ಬ್ರೇಕಿಂಗ್ ನ್ಯೂಸ್
21-02-23 01:18 pm Source: news18 ಸಿನಿಮಾ
ಸೋಮವಾರ ನಡೆದ ದಾದಾಸಾಹೇಬ್ ಫಾಲ್ಕೆ ಇಂಟರ್ ನ್ಯಾಶನಲ್ ಫಿಲ್ಮ್ ಫೆಸ್ಟಿವಲ್ ಅವಾರ್ಡ್ಸ್ 2023 ರಲ್ಲಿ ಕಾಂತಾರ ನಟ ರಿಷಬ್ ಶೆಟ್ಟಿ ಅತ್ಯಂತ ಭರವಸೆಯ ನಟ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಫೆ.20ರಂದು ಮುಂಬೈನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ರಿಷಬ್ ಅವರು ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ಆ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ರೆಡ್ ಕಾರ್ಪೆಟ್ ಮೇಲೆ ವಿನಮ್ರವಾಗಿ ಪ್ರಶಸ್ತಿಯೊಂದಿಗೆ ಪೋಸ್ ನೀಡುತ್ತಿರುವಾಗ, ಕಪ್ಪು ಅಂಗಿ ಮತ್ತು ಬಿಳಿ ಪಂಚೆಯೊಂದಿಗೆ ಎಲ್ಲರ ಗಮನ ಸೆಳೆದಿದ್ದಾರೆ. ನಮ್ಮ ಸಂಸ್ಕೃತಿಯನ್ನು ಎಲ್ಲ ಕಡೆಗಳಲ್ಲಿ ಪಸರಿಸುತ್ತಿದ್ದಾರೆ ಎಂದು ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ಕಾಂತಾರ ನಟ ರಿಷಬ್ ಶೆಟ್ಟಿ ತಮ್ಮ ಗೆಲುವನ್ನು ಕನ್ನಡದ ನಟ ಪುನೀತ್ ರಾಜ್ಕುಮಾರ್ ಮತ್ತು ನಿರ್ದೇಶಕ ಎಸ್ಕೆ ಭಗವಾನ್ ಅವರಿಗೆ ಅರ್ಪಿಸಿದ್ದಾರೆ.



ನನ್ನ ಮೇಲೆ ವಿಶ್ವಾಸವಿಟ್ಟು ಅವಕಾಶ ನೀಡಿದ ಹೊಂಬಾಳೆ ಫಿಲಂಸ್ ಮತ್ತು ವಿಜಯ್ ಕಿರಂಗಂದೂರು ಅವರಿಗೆ ನಾನು ಆಭಾರಿಯಾಗಿದ್ದೇನೆ. ಒಟ್ಟಿಗೆ ಸೇರಿಕೊಂಡು ಹೆಚ್ಚು ಉತ್ತಮ ಚಿತ್ರಗಳನ್ನು ಮಾಡಬೇಕು ಎಂದು ರಿಷಬ್ ಅವರು ಹೇಳಿದ್ದಾರೆ. ಕಾಂತಾರದ ತಂಡಕ್ಕೆ ಧನ್ಯವಾದ ಹೇಳಿದ್ದಾರೆ. ಅಲ್ಲದೇ ನನ್ನ ಜೀವನದ ಪಿಲ್ಲರ್ ನನ್ನ ಪತ್ನಿ ಪ್ರಗತಿ ಶೆಟ್ಟಿಗೆ ನಾನು ಸದಾ ಅಭಾರಿಯಾಗಿರುತ್ತೇನೆ. ನನ್ನ ಎಲ್ಲಾ ಕನಸುಗಳ ಜೊತೆ ಅವರು ಇರುತ್ತಾರೆ ಎಂದಿದ್ದಾರೆ.



ಯಾರು ನನ್ನ ಸಿನಿಮಾ ನೋಡಿ ಬೆಂಬಲಿಸಿದ್ದೀರೋ ಅವರೆಲ್ಲರಿಗೂ ನಾನು ತುಂಬು ಹೃದಯದಿಂದ ಧನ್ಯವಾದ ಅರ್ಪಿಸುತ್ತೇನೆ ಎಂದಿದ್ದಾರೆ. ರಿಷಬ್ ಶೆಟ್ಟಿ ಅವರು ಪಂಚೆ ಉಟ್ಟು ಪ್ರಶಸ್ತಿ ಸ್ವೀಕರಿಸಿದ್ದು ಜನರಿಗೆ ತುಂಬಾ ಇಷ್ಟ ಆಗಿದೆ. ಆ ಫೋಟೋಗಳು ಎಲ್ಲೆಡೆ ವೈರಲ್ ಆಗ್ತಾ ಇವೆ.
Actor Rishabh Shetty dedicates Dadasaheb Phalke award to Puneeth Rajkumar and sk Bhagavan.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm