ಬ್ರೇಕಿಂಗ್ ನ್ಯೂಸ್
08-02-23 01:56 pm Source: news18 ಸಿನಿಮಾ
ಕ್ರಿಯೇಟಿವ್ ಡೈರೆಕ್ಟರ್ ಸುಕುಮಾರ್ ಅವರು ಪುಷ್ಪ ಚಿತ್ರದ ಮುಂದುವರಿದ ಭಾಗವಾಗಿ ಪುಷ್ಪ 2 ಸಿನಿಮಾ ಮಾಡುತ್ತಿದ್ದಾರೆ. ಮೊದಲ ಭಾಗವನ್ನು ಹಿಂದಿಕ್ಕುವಂತೆ ಎರಡನೇ ಭಾಗದ ಬಗ್ಗೆ ವಿಶೇಷ ಕಾಳಜಿ ವಹಿಸಿ ಶೂಟಿಂಗ್ ಮಾಡುತ್ತಿದ್ದಾರೆ. ಈ ಸಿನಿಮಾದಿಂದ ಆಗಾಗ ಬರುತ್ತಿರುವ ಅಪ್ಡೇಟ್ಗಳು ಬನ್ನಿ ಅಭಿಮಾನಿಗಳಲ್ಲಿ ಹುಮ್ಮಸ್ಸು ತುಂಬುತ್ತಿವೆ. ಪುಷ್ಪ ದಿ ರೈಸ್ ಮೊದಲ ಭಾಗದಲ್ಲಿ ಸದ್ದು ಮಾಡಿದ್ದ ಅಲ್ಲು ಅರ್ಜುನ್ ಈಗ ಪುಷ್ಪ ದಿ ರೂಲ್ ಮೂಲಕ ಪ್ರೇಕ್ಷಕರ ಮುಂದೆ ಬರಲಿದ್ದಾರೆ. ಈ ಚಿತ್ರದ ಶೂಟಿಂಗ್ ಹಂತ ಹಂತವಾಗಿ ಪೂರ್ತಿಯಾಗುತ್ತಿದೆ. ಇತ್ತೀಚೆಗಷ್ಟೇ ಹೈದರಾಬಾದ್ನಲ್ಲಿ ಕೆಲವು ಪ್ರಮುಖ ದೃಶ್ಯಗಳನ್ನು ಚಿತ್ರೀಕರಿಸಿದ ಸುಕುಮಾರ್, ಇದೀಗ ವೈಜಾಗ್ ಶೆಡ್ಯೂಲ್ ಅನ್ನು ಕೂಡ ಮುಗಿಸಿದ್ದಾರಂತೆ.
ಇತ್ತೀಚೆಗಷ್ಟೇ ಪುಷ್ಪ 2 ಚಿತ್ರದ ಶೂಟಿಂಗ್ ವೈಜಾಗ್ನಲ್ಲಿ ಆರಂಭವಾಗಿತ್ತು. ಈ ಶೆಡ್ಯೂಲ್ ನಲ್ಲಿ ಚಿತ್ರದ ಹಲವು ಪ್ರಮುಖ ದೃಶ್ಯಗಳ ಜೊತೆಗೆ ಇಂಟ್ರೊ ಸಾಂಗ್ ಅನ್ನು ಅದ್ಧೂರಿಯಾಗಿ ಚಿತ್ರೀಕರಿಸಲಾಗಿದೆ. ಈ ಶೆಡ್ಯೂಲ್ ಮುಗಿಯುತ್ತಿದ್ದಂತೆ ಅಲ್ಲು ಅರ್ಜುನ್ ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಭಾವನಾತ್ಮಕ ಪೋಸ್ಟ್ ಅನ್ನು ಪೋಸ್ಟ್ ಮಾಡಿದ್ದಾರೆ.
ವೈಜಾಗ್ ಬೀಚ್ ದಡಕ್ಕೆ ಬರುತ್ತಿದ್ದಂತೆ ಅಲೆಗಳನ್ನು ನೋಡುತ್ತಿರುವ ಚಿತ್ರವನ್ನು ಅಲ್ಲು ಅರ್ಜುನ್ ಶೇರ್ ಮಾಡಿದ್ದಾರೆ. ಸಮುದ್ರದ ದಡದಲ್ಲಿ ಪ್ರಕೃತಿಯ ಸೊಬಗನ್ನು ಸವಿಯುತ್ತಿರುವುದು ಕಂಡುಬಂದಿದೆ. ಈ ಸಂದರ್ಭದಲ್ಲಿ ಅಲ್ಲು ಅರ್ಜುನ್ ಮಾಡಿರುವ ಕಮೆಂಟ್ ವೈರಲ್ ಆಗಿದೆ. ಅಲ್ಲು ಅರ್ಜುನ್ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ``ಧನ್ಯವಾದ ವೈಜಾಗ್'' ಎಂದು ಪೋಸ್ಟ್ ಅಪ್ಡೇಟ್ ಮಾಡಿದ್ದಾರೆ. ವಿಶಾಖಪಟ್ಟಣಂ ತುಂಬಾ ಸ್ಪೆಷಲ್ ಎಂದು ಹೇಳುವ ಲವ್ ಸಿಂಬಲ್ ಕೂಡ ಹಂಚಿಕೊಂಡಿದ್ದಾರೆ. ಅಲ್ಲು ಅರ್ಜುನ್ ಹಂಚಿಕೊಂಡಿರುವ ಈ ಫೋಟೋಗಳು ವೈರಲ್ ಆಗುತ್ತಿವೆ.
ಪುಷ್ಪ 2 ರ ಮುಂದಿನ ಶೆಡ್ಯೂಲ್ ಹೈದರಾಬಾದ್ ನಲ್ಲಿ ನಡೆಯಲಿದೆ ಎಂದು ವರದಿಯಾಗಿದೆ. ಅಲ್ಲು ವೈಜಾಗ್ ನಿಂದ ಹೈದರಾಬಾದ್ಗೆ ಬರಲಿದ್ದಾರೆ. ಸದ್ಯಕ್ಕೆ ಪ್ಯಾನ್ ಇಂಡಿಯಾ ಇಮೇಜ್ ಎಂಜಾಯ್ ಮಾಡುತ್ತಿರುವ ಅಲ್ಲು ಅರ್ಜುನ್ಗೆ ಪ್ಯಾನ್ ವರ್ಲ್ಡ್ ಕ್ರೇಜ್ ಸಿಗುವಂತೆ ಮಾಡಲು ಸುಕುಮಾರ್ ಪ್ಲಾನ್ ಮಾಡಿದ್ದಾರೆ. ಪುಷ್ಪ 2 ಚಿತ್ರದಲ್ಲಿ ಅಲ್ಲು ಅರ್ಜುನ್ ರೂಲ್ ಪಾರ್ಟ್ ಕಥೆ ಇರಲಿದೆ. ಮೊದಲ ಭಾಗದಲ್ಲಿ ಶ್ರೀವಲ್ಲಿಯಾಗಿ ಕಾಣಿಸಿಕೊಂಡು ಯುವ ಪ್ರೇಕ್ಷಕರ ಮನ ಗೆದ್ದಿದ್ದರು ನಟಿ ರಶ್ಮಿಕಾ ಮಂದಣ್ಣ.
ಪುಷ್ಪ ಚಿತ್ರದಲ್ಲಿ ದಾಕ್ಷಾಯಿಣಿಯಾಗಿ ಮಿಂಚಿದ್ದ ಆ್ಯಂಕರ್ ಅನಸೂಯ ಇನ್ನೂ ಸ್ಟ್ರಾಂಗ್ ಪಾತ್ರದೊಂದಿಗೆ ಪ್ರೇಕ್ಷಕರ ಮುಂದೆ ಬರಲಿದ್ದಾರೆ ಎನ್ನಲಾಗುತ್ತಿದೆ. ಅನಸೂಯಾ ಜೊತೆ ಐಟಂ ಸಾಂಗ್ ಕೂಡ ಪ್ಲಾನ್ ಮಾಡಿರುವುದು ಕುತೂಹಲ ಮೂಡಿಸಿದೆ.
pushpa 2 Team Completes Vizag Schedule Actor Allu Arjun Shares a Post.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm