ಬ್ರೇಕಿಂಗ್ ನ್ಯೂಸ್
09-02-23 12:39 pm Source: news18 ಸಿನಿಮಾ
ಮದಗಜ ಸಿನಿಮಾ ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ ಅವರಿಗೆ ಬಿಡಿಎ ನೋಟಿಸ್ ಕೊಟ್ಟಿದೆ. HSR ಲೇಔಟ್ನ 3ನೇ ಸೆಕ್ಟರ್ನಲ್ಲಿರುವ ಬಿಡಿಎನ 6 ನಿವೇಶನವನ್ನು ನಿರ್ಮಾಪಕ ಉಮಾಪತಿ ಒತ್ತುವರಿ ಮಾಡಿಕೊಂಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಸ್ಯಾಂಡಲ್ವುಡ್ ನಿರ್ಮಾಪಕ ಉಮಾಪತಿ ಶ್ರೀನಿವಾಸ್ಗೌಡ ವಿರುದ್ಧ ಬಿಡಿಎ ಸೈಟ್ ಒತ್ತುವರಿ ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಬಿಡಿಎ ನೋಟಿಸ್ ಕೂಡಾ ಜಾರಿ ಮಾಡಿದೆ. 8 ದಿನಗಳ ಒಳಗೆ ಈ ನೋಟಿಸ್ಗೆ ಉತ್ತರಿಸುವಂತೆ ಸೂಚನೆ ಕೊಡಲಾಗಿದೆ.
ಎಚ್ಎಸ್ಆರ್ ಲೇ ಔಟ್ನ 3ನೇ ಸೆಕ್ಟರ್ನಲ್ಲಿರುವ ಬಿಡಿಎನ 6 ನಿವೇಶನ ಜಾಗ 1,545 ಚದರ ಮೀಟರ್ ವಿಸ್ತೀರ್ಣ ಇದೆ. ಈಗ ಮಾಡಿರುವ ಒತ್ತುವರಿ ತೆರವು ಮಾಡುವಂತೆ ಸೂಚಿಸಲಾಗಿದೆ. ಒತ್ತುವರಿ ಮಾಡಿರುವ ನಿವೇಶನ ತೆರವು ಮಾಡಲು ಅನುಮತಿ ಕೊಡಬೇಕು ಎಂದು ಬಿಡಿಎ ಆಯುಕ್ತರಿಗೆ ಇಂಜಿನಿಯರ್ ದಾಖಲೆ ರವಾನಿಸಿದ್ದರು. ಒತ್ತುವರಿ ತೆರವು ಮಾಡುವ ಮುನ್ನ ಉಮಾಪತಿಗೆ ನೋಟೀಸ್ ನೀಡಲಾಗಿದೆ.


ಒತ್ತುವರಿ ಮಾಡಿಕೊಂಡಿರುವ ಜಾಗ ನಿಮಗೆ ಸಂಬಂಧಿಸಿದ್ದು ಎಂಬುದನ್ನು ಸಾಬೀತುಪಡಿಸುವ ದಾಖಲೆ ನೀಡುವಂತೆ ಉಮಾಪತಿಗೆ ಸೂಚಿಸಲಾಗಿದೆ. ಫೆ.15ರ ಒಳಗೆ ದಾಖಲೆ ಸಲ್ಲಿಕೆ ಮಾಡದೆ ಹೋದಲ್ಲಿ ತೆರವು ಕಾರ್ಯಾಚರಣೆ ನಡೆಯಲಿದೆ. ಉಮಾಪತಿ ಅವರು ಸುದೀಪ್ ಅಭಿನಯದ ಹೆಬ್ಬುಲಿ ಚಿತ್ರಕ್ಕೆ ಬಂಡವಾಳ ಹೂಡಿದ್ದರು. ಕಳೆದ ವರ್ಷ ರಿಲೀಸ್ ಆದ ‘ಮದಗಜ’ ಚಿತ್ರವನ್ನು ಅವರು ನಿರ್ಮಾಣ ಮಾಡಿದ್ದರು. ಉಮಾಪತಿ ನೋಟಿಸ್ಗೆ ಸ್ಪಷ್ಟ ಉತ್ತರ ನೀಡದೆ ಇದ್ದಲ್ಲಿ ನಿವೇಶನ ತೆರವು ಕಾರ್ಯಾಚರಣೆ ನಡೆಯುವುದು ಪಕ್ಕಾ ಆಗಿದೆ. ಅವರು ಈ ಕುರಿತು ಇನ್ನೂ ಪ್ರತಿಕ್ರಿಯಿಸಿಲ್ಲ.
BDA Site Illegal Acquiring Sandalwood Producer Umapathy Gowda gets Notice.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm