ಬ್ರೇಕಿಂಗ್ ನ್ಯೂಸ್
18-01-23 02:03 pm Source: news18 ಸಿನಿಮಾ
ಬಹುಭಾಷಾ ನಟಿ ಅಮಲಾ ಪೌಲ್ಗೆ ಎರ್ನಾಕುಳಂನಲ್ಲಿ ಕಹಿ ಅನುಭವವಾಗಿದೆ. ದೇವಾಲಯದ ಅಧಿಕಾರಿಗಳು ಅವರನ್ನು ದೇವಾಲಯಕ್ಕೆ ಪ್ರವೇಶಿಸದಂತೆ ತಡೆದಿದ್ದಾರೆ. ಇದಕ್ಕೆ ನಟಿ ಪ್ರತಿಕ್ರಿಯಿಸಿದ್ದಾರೆ.ಕೇರಳದ ಎರ್ನಾಕುಳಂನಲ್ಲಿರುವ ತಿರುವೈರಾನಿಕುಲಂ ಮಹಾದೇವ ದೇವಸ್ಥಾನದ ದೇವರ ದರ್ಶನಕ್ಕೆ ಬಂದ ಅಮಲಾ ಪೌಲ್ ಅವರನ್ನು ದೇವಾಲಯದ ಅಧಿಕಾರಿಗಳು ತಡೆದರು. ಅಮಲಾ ಪೌಲ್ ಕ್ರಿಶ್ಚಿಯನ್ ಆಗಿದ್ದರಿಂದ ದೇವಸ್ಥಾನದ ಅಧಿಕಾರಿಗಳು ಅವರಿಗೆ ದೇವಸ್ಥಾನಕ್ಕೆ ಪ್ರವೇಶ ನೀಡಲಿಲ್ಲ.
ಕೇರಳದ ಹಲವು ದೇವಾಲಯಗಳಲ್ಲಿ ಕೇವಲ ಹಿಂದೂಗಳಿಗೆ ಮಾತ್ರ ದೇವಿಯ ದರ್ಶನಕ್ಕೆ ಅವಕಾಶವಿದೆ ಎನ್ನಲಾಗಿದೆ. ಇದೇ ಕಾರಣಕ್ಕೆ ದೇವಿಯ ದರ್ಶನಕ್ಕೆ ಅವಕಾಶ ನಿರಾಕರಿಸಲಾಗಿದೆ ಎಂದು ವರದಿಯಾಗಿದೆ. ಇದಲ್ಲದೆ ಅವರನ್ನು ಹೊರಗಿನಿಂದಲೇ ದೇವರನ್ನು ನೋಡಿ ಹೋಗುವಂತೆ ಹೇಳಲಾಯಿತು. ದೇವಿಯ ದರ್ಶನ ಸಿಗದಿದ್ದರೂ ಸಂತೃಪ್ತಿಯಿಂದ ಮರಳುತ್ತಿದ್ದೇನೆ ಎಂದು ಅಮಲಾ ಪೌಲ್ ದೇವಸ್ಥಾನದ ಸಂದರ್ಶಕರ ನೋಂದಣಿಯಲ್ಲಿ ತಮ್ಮ ನಿರಾಸೆಯನ್ನು ತಿಳಿಸಿದ್ದಾರೆ.

2023ರಲ್ಲೂ ಇದೇನು ಧಾರ್ಮಿಕ ತಾರತಮ್ಯ ಎಂದು ಅಮಲಾ ಪೌಲ್ ಸಿಟ್ಟಿಗೆದ್ದಿದ್ದಾರೆ. ಶೀಘ್ರದಲ್ಲೇ ಈ ಧಾರ್ಮಿಕ ತಾರತಮ್ಯ ದೂರವಾಗಲಿ ಎಂದು ಬಯಸಿದ್ದಾರೆ. ಧರ್ಮದ ಆಧಾರದಲ್ಲಿ ಎಲ್ಲರನ್ನೂ ಸಮಾನವಾಗಿ ಕಾಣುವ ದಿನ ಬರಲಿ ಎಂದು ಬಯಸಿದ್ದಾರೆ ಎಂದರು.

ಅಮಲಾಪಾಲ್ ದರ್ಶನ ನಿರಾಕರಿಸಿದ ನಂತರ ಕೇರಳದ ಎರ್ನಾಕುಳಂ ಮಹಾದೇವ ದೇವಸ್ಥಾನ ಮತ್ತೊಮ್ಮೆ ಸುದ್ದಿಯಾಗಿದೆ. ದೇವಸ್ಥಾನದಲ್ಲಿ ಶಿಷ್ಟಾಚಾರ ಪಾಲಿಸಿದ್ದಾರೆ. ಈ ದೇವಸ್ಥಾನದಲ್ಲಿ ಬೇರೆ ಧರ್ಮದವರಿಗೆ ಪ್ರವೇಶವಿಲ್ಲ ಎನ್ನಲಾಗಿದೆ. ದೇವಸ್ಥಾನಗಳು ಮಾತ್ರವಲ್ಲ ಮಸೀದಿಗಳಲ್ಲಿ ಮಹಿಳೆಯರಿಗೆ ಪ್ರವೇಶವಿಲ್ಲ. ಈ ವಿಚಾರವಾಗಿ ಅಮಲಾ ಪೌಲ್ ಮಾತನಾಡಿದರೆ ಉತ್ತಮ ಎಂದು ಕೆಲ ನೆಟ್ಟಿಗರು ಅಮಲಾ ಪೌಲ್ ಗೆ ಕೌಂಟರ್ ನೀಡುತ್ತಿದ್ದಾರೆ.

ಮದುವೆಯ ನಂತರ ಸಾಮಾನ್ಯವಾಗಿ ಹೀರೋಯಿನ್ ಆಗುವ ಅವಕಾಶಗಳು ಕಡಿಮೆಯಾಗುತ್ತವೆ. ಆದರೆ ಅಮಲಾ ಪೌಲ್ ಅವರಂತಹ ಕೆಲವೇ ನಟಿಯರು ಮದುವೆಯಾಗಿ, ವಿಚ್ಛೇದನದ ನಂತರವೂ ವೃತ್ತಿಜೀವನದಲ್ಲಿ ಬ್ಯುಸಿಯಾಗಿದ್ದಾರೆ.
Religious Discrimination still exists actor Amala Paul claims entry Denied at Kerala Temple.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm