ಬ್ರೇಕಿಂಗ್ ನ್ಯೂಸ್
09-02-23 12:39 pm Source: news18 ಸಿನಿಮಾ
ಮದಗಜ ಸಿನಿಮಾ ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ ಅವರಿಗೆ ಬಿಡಿಎ ನೋಟಿಸ್ ಕೊಟ್ಟಿದೆ. HSR ಲೇಔಟ್ನ 3ನೇ ಸೆಕ್ಟರ್ನಲ್ಲಿರುವ ಬಿಡಿಎನ 6 ನಿವೇಶನವನ್ನು ನಿರ್ಮಾಪಕ ಉಮಾಪತಿ ಒತ್ತುವರಿ ಮಾಡಿಕೊಂಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಸ್ಯಾಂಡಲ್ವುಡ್ ನಿರ್ಮಾಪಕ ಉಮಾಪತಿ ಶ್ರೀನಿವಾಸ್ಗೌಡ ವಿರುದ್ಧ ಬಿಡಿಎ ಸೈಟ್ ಒತ್ತುವರಿ ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಬಿಡಿಎ ನೋಟಿಸ್ ಕೂಡಾ ಜಾರಿ ಮಾಡಿದೆ. 8 ದಿನಗಳ ಒಳಗೆ ಈ ನೋಟಿಸ್ಗೆ ಉತ್ತರಿಸುವಂತೆ ಸೂಚನೆ ಕೊಡಲಾಗಿದೆ.
ಎಚ್ಎಸ್ಆರ್ ಲೇ ಔಟ್ನ 3ನೇ ಸೆಕ್ಟರ್ನಲ್ಲಿರುವ ಬಿಡಿಎನ 6 ನಿವೇಶನ ಜಾಗ 1,545 ಚದರ ಮೀಟರ್ ವಿಸ್ತೀರ್ಣ ಇದೆ. ಈಗ ಮಾಡಿರುವ ಒತ್ತುವರಿ ತೆರವು ಮಾಡುವಂತೆ ಸೂಚಿಸಲಾಗಿದೆ. ಒತ್ತುವರಿ ಮಾಡಿರುವ ನಿವೇಶನ ತೆರವು ಮಾಡಲು ಅನುಮತಿ ಕೊಡಬೇಕು ಎಂದು ಬಿಡಿಎ ಆಯುಕ್ತರಿಗೆ ಇಂಜಿನಿಯರ್ ದಾಖಲೆ ರವಾನಿಸಿದ್ದರು. ಒತ್ತುವರಿ ತೆರವು ಮಾಡುವ ಮುನ್ನ ಉಮಾಪತಿಗೆ ನೋಟೀಸ್ ನೀಡಲಾಗಿದೆ.


ಒತ್ತುವರಿ ಮಾಡಿಕೊಂಡಿರುವ ಜಾಗ ನಿಮಗೆ ಸಂಬಂಧಿಸಿದ್ದು ಎಂಬುದನ್ನು ಸಾಬೀತುಪಡಿಸುವ ದಾಖಲೆ ನೀಡುವಂತೆ ಉಮಾಪತಿಗೆ ಸೂಚಿಸಲಾಗಿದೆ. ಫೆ.15ರ ಒಳಗೆ ದಾಖಲೆ ಸಲ್ಲಿಕೆ ಮಾಡದೆ ಹೋದಲ್ಲಿ ತೆರವು ಕಾರ್ಯಾಚರಣೆ ನಡೆಯಲಿದೆ. ಉಮಾಪತಿ ಅವರು ಸುದೀಪ್ ಅಭಿನಯದ ಹೆಬ್ಬುಲಿ ಚಿತ್ರಕ್ಕೆ ಬಂಡವಾಳ ಹೂಡಿದ್ದರು. ಕಳೆದ ವರ್ಷ ರಿಲೀಸ್ ಆದ ‘ಮದಗಜ’ ಚಿತ್ರವನ್ನು ಅವರು ನಿರ್ಮಾಣ ಮಾಡಿದ್ದರು. ಉಮಾಪತಿ ನೋಟಿಸ್ಗೆ ಸ್ಪಷ್ಟ ಉತ್ತರ ನೀಡದೆ ಇದ್ದಲ್ಲಿ ನಿವೇಶನ ತೆರವು ಕಾರ್ಯಾಚರಣೆ ನಡೆಯುವುದು ಪಕ್ಕಾ ಆಗಿದೆ. ಅವರು ಈ ಕುರಿತು ಇನ್ನೂ ಪ್ರತಿಕ್ರಿಯಿಸಿಲ್ಲ.
BDA Site Illegal Acquiring Sandalwood Producer Umapathy Gowda gets Notice.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 04:31 pm
HK News Staffer
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 04:28 pm
HK News Staffer
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm