ಬ್ರೇಕಿಂಗ್ ನ್ಯೂಸ್
21-02-23 01:18 pm Source: news18 ಸಿನಿಮಾ
ಸೋಮವಾರ ನಡೆದ ದಾದಾಸಾಹೇಬ್ ಫಾಲ್ಕೆ ಇಂಟರ್ ನ್ಯಾಶನಲ್ ಫಿಲ್ಮ್ ಫೆಸ್ಟಿವಲ್ ಅವಾರ್ಡ್ಸ್ 2023 ರಲ್ಲಿ ಕಾಂತಾರ ನಟ ರಿಷಬ್ ಶೆಟ್ಟಿ ಅತ್ಯಂತ ಭರವಸೆಯ ನಟ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಫೆ.20ರಂದು ಮುಂಬೈನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ರಿಷಬ್ ಅವರು ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ಆ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ರೆಡ್ ಕಾರ್ಪೆಟ್ ಮೇಲೆ ವಿನಮ್ರವಾಗಿ ಪ್ರಶಸ್ತಿಯೊಂದಿಗೆ ಪೋಸ್ ನೀಡುತ್ತಿರುವಾಗ, ಕಪ್ಪು ಅಂಗಿ ಮತ್ತು ಬಿಳಿ ಪಂಚೆಯೊಂದಿಗೆ ಎಲ್ಲರ ಗಮನ ಸೆಳೆದಿದ್ದಾರೆ. ನಮ್ಮ ಸಂಸ್ಕೃತಿಯನ್ನು ಎಲ್ಲ ಕಡೆಗಳಲ್ಲಿ ಪಸರಿಸುತ್ತಿದ್ದಾರೆ ಎಂದು ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ಕಾಂತಾರ ನಟ ರಿಷಬ್ ಶೆಟ್ಟಿ ತಮ್ಮ ಗೆಲುವನ್ನು ಕನ್ನಡದ ನಟ ಪುನೀತ್ ರಾಜ್ಕುಮಾರ್ ಮತ್ತು ನಿರ್ದೇಶಕ ಎಸ್ಕೆ ಭಗವಾನ್ ಅವರಿಗೆ ಅರ್ಪಿಸಿದ್ದಾರೆ.



ನನ್ನ ಮೇಲೆ ವಿಶ್ವಾಸವಿಟ್ಟು ಅವಕಾಶ ನೀಡಿದ ಹೊಂಬಾಳೆ ಫಿಲಂಸ್ ಮತ್ತು ವಿಜಯ್ ಕಿರಂಗಂದೂರು ಅವರಿಗೆ ನಾನು ಆಭಾರಿಯಾಗಿದ್ದೇನೆ. ಒಟ್ಟಿಗೆ ಸೇರಿಕೊಂಡು ಹೆಚ್ಚು ಉತ್ತಮ ಚಿತ್ರಗಳನ್ನು ಮಾಡಬೇಕು ಎಂದು ರಿಷಬ್ ಅವರು ಹೇಳಿದ್ದಾರೆ. ಕಾಂತಾರದ ತಂಡಕ್ಕೆ ಧನ್ಯವಾದ ಹೇಳಿದ್ದಾರೆ. ಅಲ್ಲದೇ ನನ್ನ ಜೀವನದ ಪಿಲ್ಲರ್ ನನ್ನ ಪತ್ನಿ ಪ್ರಗತಿ ಶೆಟ್ಟಿಗೆ ನಾನು ಸದಾ ಅಭಾರಿಯಾಗಿರುತ್ತೇನೆ. ನನ್ನ ಎಲ್ಲಾ ಕನಸುಗಳ ಜೊತೆ ಅವರು ಇರುತ್ತಾರೆ ಎಂದಿದ್ದಾರೆ.



ಯಾರು ನನ್ನ ಸಿನಿಮಾ ನೋಡಿ ಬೆಂಬಲಿಸಿದ್ದೀರೋ ಅವರೆಲ್ಲರಿಗೂ ನಾನು ತುಂಬು ಹೃದಯದಿಂದ ಧನ್ಯವಾದ ಅರ್ಪಿಸುತ್ತೇನೆ ಎಂದಿದ್ದಾರೆ. ರಿಷಬ್ ಶೆಟ್ಟಿ ಅವರು ಪಂಚೆ ಉಟ್ಟು ಪ್ರಶಸ್ತಿ ಸ್ವೀಕರಿಸಿದ್ದು ಜನರಿಗೆ ತುಂಬಾ ಇಷ್ಟ ಆಗಿದೆ. ಆ ಫೋಟೋಗಳು ಎಲ್ಲೆಡೆ ವೈರಲ್ ಆಗ್ತಾ ಇವೆ.
Actor Rishabh Shetty dedicates Dadasaheb Phalke award to Puneeth Rajkumar and sk Bhagavan.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am