ಬ್ರೇಕಿಂಗ್ ನ್ಯೂಸ್
23-01-23 01:33 pm Source: Hindustantimes ಸಿನಿಮಾ
ಜನವರಿ 26, ಅರ್ಲಿ ಮಾರ್ನಿಂಗ್ ಶೋ ನೋಡಲು ದಚ್ಚು ಫ್ಯಾನ್ಸ್ ಬಹಳ ಥ್ರಿಲ್ ಆಗಿದ್ದಾರೆ. ತಾವು ಬುಕ್ಕಿಂಗ್ ಮಾಡಿರುವ ಟಿಕೆಟ್ಗಳನ್ನು ತಮ್ಮ ಸೋಷಿಯಲ್ ಮೀಡಿಯಾ ಸ್ಟೇಟಸ್ಗಳಲ್ಲಿ ಹಂಚಿಕೊಂಡು ಸಂಭ್ರಮಿಸುತ್ತಿದ್ದಾರೆ. ಕ್ರಾಂತಿ ಚಿತ್ರಕ್ಕೆ 300-600 ರೂಪಾಯಿ ಟಿಕೆಟ್ ಬೆಲೆ ನಿಗದಿಪಡಿಸಲಾಗಿದೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಡಿಂಪಲ್ ಕ್ವೀನ್ ರಚಿತಾ ರಾಮ್ ಅಭಿನಯದ 'ಕ್ರಾಂತಿ' ಸಿನಿಮಾ ಬಿಡುಗಡೆಗೆ ಇನ್ನು ಮೂರು ದಿನಗಳಷ್ಟೇ ಬಾಕಿ ಉಳಿದಿದೆ. 'ರಾಬರ್ಟ್' ಸಿನಿಮಾ ನಂತರ ದರ್ಶನ್ ಅಭಿನಯದ ಹೊಸ ಸಿನಿಮಾ ಬಿಡುಗಡೆ ಆಗಿಲ್ಲವಾದ್ದರಿಂದ ಅಭಿಮಾನಿಗಳು ಕಾತರದಿಂದ 'ಕ್ರಾಂತಿ' ನೋಡಲು ಕಾಯುತ್ತಿದ್ದಾರೆ. ಜನವರಿ 26, ಗಣರಾಜ್ಯೋತ್ಸವ ಕೂಡಾ ಆಗಿರುವುದರಿಂದ ಆ ದಿನ ಅಭಿಮಾನಿಗಳ ಸಂಭ್ರಮ ದುಪ್ಪಟ್ಟಾಗಿದೆ.
'ಕ್ರಾಂತಿ' ಬಿಡುಗಡೆಗೂ ಮುನ್ನವೇ ಭಾರೀ ಸದ್ದು ಮಾಡುತ್ತಿದೆ. ಚಿತ್ರತಂಡವಂತೂ ದೊಡ್ಡ ಮಟ್ಟದಲ್ಲಿ ಪ್ರಮೋಷನ್ ಕೆಲಸ ಶುರು ಮಾಡಿದೆ. ದರ್ಶನ್, ಬಹುತೇಕ ಎಲ್ಲಾ ವಾಹಿನಿಗಳು ಬಹುತೇಕ ಯೂಟ್ಯೂಬ್ ಚಾನೆಲ್ಗಳಿಗೆ ಇಂಟರ್ವ್ಯೂ ಕೊಡುತ್ತಾ ಬಂದಿದ್ದಾರೆ. ಜನವರಿ 22, ಭಾನುವಾರದಿಂದ ಚಿತ್ರಕ್ಕೆ ಅಡ್ವಾನ್ಸ್ ಬುಕ್ಕಿಂಗ್ ಕೂಡಾ ಆರಂಭವಾಗಿದ್ದು ಸಿನಿಮಾ ಮೊದಲ ದಿನವೇ ಭಾರೀ ಸದ್ದು ಮಾಡುವ ಸುಳಿವು ಸಿಕ್ಕಿದೆ. ಏಕೆಂದರೆ ಮೊದಲ ದಿನವೇ 3 ಗಂಟೆಗಳಲ್ಲಿ 25 ಸಾವಿರಕ್ಕೂ ಹೆಚ್ಚು ಟಿಕೆಟ್ ಬುಕ್ಕಿಂಗ್ ಆಗಿದೆ. ಸಂಜೆವರೆಗೂ 1 ಲಕ್ಷದವರೆಗೂ ಟಿಕೆಟ್ ಬುಕ್ಕಿಂಗ್ ಆಗಿದೆ. ಕೆಲವೇ ನಿಮಿಷಗಳಲ್ಲಿ ಬಹುತೇಕ ಕಡೆ ಮಾರ್ನಿಂಗ್ ಶೋಗಳು ಸಂಪೂರ್ಣ ಬುಕ್ಕಿಂಗ್ ಆಗಿವೆ. ಒಟ್ಟಾಗಿ ಮೊದಲ ದಿನವೇ 15 ಗಂಟೆಗಳಲ್ಲಿ 2 ಕೋಟಿ ರೂಪಾಯಿಯಷ್ಟು ಅಡ್ವಾನ್ಸ್ ಬುಕ್ಕಿಂಗ್ ಆಗಿದೆ.
ಜನವರಿ 26, ಮೊದಲ ಶೋ ಬೆಳಗ್ಗೆ 5.50 ಹಾಗೂ ಕೆಲವೆಡೆ 6 ಗಂಟೆಗೆ ಆರಂಭವಾಗಲಿದೆ. ಬೆಂಗಳೂರಿನ ಕೆ.ಜಿ. ರಸ್ತೆಯ ಅನುಪಮಾ ಚಿತ್ರಮಂದಿರ ಹಾಗೂ ಮಾಗಡಿ ರಸ್ತೆಯ ವೀರೇಶ್ ಚಿತ್ರಮಂದಿರ ಸೇರಿದಂತೆ ಕೆಲವೆಡೆ ಈಗಾಗಲೇ ಬೆಳಗಿನ ಶೋ ಸಂಪೂರ್ಣ ಬುಕ್ ಆಗಿದೆ. ಇದೆಲ್ಲವನ್ನೂ ನೋಡುತ್ತಿದ್ದರೆ ಕ್ರಾಂತಿ ಮೊದಲ ದಿನ ಎಷ್ಟು ಸದ್ದು ಮಾಡುವ ಎಲ್ಲಾ ಮುನ್ಸೂಚನೆ ದೊರೆತಿದೆ. 'ಕ್ರಾಂತಿ'ಗೆ ದೊರೆತ ಓಪನಿಂಗ್ ನೋಡಿ ಚಿತ್ರತಂಡ ಕೂಡಾ ಥ್ರಿಲ್ ಆಗಿದೆ. ಅಭಿಮಾನಿಗಳು ಕ್ರಾಂತಿ ಚಿತ್ರದ ಪ್ರೀಮಿಯರ್ ಶೋಗೆ ಕಾಯುತ್ತಿದ್ದಾರೆ. ಆದರೆ ಚಿತ್ರತಂಡ ಪ್ರೀಮಿಯರ್ ಶೋ ಏರ್ಪಡಿಸಿಲ್ಲ. ಜನವರಿ 26, ಅರ್ಲಿ ಮಾರ್ನಿಂಗ್ ಶೋ ನೋಡಲು ದಚ್ಚು ಫ್ಯಾನ್ಸ್ ಬಹಳ ಥ್ರಿಲ್ ಆಗಿದ್ದಾರೆ. ತಾವು ಬುಕ್ಕಿಂಗ್ ಮಾಡಿರುವ ಟಿಕೆಟ್ಗಳನ್ನು ತಮ್ಮ ಸೋಷಿಯಲ್ ಮೀಡಿಯಾ ಸ್ಟೇಟಸ್ಗಳಲ್ಲಿ ಹಂಚಿಕೊಂಡು ಸಂಭ್ರಮಿಸುತ್ತಿದ್ದಾರೆ. ಕ್ರಾಂತಿ ಚಿತ್ರಕ್ಕೆ 300-600 ರೂಪಾಯಿ ಟಿಕೆಟ್ ಬೆಲೆ ನಿಗದಿಪಡಿಸಲಾಗಿದೆ.
'ಕ್ರಾಂತಿ' ಚಿತ್ರವನ್ನು ಮೀಡಿಯಾ ಹೌಸ್ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ಬಿ. ಸುರೇಶ್ ಹಾಗೂ ಶೈಲಜಾ ನಾಗ್ ನಿರ್ಮಾಣ ಮಾಡಿದ್ದಾರೆ. ವಿ. ಹರಿಕೃಷ್ಣ ಕಥೆ ಬರೆದು ನಿರ್ದೇಶಿಸಿದ್ದಾರೆ. ಚಿತ್ರದ ಹಾಡುಗಳಿಗೆ ಹರಿಕೃಷ್ಣ ಅವರದ್ದೇ ಸಂಗೀತ ಇದೆ. ರವಿಚಂದ್ರನ್ ಹಾಗೂ ಸುಮಲತಾ ಕೂಡಾ ಈ ಚಿತ್ರದಲ್ಲಿದ್ದಾರೆ. ಈಗಾಗಲೇ ರಿಲೀಸ್ ಆಗಿರುವ ಹಾಡುಗಳು ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಪುಷ್ಪವತಿ ಹಾಡಿಗೆ ಅಭಿಮಾನಿಗಳು, ಸೆಲೆಬ್ರಿಟಿಗಳು ರೀಲ್ಸ್ ಮಾಡುತ್ತಿದ್ದಾರೆ. ಒಟ್ಟಿನಲ್ಲಿ ಸಿನಿಮಾ ಯಶಸ್ಸಿಗೆ ಚಿತ್ರತಂಡ ಮಾತ್ರವಲ್ಲದೆ ದರ್ಶನ್ ಅಭಿಮಾನಿಗಳು ಕೂಡಾ ದೊಡ್ಡ ಮಟ್ಟದಲ್ಲಿ ಪ್ರಮೋಷನ್ ಮಾಡುತ್ತಿದ್ದಾರೆ.
Darshan starrer Kranti Movie Advance Booking.
20-04-24 03:37 pm
HK News Desk
Hubballi Neha Murder, Accused Mother: ನೇಹಾಳೇ...
20-04-24 02:30 pm
Bhatkal boat: ಭಟ್ಕಳ ; ಗಾಳಿ ಮಳೆಗೆ ಮೀನುಗಾರಿಕಾ ಬ...
20-04-24 12:54 pm
Neha murder hubballi, Father: ಬಿಜೆಪಿ ಬಿಟ್ಟು ಕ...
20-04-24 12:53 pm
Hubbali Murder, Pramod Muthalik; ಹುಬ್ಬಳ್ಳಿ ಕೊ...
19-04-24 11:17 pm
17-04-24 08:42 pm
HK News Desk
Gujarat, Road Accident: ನಿಂತಿದ್ದ ಟ್ರಕ್ಗೆ ಗುದ...
17-04-24 07:07 pm
Dubai, Oman Rain, flood; ಧಾರಾಕಾರ ಮಳೆಗೆ ಕೊಚ್ಚಿ...
17-04-24 12:53 pm
29 Naxalites killed in Kanker encounter, Chha...
16-04-24 07:50 pm
ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ ; ಏಳು ಮಂದಿ ದುರ್...
16-04-24 05:09 pm
20-04-24 12:12 pm
Mangalore Correspondent
Mangalore Yedapadavu accident: ಮಣ್ಣು ಸಾಗಾಟದ ಕ...
19-04-24 10:11 pm
Mangalore accident, Kulur: ಕೋಡಿಕಲ್ ಕ್ರಾಸ್ ನಲ್...
19-04-24 09:55 pm
Mangalore election, 144 section: ಲೋಕಸಭೆ ಚುನಾವ...
19-04-24 08:32 pm
Kalakul, diploma course: ಕಲಾಕುಲ್ ನಾಟಕ ತಂಡದಿಂದ...
19-04-24 05:18 pm
19-04-24 10:25 pm
Mangalore Correspondent
Mangalore Acid Attack, EXAM: ಆ್ಯಸಿಡ್ ದಾಳಿಗೀಡಾ...
19-04-24 09:25 pm
Hubballi student Neha murder: ಹುಬ್ಬಳ್ಳಿ ಕಾಲೇ...
19-04-24 03:43 pm
Gadag Murder news, four killed; ನಗರ ಸಭೆ ಉಪಾಧ್...
19-04-24 09:27 am
Bangalore Double Murder: 'ಕರಿಮಣಿ ಮಾಲೀಕ'ನಿಗೆ ತ...
18-04-24 10:03 pm