ಬ್ರೇಕಿಂಗ್ ನ್ಯೂಸ್
09-02-23 12:39 pm Source: news18 ಸಿನಿಮಾ
ಮದಗಜ ಸಿನಿಮಾ ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ ಅವರಿಗೆ ಬಿಡಿಎ ನೋಟಿಸ್ ಕೊಟ್ಟಿದೆ. HSR ಲೇಔಟ್ನ 3ನೇ ಸೆಕ್ಟರ್ನಲ್ಲಿರುವ ಬಿಡಿಎನ 6 ನಿವೇಶನವನ್ನು ನಿರ್ಮಾಪಕ ಉಮಾಪತಿ ಒತ್ತುವರಿ ಮಾಡಿಕೊಂಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಸ್ಯಾಂಡಲ್ವುಡ್ ನಿರ್ಮಾಪಕ ಉಮಾಪತಿ ಶ್ರೀನಿವಾಸ್ಗೌಡ ವಿರುದ್ಧ ಬಿಡಿಎ ಸೈಟ್ ಒತ್ತುವರಿ ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಬಿಡಿಎ ನೋಟಿಸ್ ಕೂಡಾ ಜಾರಿ ಮಾಡಿದೆ. 8 ದಿನಗಳ ಒಳಗೆ ಈ ನೋಟಿಸ್ಗೆ ಉತ್ತರಿಸುವಂತೆ ಸೂಚನೆ ಕೊಡಲಾಗಿದೆ.
ಎಚ್ಎಸ್ಆರ್ ಲೇ ಔಟ್ನ 3ನೇ ಸೆಕ್ಟರ್ನಲ್ಲಿರುವ ಬಿಡಿಎನ 6 ನಿವೇಶನ ಜಾಗ 1,545 ಚದರ ಮೀಟರ್ ವಿಸ್ತೀರ್ಣ ಇದೆ. ಈಗ ಮಾಡಿರುವ ಒತ್ತುವರಿ ತೆರವು ಮಾಡುವಂತೆ ಸೂಚಿಸಲಾಗಿದೆ. ಒತ್ತುವರಿ ಮಾಡಿರುವ ನಿವೇಶನ ತೆರವು ಮಾಡಲು ಅನುಮತಿ ಕೊಡಬೇಕು ಎಂದು ಬಿಡಿಎ ಆಯುಕ್ತರಿಗೆ ಇಂಜಿನಿಯರ್ ದಾಖಲೆ ರವಾನಿಸಿದ್ದರು. ಒತ್ತುವರಿ ತೆರವು ಮಾಡುವ ಮುನ್ನ ಉಮಾಪತಿಗೆ ನೋಟೀಸ್ ನೀಡಲಾಗಿದೆ.
ಒತ್ತುವರಿ ಮಾಡಿಕೊಂಡಿರುವ ಜಾಗ ನಿಮಗೆ ಸಂಬಂಧಿಸಿದ್ದು ಎಂಬುದನ್ನು ಸಾಬೀತುಪಡಿಸುವ ದಾಖಲೆ ನೀಡುವಂತೆ ಉಮಾಪತಿಗೆ ಸೂಚಿಸಲಾಗಿದೆ. ಫೆ.15ರ ಒಳಗೆ ದಾಖಲೆ ಸಲ್ಲಿಕೆ ಮಾಡದೆ ಹೋದಲ್ಲಿ ತೆರವು ಕಾರ್ಯಾಚರಣೆ ನಡೆಯಲಿದೆ. ಉಮಾಪತಿ ಅವರು ಸುದೀಪ್ ಅಭಿನಯದ ಹೆಬ್ಬುಲಿ ಚಿತ್ರಕ್ಕೆ ಬಂಡವಾಳ ಹೂಡಿದ್ದರು. ಕಳೆದ ವರ್ಷ ರಿಲೀಸ್ ಆದ ‘ಮದಗಜ’ ಚಿತ್ರವನ್ನು ಅವರು ನಿರ್ಮಾಣ ಮಾಡಿದ್ದರು. ಉಮಾಪತಿ ನೋಟಿಸ್ಗೆ ಸ್ಪಷ್ಟ ಉತ್ತರ ನೀಡದೆ ಇದ್ದಲ್ಲಿ ನಿವೇಶನ ತೆರವು ಕಾರ್ಯಾಚರಣೆ ನಡೆಯುವುದು ಪಕ್ಕಾ ಆಗಿದೆ. ಅವರು ಈ ಕುರಿತು ಇನ್ನೂ ಪ್ರತಿಕ್ರಿಯಿಸಿಲ್ಲ.
BDA Site Illegal Acquiring Sandalwood Producer Umapathy Gowda gets Notice.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm