್ ಆಚರಿಸುತ್ತಾರೆ. ಈ ನಿಟ್ಟಿನಲ್ಲಿಈಗಾಗಲೇ ನಟಿ ಪ್ರಿಯಾಂಕಾ ಚೋಪ್ರಾ ತಮ್ಮ ಪುತ್ರಿ ಮಾಲತಿ ಜತೆಗೆ ಕ್ರಿಸ್ಮಸ್ ವೆಕೇಶನ್ಗೆ ಹೋಗಿದ್ದಾರೆ. ಈ ಕುರಿತ ಫೋಟೊ ಶೇರ್ ಮಾಡಿರುವ ಅವರು ತಮ್ಮ ಪುಟ್ಟ ಮಗಳ ಮೊದಲ ಕ್ರಿಸ್ಮಸ್ ಹಬ್ಬವನ್ನು ಪ್ರವಾಸ ತಾಣದಲ್ಲಿಎಂಜಾಯ್ ಮಾಡಲಿದ್ದಾರೆ. ಇದೇ ರೀತಿ ನಟ ಹೃತಿಕ್ ರೋಷನ್ ತಮ್ಮ ಗಲ್ರ್ ಫ್ರೆಂಡ್ ಸಾಬಾ ಅಜಾದ್ ಮತ್ತು ಮಕ್ಕಳೊಂದಿಗೆ ಕ್ರಿಸ್ಮಸ್ ವೆಕೇಶನ್ಗೆ ತೆರಳಿದ್ದಾರೆ. ನಟಿ ಸನ್ನಿ ಲಿಯೋನ್ ಕೂಡ ತಮ್ಮ ಕುಟುಂಬದ ಜತೆಗೆ ಕ್ರಿಸ್ಮಸ್ ವೆಕೇಶನ್ ಹೋಗಿದ್ದಾರೆ.


ರೆಡ್ ಲುಕ್
ಕೆಲವು ತಾರೆಯರು ಕ್ರಿಸ್ಮಸ್ಗೆ ಸೂಕ್ತವಾಗುವ ಕೆಂಪು ಬಣ್ಣದ ಉಡುಪುಗಳಲ್ಲಿ ಫೋಟೊಶೂಟ್ ಮಾಡಿಕೊಂಡು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಈ ಮೂಲಕ ತಮ್ಮ ಅಭಿಮಾನಿಗಳಲ್ಲಿಹಬ್ಬದ ಸಂಭ್ರಮ ಮೂಡಿಸಿದ್ದಾರೆ. ನಟಿ ಡಯಾನಾ ಪೆಂಟಿ ಕೆಂಪು ಬಣ್ಣದ ಜೆರ್ಸಿ ಧರಿಸಿ, ಕೂದಲಿಗೆ ಕೆಂಪು ಹೇರ್ ಬ್ಯಾಂಡ್ ಹಾಕಿಕೊಂಡು ಕ್ರಿಸ್ಮಸ್ ಟ್ರೀ ಎದುರು ಫೋಟೊ ತೆಗೆಸಿಕೊಂಡಿದ್ದಾರೆ. ನಟಿ ಪ್ರೀತಿ ಝಿಂಟಾ ತಮ್ಮ ಮನೆಯನ್ನು ಕ್ರಿಸ್ಮಸ್ ಟ್ರೀಯಿಂದ ಅಲಂಕರಿಸಿ ತಾವು ಕೂಡ ಸಾಂತಾಕ್ಲಾಸ್ನ ಕಾಸ್ಟ್ಯೂಮ್ ಧರಿಸಿರುವ ವಿಡಿಯೊ ಶೇರ್ ಮಾಡಿದ್ದಾರೆ. ನಟಿ ಜಾಕ್ವೆಲಿನ್ ಫರ್ನಾಂಡಿಸ್ ಸಾಂತಾ ಕ್ಲಾಸ್ನಂಥ ಉಡುಪು ಧರಿಸಿ ತಮ್ಮ ಅಭಿಮಾನಿಗಳಿಗೆ ಕ್ರಿಸ್ಮಸ್ ಶುಭಾಶಯ ಕೋರಿದ್ದಾರೆ.
ಗೆಟ್ ಟುಗೇದರ್
ಟಾಲಿವುಡ್ ಸ್ಟಾರ್ಗಳಾದ ಅಲ್ಲುಅರ್ಜುನ್ ಮತ್ತು ರಾಮ್ ಚರಣ್ ತೇಜ ಕ್ರಿಸ್ಮಸ್ಗೆ ಪೂರ್ವಭಾವಿಯಾಗಿ ಫ್ಯಾಮಿಲಿ ಗೆಟ್ಟುಗೇದರ್ ಮಾಡಿದ್ದಾರೆ. ತಮ್ಮ ಮನೆಯನ್ನು ಕ್ರಿಸ್ಮಸ್ ಥೀಮ್ನಲ್ಲಿ ಅಲಂಕರಿಸಿರುವ ಅವರ ಕೆಲವು ಕುಟುಂಬ ಸದಸ್ಯರು ಕೆಂಪು ಬಣ್ಣದ ಉಡುಪುಗಳಲ್ಲಿ ಕಂಗೊಳಿಸಿದ್ದಾರೆ. ನಟಿ ರಕುಲ್ ಪ್ರೀತ್ ಮುಂತಾದವರು ಕ್ರಿಸ್ಮಸ್ ಹಬ್ಬದ ತಿನಿಸು ತಯಾರಿಸುತ್ತಿರುವ ವಿಡಿಯೊ ಶೇರ್ ಮಾಡಿದ್ದಾರೆ.
Merry Christmas 2022 Indian Film Industry Artist Celebration.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 09:40 pm
HK News Staffer
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm