ಬ್ರೇಕಿಂಗ್ ನ್ಯೂಸ್
01-02-23 01:42 pm Source: Vijayakarnataka ಸಿನಿಮಾ
ಎಲ್ಲಾ ಸ್ಟಾರ್ಗಳು ಹೊಸತನದ ಕಥೆಗಳತ್ತ ತಮ್ಮ ಚಿತ್ತ ಹರಿಸುತ್ತಿದ್ದಾರೆ. ಕ್ರೇಜಿಸ್ಟಾರ್ ರವಿಚಂದ್ರನ್ ಸಹ ಇದೇ ಹಾದಿಯಲ್ಲಿದ್ದು, ತಮ್ಮ ಎಂದಿನ ಸ್ಟೈಲ್ನ ಸಿನಿಮಾ ಬಿಟ್ಟು ಹೊಸ ನಿರ್ದೇಶಕ ಅನೀಸ್ ಎಂಬುವರ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಸಿನಿಮಾಗೆ 'ಗೌರಿ ಶಂಕರ' ಎಂದು ಹೆಸರಿಡಲಾಗಿದ್ದು, ಇದರಲ್ಲಿ ರವಿಚಂದ್ರನ್ ಇದುವರೆಗೆ ನಿರ್ವಹಿಸದೇ ಇರುವಂತಹ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ತಮಿಳು ಚಿತ್ರರಂಗದಲ್ಲಿ ಕೆಲವು ವರ್ಷಗಳಿಂದ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿರುವ ಅನೀಸ್ಗೆ ಇದು ಮೊದಲ ಸಿನಿಮಾ. ಮೊದಲ ಸಿನಿಮಾದಲ್ಲಿಯೇ ಅವರು ರವಿಚಂದ್ರನ್ನಂಥ ನಟರನ್ನು ಸೇರಿಸಿ ಪ್ರಯೋಗ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಕಾಸ್ಟ್ಯೂಮ್ ಸೇರಿದಂತೆ ಎಲ್ಲ ವಿಚಾರದಲ್ಲಿಯೂ ಪ್ರಯೋಗವೇ ಆಗಿದೆ.

ಮೂರು ಪ್ರಮುಖ ಪಾತ್ರ
'ಗೌರಿ ಶಂಕರ' ಸಿನಿಮಾದಲ್ಲಿ ರವಿಚಂದ್ರನ್, ಅಪೂರ್ವ ಗಂಡ ಹೆಂಡತಿಯಾಗಿ ನಟಿಸುತ್ತಿದ್ದಾರೆ. ಇವರ ಜತೆಗೆ ಒಂದು ಪುಟ್ಟ ಮಗು ಇರುತ್ತದೆ. ಈ ಮೂರೇ ಪಾತ್ರಗಳು ಸಿನಿಮಾದಲ್ಲಿ ಪ್ರಮುಖವಾಗಿರುತ್ತವೆ. ಇದನ್ನು ಬಿಟ್ಟರೆ ಹತ್ತು ಕೋಟಿ ರೂಪಾಯಿ ಬೆಲೆಬಾಳುವ ನಾಯಿ ಸಹ ಪ್ರಮುಖ ಪಾತ್ರದಲ್ಲಿದೆ. ಸಿನಿಮಾದಲ್ಲಿ ಹುಲಿ ಸಹ ನಟಿಸುತ್ತಿದೆ ಎಂದು ಚಿತ್ರತಂಡ ತಿಳಿಸಿದೆ.

ಪೇಂಟರ್ ರವಿಚಂದ್ರನ್
ಈ ಸಿನಿಮಾದಲ್ಲಿ ಕ್ರೇಜಿಸ್ಟಾರ್ ದೇಶ ಕಂಡ ಬಹುದೊಡ್ಡ ಕುಂಚ ಕಲಾವಿದನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಆ ಕಲಾವಿದ ಪತ್ನಿ ಮಗಳ ಜತೆಗೆ ಕಾಡಿಗೆ ಬಂದು ಅಲ್ಲಿ ಸೆಟಲ್ ಆಗಿರುತ್ತಾನೆ. ಈ ಸಮಯದಲ್ಲಿ ನಡೆಯುವ ಗಂಡ ಹೆಂಡತಿ ನಡುವಿನ ಮುನಿಸೇ ಸಿನಿಮಾದ ಕಥೆ. 'ರವಿಚಂದ್ರನ್ ವೃತ್ತಿಜೀವನದಲ್ಲಿಇದೊಂದು ವಿಭಿನ್ನ ಸಿನಿಮಾ. ಈ ರೀತಿಯ ಪಾತ್ರದಲ್ಲಿಅವರು ಯಾವತ್ತೂ ಕಾಣಿಸಿಕೊಂಡಿಲ್ಲ' ಎಂದು ನಿರ್ದೇಶಕ ಅನೀಸ್ ಹೇಳಿದ್ದಾರೆ.
'ಗೌರಿ ಶಂಕರ' ಸಿನಿಮಾದ ಚಿತ್ರೀಕರಣ ದಾಂಡೇಲಿ ಕಾಡಿನಲ್ಲಿ ಸುಮಾರು 15 ದಿನಗಳಿಂದ ನಡೆಯುತ್ತಿದೆ. ಮುಂದಿನ ಶೆಡ್ಯೂಲ್ ಯಲ್ಲಾಪುರ ಕಾಡಿನಲ್ಲಿ ನಡೆಯಲಿದೆ. ಇಡೀ ಸಿನಿಮಾದ ಶೇ. 80ರಷ್ಟು ದೃಶ್ಯಗಳು ಕಾಡಿನಲ್ಲಿ ನಡೆಯಲಿದ್ದು, ನಂತರ ಬೆಂಗಳೂರು ಮತ್ತು ಬ್ಯಾಂಕಾಕ್ನಲ್ಲಿ ಚಿತ್ರೀಕರಣ ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡಿದೆ.
'ಗೌರಿ ಶಂಕರ' ಸಿನಿಮಾದಲ್ಲಿ ರವಿಚಂದ್ರನ್ ಪಾತ್ರವೇ ಹೈಲೈಟ್. ಅವರ ವೃತ್ತಿಬದುಕಿನಲ್ಲಿ ಇದೊಂದು ವಿಭಿನ್ನ ಮತ್ತು ವಿಶಿಷ್ಟ ಸಿನಿಮಾ. ಪ್ರೇಕ್ಷಕರಿಗೂ ಹೊಸ ಅನುಭವ ನೀಡುವಂತಹ ಚಿತ್ರವಿದು ಎಂದಿದ್ದಾರೆ ನಿರ್ದೇಶಕ ಅನೀಸ್.
Crazy Star To Play Lead In Kannada Movie Gowri Shankara Along With Apoorva.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm