ಬ್ರೇಕಿಂಗ್ ನ್ಯೂಸ್
08-02-23 01:56 pm Source: news18 ಸಿನಿಮಾ
ಕ್ರಿಯೇಟಿವ್ ಡೈರೆಕ್ಟರ್ ಸುಕುಮಾರ್ ಅವರು ಪುಷ್ಪ ಚಿತ್ರದ ಮುಂದುವರಿದ ಭಾಗವಾಗಿ ಪುಷ್ಪ 2 ಸಿನಿಮಾ ಮಾಡುತ್ತಿದ್ದಾರೆ. ಮೊದಲ ಭಾಗವನ್ನು ಹಿಂದಿಕ್ಕುವಂತೆ ಎರಡನೇ ಭಾಗದ ಬಗ್ಗೆ ವಿಶೇಷ ಕಾಳಜಿ ವಹಿಸಿ ಶೂಟಿಂಗ್ ಮಾಡುತ್ತಿದ್ದಾರೆ. ಈ ಸಿನಿಮಾದಿಂದ ಆಗಾಗ ಬರುತ್ತಿರುವ ಅಪ್ಡೇಟ್ಗಳು ಬನ್ನಿ ಅಭಿಮಾನಿಗಳಲ್ಲಿ ಹುಮ್ಮಸ್ಸು ತುಂಬುತ್ತಿವೆ. ಪುಷ್ಪ ದಿ ರೈಸ್ ಮೊದಲ ಭಾಗದಲ್ಲಿ ಸದ್ದು ಮಾಡಿದ್ದ ಅಲ್ಲು ಅರ್ಜುನ್ ಈಗ ಪುಷ್ಪ ದಿ ರೂಲ್ ಮೂಲಕ ಪ್ರೇಕ್ಷಕರ ಮುಂದೆ ಬರಲಿದ್ದಾರೆ. ಈ ಚಿತ್ರದ ಶೂಟಿಂಗ್ ಹಂತ ಹಂತವಾಗಿ ಪೂರ್ತಿಯಾಗುತ್ತಿದೆ. ಇತ್ತೀಚೆಗಷ್ಟೇ ಹೈದರಾಬಾದ್ನಲ್ಲಿ ಕೆಲವು ಪ್ರಮುಖ ದೃಶ್ಯಗಳನ್ನು ಚಿತ್ರೀಕರಿಸಿದ ಸುಕುಮಾರ್, ಇದೀಗ ವೈಜಾಗ್ ಶೆಡ್ಯೂಲ್ ಅನ್ನು ಕೂಡ ಮುಗಿಸಿದ್ದಾರಂತೆ.



ಇತ್ತೀಚೆಗಷ್ಟೇ ಪುಷ್ಪ 2 ಚಿತ್ರದ ಶೂಟಿಂಗ್ ವೈಜಾಗ್ನಲ್ಲಿ ಆರಂಭವಾಗಿತ್ತು. ಈ ಶೆಡ್ಯೂಲ್ ನಲ್ಲಿ ಚಿತ್ರದ ಹಲವು ಪ್ರಮುಖ ದೃಶ್ಯಗಳ ಜೊತೆಗೆ ಇಂಟ್ರೊ ಸಾಂಗ್ ಅನ್ನು ಅದ್ಧೂರಿಯಾಗಿ ಚಿತ್ರೀಕರಿಸಲಾಗಿದೆ. ಈ ಶೆಡ್ಯೂಲ್ ಮುಗಿಯುತ್ತಿದ್ದಂತೆ ಅಲ್ಲು ಅರ್ಜುನ್ ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಭಾವನಾತ್ಮಕ ಪೋಸ್ಟ್ ಅನ್ನು ಪೋಸ್ಟ್ ಮಾಡಿದ್ದಾರೆ.
ವೈಜಾಗ್ ಬೀಚ್ ದಡಕ್ಕೆ ಬರುತ್ತಿದ್ದಂತೆ ಅಲೆಗಳನ್ನು ನೋಡುತ್ತಿರುವ ಚಿತ್ರವನ್ನು ಅಲ್ಲು ಅರ್ಜುನ್ ಶೇರ್ ಮಾಡಿದ್ದಾರೆ. ಸಮುದ್ರದ ದಡದಲ್ಲಿ ಪ್ರಕೃತಿಯ ಸೊಬಗನ್ನು ಸವಿಯುತ್ತಿರುವುದು ಕಂಡುಬಂದಿದೆ. ಈ ಸಂದರ್ಭದಲ್ಲಿ ಅಲ್ಲು ಅರ್ಜುನ್ ಮಾಡಿರುವ ಕಮೆಂಟ್ ವೈರಲ್ ಆಗಿದೆ. ಅಲ್ಲು ಅರ್ಜುನ್ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ``ಧನ್ಯವಾದ ವೈಜಾಗ್'' ಎಂದು ಪೋಸ್ಟ್ ಅಪ್ಡೇಟ್ ಮಾಡಿದ್ದಾರೆ. ವಿಶಾಖಪಟ್ಟಣಂ ತುಂಬಾ ಸ್ಪೆಷಲ್ ಎಂದು ಹೇಳುವ ಲವ್ ಸಿಂಬಲ್ ಕೂಡ ಹಂಚಿಕೊಂಡಿದ್ದಾರೆ. ಅಲ್ಲು ಅರ್ಜುನ್ ಹಂಚಿಕೊಂಡಿರುವ ಈ ಫೋಟೋಗಳು ವೈರಲ್ ಆಗುತ್ತಿವೆ.


ಪುಷ್ಪ 2 ರ ಮುಂದಿನ ಶೆಡ್ಯೂಲ್ ಹೈದರಾಬಾದ್ ನಲ್ಲಿ ನಡೆಯಲಿದೆ ಎಂದು ವರದಿಯಾಗಿದೆ. ಅಲ್ಲು ವೈಜಾಗ್ ನಿಂದ ಹೈದರಾಬಾದ್ಗೆ ಬರಲಿದ್ದಾರೆ. ಸದ್ಯಕ್ಕೆ ಪ್ಯಾನ್ ಇಂಡಿಯಾ ಇಮೇಜ್ ಎಂಜಾಯ್ ಮಾಡುತ್ತಿರುವ ಅಲ್ಲು ಅರ್ಜುನ್ಗೆ ಪ್ಯಾನ್ ವರ್ಲ್ಡ್ ಕ್ರೇಜ್ ಸಿಗುವಂತೆ ಮಾಡಲು ಸುಕುಮಾರ್ ಪ್ಲಾನ್ ಮಾಡಿದ್ದಾರೆ. ಪುಷ್ಪ 2 ಚಿತ್ರದಲ್ಲಿ ಅಲ್ಲು ಅರ್ಜುನ್ ರೂಲ್ ಪಾರ್ಟ್ ಕಥೆ ಇರಲಿದೆ. ಮೊದಲ ಭಾಗದಲ್ಲಿ ಶ್ರೀವಲ್ಲಿಯಾಗಿ ಕಾಣಿಸಿಕೊಂಡು ಯುವ ಪ್ರೇಕ್ಷಕರ ಮನ ಗೆದ್ದಿದ್ದರು ನಟಿ ರಶ್ಮಿಕಾ ಮಂದಣ್ಣ.
ಪುಷ್ಪ ಚಿತ್ರದಲ್ಲಿ ದಾಕ್ಷಾಯಿಣಿಯಾಗಿ ಮಿಂಚಿದ್ದ ಆ್ಯಂಕರ್ ಅನಸೂಯ ಇನ್ನೂ ಸ್ಟ್ರಾಂಗ್ ಪಾತ್ರದೊಂದಿಗೆ ಪ್ರೇಕ್ಷಕರ ಮುಂದೆ ಬರಲಿದ್ದಾರೆ ಎನ್ನಲಾಗುತ್ತಿದೆ. ಅನಸೂಯಾ ಜೊತೆ ಐಟಂ ಸಾಂಗ್ ಕೂಡ ಪ್ಲಾನ್ ಮಾಡಿರುವುದು ಕುತೂಹಲ ಮೂಡಿಸಿದೆ.
pushpa 2 Team Completes Vizag Schedule Actor Allu Arjun Shares a Post.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm