ಬ್ರೇಕಿಂಗ್ ನ್ಯೂಸ್
04-02-23 11:31 am Source: news18 ಸಿನಿಮಾ
ಘೋಸ್ಟ್ ಚಿತ್ರಕ್ಕೆ ವಿಜಯ್ ಸೇತುಪತಿ ಬರ್ತಾರಾ?
ಕನ್ನಡದ ಘೋಸ್ಟ್ ಚಿತ್ರದ ತಾರಾ ಬಳಗದ ವಿಷಯ ಒಂದೊಂದಾಗಿಯೇ ರಿವೀಲ್ ಆಗುತ್ತಿದೆ. ಮೊನ್ನೆ ಮೊನ್ನೆವರೆಗೂ ಅನುಪಮ್ ಖೇರ್ ಆಗಮನ ಸುದ್ದಿ ಇತ್ತು. ಇದರ ಮಧ್ಯ ಕೆಜಿಎಫ್ ಚಿತ್ರದ ಅಮ್ಮನ ಪಾತ್ರಧಾರಿ ಅರ್ಚನಾ ಜೋಯಿಸ್ ಈ ಚಿತ್ರದಲ್ಲಿ ಪತ್ರಕರ್ತೆ ಪಾತ್ರ ಮಾಡಿದ್ದಾರೆ ಅನ್ನೋ ಸುದ್ದಿ ಕೂಡ ಹರಿದಾಡಿದೆ.
ಕನ್ನಡಕ್ಕೆ ವಿಜಯ್ ಸೇತುಪತಿ ಬರೋದು ನಿಜವೇ?
ಘೋಸ್ಟ್ ಚಿತ್ರದಲ್ಲಿ ಶಿವಣ್ಣನ ಜೊತೆಗೆ ಅಭಿನಯಿಸಲು ದೊಡ್ಡ ತಾರಾ ಬಳಗದ ಪ್ಲಾನ್ ಆದಂತಿದೆ. ಮಲೆಯಾಳಂ ನಟ ಜಯರಾಮ್ ಈ ಮೂಲಕ ಕನ್ನಡಕ್ಕೂ ಬಂದು ಹೋಗಿದ್ದಾರೆ. ತಮ್ಮ ಭಾಗದ ಒಂದು ಹಂತದ ಚಿತ್ರೀಕರಣ ಮುಗಿಸಿಕೊಟ್ಟು ಹೋಗಿದ್ದಾರೆ.
ಇದೇ ಚಿತ್ರದ ಮೂಲಕ ಅನುಪಮ್ ಖೇರ್ ಕೂಡ ಮೊದಲ ಬಾರಿಗೆ ಕನ್ನಡಕ್ಕೆ ಬರ್ತಿದ್ದಾರೆ. ಕನ್ನಡಿಗರ ಹೃದಯವನ್ನ ಗೆಲ್ಲೋಕೆ ಅನುಪಮ್ ಖೇರ್ ಸಜ್ಜಾಗುತ್ತಿದ್ದಾರೆ ಅಂತಲೇ ಹೇಳಬಹುದು.

ವಿಜಯ್ ಸೇತುಪತಿ ಜತೆ ಮಾತು-ಕತೆ ಆಗಿದಿಯೇ?
ತಮಿಳು ನಟ ವಿಜಯ್ ಸೇತುಪತಿ ಕನ್ನಡಕ್ಕೆ ಬರೋದು ನಿಜವೇ? ಈಗಾಗಲೇ ಸಿನಿಮಾ ಟೀಮ್ ವಿಜಯ್ ಅವರನ್ನ ಅಪ್ರೋಚ್ ಮಾಡಲಾಗಿದಿಯೇ? ಅಪ್ರೋಚ್ ಮಾಡಿದ್ದರೇ, ವಿಜಯ್ ಸೇತುಪತಿ ಏನಂದ್ರು? ಈ ಎಲ್ಲ ಪ್ರಶ್ನೆಗೆ ಉತ್ತರ ಕೂಡ ಸಿಕ್ಕಿದೆ. ಇದನ್ನ ಯಾರು ಕೊಟ್ಟರು ಗೊತ್ತೇ? ಹೇಳ್ತಿವಿ ನೋಡಿ.

ವಿಜಯ್ ಸೇತುಪತಿ ಆಗಮನದ ಬಗ್ಗೆ ಡೈರೆಕ್ಟರ್ ಶ್ರೀನಿ ಏನಂತಾರೆ?
ಘೋಸ್ಟ್ ಚಿತ್ರದ ಬಗ್ಗೆ ದಿನವೂ ಒಂದಿಲ್ಲ ಒಂದು ಸುದ್ದಿ ಇದ್ದೇ ಇರುತ್ತವೆ. ಅದರಲ್ಲಿ ಈಗ ವಿಜಯ್ ಸೇತುಪತಿ ಆಗಮನದ ವಿಷಯ ಹೆಚ್ಚು ಗಮನ ಸೆಳೆಯುತ್ತಿದೆ.
ಇದರ ಬಗ್ಗೆ ಚಿತ್ರದ ನಿರ್ದೇಶಕ ಶ್ರೀನಿ ಒಂದಷ್ಟು ಅಧಿಕೃತ ಮಾಹಿತಿ ಕೊಟ್ಟಿದ್ದಾರೆ. ವಿಜಯ್ ಸೇತುಪತಿ ಅವರನ್ನ ಕನ್ನಡಕ್ಕೆ ತರುವ ಪ್ರಯತ್ನ ಮಾಡಲಾಗಿದೆ. ಅಪ್ರೋಚ್ ಮಾಡಿರೋದು ಸತ್ಯ. ಆದರೆ ಯಾವುದು ಇನ್ನೂ ಫೈನಲ್ ಆಗಿಲ್ಲ ಎಂದು ನಿರ್ದೇಶಕ ಶ್ರೀನಿ, ನ್ಯೂಸ್-18 ಕನ್ನಡ ಡಿಜಿಟಲ್ಗೆ ತಿಳಿಸಿದ್ದಾರೆ.
ಫೆಬ್ರವರಿ-10 ರಿಂದ ಘೋಸ್ಟ್ ಸಿನಿಮಾ ಶೂಟಿಂಗ್ ಆರಂಭ
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ಘೋಸ್ಟ್ ಚಿತ್ರದ ಚಿತ್ರೀಕರಣ ಮತ್ತೆ ಆರಂಭಗೊಳ್ಳುತ್ತಿದೆ. ಈಗಾಗಲೇ ಎರಡು ಹಂತದ ಚಿತ್ರೀಕರಣವನ್ನ ಡೈರೆಕ್ಟರ್ ಶ್ರೀನಿ ಮುಗಿಸಿದ್ದಾರೆ.
ಮೂರನೇ ಕೊನೆ ಹಂತದ ಶೂಟಿಂಗ್ನ್ನ ಇದೇ ತಿಂಗಳ 10 ರಂದು ಶುರು ಮಾಡುತ್ತಿದ್ದಾರೆ. ಬೆಂಗಳೂರಲ್ಲಿಯೇ ಚಿತ್ರದ ಚಿತ್ರೀಕರಣ ಮಾಡೋ ಯೋಚನೆ ಕೂಡ ಡೈರೆಕ್ಟರ್ ಶ್ರೀನಿ ಮಾಡಿದ್ದಾರೆ. ಚಿತ್ರದ ನಿರ್ಮಾಪಕ ಸಂದೇಶ್ ತಮ್ಮ ಈ ಚಿತ್ರಕ್ಕೆ ಏನೂ ಕೊರತೆ ಆಗದ ರೀತಿಯಲ್ಲಿಯೇ ಡೈರೆಕ್ಟರ್ ಶ್ರೀನಿ ಕಲ್ಪನೆಗೆ ಸಪೋರ್ಟ್ ಮಾಡಿದ್ದಾರೆ.
ಒಟ್ಟಾರೆ, ಘೋಸ್ಟ್ ಸಿನಿಮಾ ಕನ್ನಡದ ಬಹು ನಿರಿಕ್ಷಿತ ಚಿತ್ರವೇ ಆಗಿದೆ. ಇನ್ನುಳಿದಂತೆ ಚಿತ್ರ ತಂಡ ಇತರ ಮಾಹಿತಿಯ್ನ ಹಂತ ಹಂತವಾಗಿಯೇ ಬಿಟ್ಟುಕೊಡುವ ಪ್ಲಾನ್ ಕೂಡ ಮಾಡಿದೆ ಅಂತಲೇ ಹೇಳಬಹುದು.
Kannada Actor Shiva Rajkumar Acted Ghost Movie latest viral News.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm