ಬ್ರೇಕಿಂಗ್ ನ್ಯೂಸ್
02-02-23 02:23 pm Source: news18 ಸಿನಿಮಾ
ಸ್ವಾತಿ ಮುತ್ತಿನ ಮಳೆ ಹನಿಯೇ ಸಿನಿಮಾ ಹೊರತುಪಡಿಸಿ ರಾಜ್ ಬಿ. ಶೆಟ್ಟಿ ಅವರು ಭರ್ಜರಿಯಾದ ಸಿನಿಮಾ ಒಂದನ್ನು ರೆಡಿ ಮಾಡುತ್ತಿದ್ದಾರೆ. ರಾಜ್ ಬಿ. ಶೆಟ್ಟಿ ಅವರ ಸಿನಿಮಾ ಕೆರಿಯರ್ನಲ್ಲಿಯೇ ಅವರು ಮಾಡುತ್ತಿರುವಂತಹ ಬಿಗ್ ಬಜೆಟ್ ಸಿನಿಮಾ ಇದಾಗಿದೆ. ಹೌದು. ರಾಜ್ ಬಿ. ಶೆಟ್ಟಿ ಅವರು ದೊಡ್ಡಮಟ್ಟದಲ್ಲಿ ಬಂಡವಾಳವನ್ನು ಹಾಕಿ ಈ ಸಿನಿಮಾ ಮಾಡುತ್ತಿದ್ದಾರೆ.
90% ಶೂಟಿಂಗ್ ಕಂಪ್ಲೀಟ್
ಅದ್ಯಾವಾಗ ಶೂಟಿಂಗ್ ಮಾಡಿದ್ರೋ ಗೊತ್ತಿಲ್ಲ. ಈ ಬಿಗ್ ಬಜೆಟ್ ಸಿನಿಮಾದ ಶೇ.90ರಷ್ಟು ಚಿತ್ರೀಕರಣ ಪೂರ್ತಿಯಾಗಿದೆ. ಉಡುಪಿ, ಮಂಗಳೂರು ಸೇರಿ ಸುತ್ತಮುತ್ತಲಿನ ಪ್ರದೇಶದಲ್ಲಿಯೇ ಶೂಟಿಂಗ್ ಕೂಡಾ ಮಾಡಲಾಗಿದೆ.

ಲವ್ ಸ್ಟೋರಿ ಅಲ್ಲ, ಆದ್ರೆ ಇಬ್ಬರು ಹೀರೋಯಿನ್ಸ್ ಇದ್ದಾರೆ
ಈ ಚಿತ್ರ ಖಂಡಿತಾ ಲವ್ ಸ್ಟೋರಿ ಸಿನಿಮಾ ಅಲ್ಲ ಎನ್ನುವ ಮಾಹಿತಿ ಸಿಕ್ಕಿದೆ. ರಾಜ್ ಬಿ. ಶೆಟ್ಟಿ ಅವರ ಸಿನಿಮಾ ಲಿಸ್ಟ್ ತೆಗೆದು ನೋಡಿದರೆ ಅವರು ಮಾಡಿರುವ ಸಿನಿಮಾಗಳ ಕಾನ್ಸೆಪ್ಟ್ ನಿಜಕ್ಕೂ ವಿಭಿನ್ನವಾಗಿದೆ. ಹೊಸತನ ಪ್ರಯೋಗ ಮಾಡುವ ರಾಜ್ ಬಿ. ಶೆಟ್ಟಿ ಅವರ ಚಿತ್ರಗಳಲ್ಲಿ ಕಥೆ, ಸಿನಿಮಾದ ರೀತಿ ಎಲ್ಲವೂ ಡಿಫರೆಂಟಾಗಿರುತ್ತದೆ. ವಾಸ್ತವಕ್ಕೆ ಅತ್ಯಂತ ಹತ್ತಿರದಲ್ಲಿ ನಿಂತು ಸೂಕ್ಷ್ಮ ವಿಚಾರವೊಂದನ್ನು ಎಳೆ ಎಳೆಯಾಗಿ ಪ್ರೇಕ್ಷಕರ ಮುಂದೆ ಬಿಚ್ಚಿಡುವುದರಲ್ಲಿ ರಾಜ್ ಬಿ. ಶೆಟ್ಟಿ ನಿಸ್ಸೀಮರು.
ಈಗ ಈ ಸಿನಿಮಾದಲ್ಲಿ ಇಬ್ಬರು ಹೀರೋಯಿನ್ಸ್ ಇದ್ದಾರೆ. ನಟಿ ಸಂಯುಕ್ತಾ ಹೊರನಾಡು ಅವರು ನಟಿಸುತ್ತಿದ್ದು ಅವರೊಂದಿಗೆ ಮತ್ತೊಬ್ಬ ಹೀರೋಯಿನ್ ಕೂಡಾ ಸಾಥ್ ಕೊಡುತ್ತಿದ್ದಾರೆ. ಆದರೆ ಈ ಸಿನಿಮಾ ಲವ್ ಸ್ಟೋರಿ, ಅಥವಾ ರೊಮ್ಯಾಂಟಿಕ್ ಸಿನಿಮಾ ಅಲ್ಲ.
ಕೊನೆಯ ಶೆಡ್ಯೂಲ್ ಚಿತ್ರೀಕರಣ
ಈಗಾಗಲೇ ಹೇಳಿದಂತೆ ಈ ಸಿನಿಮಾದಲ್ಲಿ ಶೇ.90ರಷ್ಟು ಚಿತ್ರೀಕರಣ ಪೂರ್ತಿಗೊಂಡಿದ್ದು ಇನ್ನು ಕೊನೆಯ ಶೆಡ್ಯೂಲ್ ಮಾತ್ರ ಬಾಕಿ ಇದೆ. ಈ ಸಿನಿಮಾದ ಕೊನೆಯ ಶೆಡ್ಯೂಲ್ ಶೂಟಿಂಗ್ ಆರಂಭವಾಗಿದ್ದು ಇನ್ನೊಂದು ವಾರದೊಳಗೆ ಈ ಬಿಗ್ ಬಜೆಟ್ ಸಿನಿಮಾ ಚಿತ್ರೀಕರಣ ಪೂರ್ತಿಯಾಗಲಿದೆ.
ಬಂಡವಾಳ ಹಾಕಿರೋದು ಯಾರು?
ರಾಜ್ ಬಿ. ಶೆಟ್ಟಿ ಅವರ ಲೈಟರ್ ಬುದ್ಧ ಫಿಲ್ಮ್ಸ್ ಮೂಲಕ ಈ ಸಿನಿಮಾಗೆ ಬಂಡವಾಳ ಹಾಕುತ್ತಿದ್ದಾರೆ. ಅಗಸ್ತ್ಯ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಈ ಸಿನಿಮಾ ಮೂಡಿ ಬರುತ್ತಿದೆ.
Raj B Shetty Big Budget movie already completed 90 percent shooting is not a Love story here is the Exclusive Update.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm