ಬ್ರೇಕಿಂಗ್ ನ್ಯೂಸ್
08-02-23 01:56 pm Source: news18 ಸಿನಿಮಾ
ಕ್ರಿಯೇಟಿವ್ ಡೈರೆಕ್ಟರ್ ಸುಕುಮಾರ್ ಅವರು ಪುಷ್ಪ ಚಿತ್ರದ ಮುಂದುವರಿದ ಭಾಗವಾಗಿ ಪುಷ್ಪ 2 ಸಿನಿಮಾ ಮಾಡುತ್ತಿದ್ದಾರೆ. ಮೊದಲ ಭಾಗವನ್ನು ಹಿಂದಿಕ್ಕುವಂತೆ ಎರಡನೇ ಭಾಗದ ಬಗ್ಗೆ ವಿಶೇಷ ಕಾಳಜಿ ವಹಿಸಿ ಶೂಟಿಂಗ್ ಮಾಡುತ್ತಿದ್ದಾರೆ. ಈ ಸಿನಿಮಾದಿಂದ ಆಗಾಗ ಬರುತ್ತಿರುವ ಅಪ್ಡೇಟ್ಗಳು ಬನ್ನಿ ಅಭಿಮಾನಿಗಳಲ್ಲಿ ಹುಮ್ಮಸ್ಸು ತುಂಬುತ್ತಿವೆ. ಪುಷ್ಪ ದಿ ರೈಸ್ ಮೊದಲ ಭಾಗದಲ್ಲಿ ಸದ್ದು ಮಾಡಿದ್ದ ಅಲ್ಲು ಅರ್ಜುನ್ ಈಗ ಪುಷ್ಪ ದಿ ರೂಲ್ ಮೂಲಕ ಪ್ರೇಕ್ಷಕರ ಮುಂದೆ ಬರಲಿದ್ದಾರೆ. ಈ ಚಿತ್ರದ ಶೂಟಿಂಗ್ ಹಂತ ಹಂತವಾಗಿ ಪೂರ್ತಿಯಾಗುತ್ತಿದೆ. ಇತ್ತೀಚೆಗಷ್ಟೇ ಹೈದರಾಬಾದ್ನಲ್ಲಿ ಕೆಲವು ಪ್ರಮುಖ ದೃಶ್ಯಗಳನ್ನು ಚಿತ್ರೀಕರಿಸಿದ ಸುಕುಮಾರ್, ಇದೀಗ ವೈಜಾಗ್ ಶೆಡ್ಯೂಲ್ ಅನ್ನು ಕೂಡ ಮುಗಿಸಿದ್ದಾರಂತೆ.
ಇತ್ತೀಚೆಗಷ್ಟೇ ಪುಷ್ಪ 2 ಚಿತ್ರದ ಶೂಟಿಂಗ್ ವೈಜಾಗ್ನಲ್ಲಿ ಆರಂಭವಾಗಿತ್ತು. ಈ ಶೆಡ್ಯೂಲ್ ನಲ್ಲಿ ಚಿತ್ರದ ಹಲವು ಪ್ರಮುಖ ದೃಶ್ಯಗಳ ಜೊತೆಗೆ ಇಂಟ್ರೊ ಸಾಂಗ್ ಅನ್ನು ಅದ್ಧೂರಿಯಾಗಿ ಚಿತ್ರೀಕರಿಸಲಾಗಿದೆ. ಈ ಶೆಡ್ಯೂಲ್ ಮುಗಿಯುತ್ತಿದ್ದಂತೆ ಅಲ್ಲು ಅರ್ಜುನ್ ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಭಾವನಾತ್ಮಕ ಪೋಸ್ಟ್ ಅನ್ನು ಪೋಸ್ಟ್ ಮಾಡಿದ್ದಾರೆ.
ವೈಜಾಗ್ ಬೀಚ್ ದಡಕ್ಕೆ ಬರುತ್ತಿದ್ದಂತೆ ಅಲೆಗಳನ್ನು ನೋಡುತ್ತಿರುವ ಚಿತ್ರವನ್ನು ಅಲ್ಲು ಅರ್ಜುನ್ ಶೇರ್ ಮಾಡಿದ್ದಾರೆ. ಸಮುದ್ರದ ದಡದಲ್ಲಿ ಪ್ರಕೃತಿಯ ಸೊಬಗನ್ನು ಸವಿಯುತ್ತಿರುವುದು ಕಂಡುಬಂದಿದೆ. ಈ ಸಂದರ್ಭದಲ್ಲಿ ಅಲ್ಲು ಅರ್ಜುನ್ ಮಾಡಿರುವ ಕಮೆಂಟ್ ವೈರಲ್ ಆಗಿದೆ. ಅಲ್ಲು ಅರ್ಜುನ್ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ``ಧನ್ಯವಾದ ವೈಜಾಗ್'' ಎಂದು ಪೋಸ್ಟ್ ಅಪ್ಡೇಟ್ ಮಾಡಿದ್ದಾರೆ. ವಿಶಾಖಪಟ್ಟಣಂ ತುಂಬಾ ಸ್ಪೆಷಲ್ ಎಂದು ಹೇಳುವ ಲವ್ ಸಿಂಬಲ್ ಕೂಡ ಹಂಚಿಕೊಂಡಿದ್ದಾರೆ. ಅಲ್ಲು ಅರ್ಜುನ್ ಹಂಚಿಕೊಂಡಿರುವ ಈ ಫೋಟೋಗಳು ವೈರಲ್ ಆಗುತ್ತಿವೆ.
ಪುಷ್ಪ 2 ರ ಮುಂದಿನ ಶೆಡ್ಯೂಲ್ ಹೈದರಾಬಾದ್ ನಲ್ಲಿ ನಡೆಯಲಿದೆ ಎಂದು ವರದಿಯಾಗಿದೆ. ಅಲ್ಲು ವೈಜಾಗ್ ನಿಂದ ಹೈದರಾಬಾದ್ಗೆ ಬರಲಿದ್ದಾರೆ. ಸದ್ಯಕ್ಕೆ ಪ್ಯಾನ್ ಇಂಡಿಯಾ ಇಮೇಜ್ ಎಂಜಾಯ್ ಮಾಡುತ್ತಿರುವ ಅಲ್ಲು ಅರ್ಜುನ್ಗೆ ಪ್ಯಾನ್ ವರ್ಲ್ಡ್ ಕ್ರೇಜ್ ಸಿಗುವಂತೆ ಮಾಡಲು ಸುಕುಮಾರ್ ಪ್ಲಾನ್ ಮಾಡಿದ್ದಾರೆ. ಪುಷ್ಪ 2 ಚಿತ್ರದಲ್ಲಿ ಅಲ್ಲು ಅರ್ಜುನ್ ರೂಲ್ ಪಾರ್ಟ್ ಕಥೆ ಇರಲಿದೆ. ಮೊದಲ ಭಾಗದಲ್ಲಿ ಶ್ರೀವಲ್ಲಿಯಾಗಿ ಕಾಣಿಸಿಕೊಂಡು ಯುವ ಪ್ರೇಕ್ಷಕರ ಮನ ಗೆದ್ದಿದ್ದರು ನಟಿ ರಶ್ಮಿಕಾ ಮಂದಣ್ಣ.
ಪುಷ್ಪ ಚಿತ್ರದಲ್ಲಿ ದಾಕ್ಷಾಯಿಣಿಯಾಗಿ ಮಿಂಚಿದ್ದ ಆ್ಯಂಕರ್ ಅನಸೂಯ ಇನ್ನೂ ಸ್ಟ್ರಾಂಗ್ ಪಾತ್ರದೊಂದಿಗೆ ಪ್ರೇಕ್ಷಕರ ಮುಂದೆ ಬರಲಿದ್ದಾರೆ ಎನ್ನಲಾಗುತ್ತಿದೆ. ಅನಸೂಯಾ ಜೊತೆ ಐಟಂ ಸಾಂಗ್ ಕೂಡ ಪ್ಲಾನ್ ಮಾಡಿರುವುದು ಕುತೂಹಲ ಮೂಡಿಸಿದೆ.
pushpa 2 Team Completes Vizag Schedule Actor Allu Arjun Shares a Post.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
04-09-25 11:07 pm
Mangalore Correspondent
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm