ಬ್ರೇಕಿಂಗ್ ನ್ಯೂಸ್
28-02-23 01:11 pm Source: news18 ಸಿನಿಮಾ
ಕನ್ನಡದ ಕಬ್ಜ ಖದರ್ ಊರೆಲ್ಲ ಖಬರ್!
ಕಬ್ಜ ಸಿನಿಮಾದ ಅದ್ದೂರಿತನ ಕೇವಲ ಪ್ರಚಾರದಲ್ಲಿದೆ ಅನ್ಕೋಬೇಡಿ. ಆರ್. ಚಂದ್ರು ಒಳ್ಳೆ ಕಥೆ ಮೂಲಕ ಪ್ಯಾನ್ ಇಂಡಿಯಾಗೆ ಕಾಲಿಡುತ್ತಿದ್ದಾರೆ. ಸುಮ್ನೆ ಏನೂ ಇಲ್ಲದೇ ಯಾರಾದರೂ ಚಿತ್ರವನ್ನ ವಿತರಿಸೋಕೆ ಸಾಧ್ಯವೇ ಇಲ್ಲ ಬಿಡಿ.
ಸಿನಿಮಾ ಮಂದಿಯ ಲೆಕ್ಕಾಚಾರದ ದೊಡ್ಡಮಟ್ಟದಲ್ಲಿಯೇ ಇರುತ್ತದೆ. ಸಿನಿಮಾಗೆ ಕೋಟಿ ಕೋಟಿ ದುಡ್ಡು ಹಾಕ್ತಿದ್ದೇವೆ ಅಂದ್ರೆ, ಹೀರೋ ಯಾರು? ಚಿತ್ರದಲ್ಲಿ ಕಂಟೆಂಟ್ ಮಾಸಾ? ಕ್ಲಾಸಾ? ಹೀಗೆ ಎಲ್ಲವನ್ನೂ ಅಳೆದು ತೂಗಿ ಸಿನಿಮಾ ತೆಗೆದುಕೊಳ್ತಾರೆ.

ಕಬ್ಜ ಚಿತ್ರದ ಕನಸು ಕಂಡ ಚಂದ್ರುಗೆ ಸಾಥ್ ಕೊಟ್ಟವರಾರು?
ಕಬ್ಜ ಚಿತ್ರ ಈ ವಿಷಯದಲ್ಲಿ ಈಗಾಗಲೇ ಪಾಸ್ ಆಗಿದೆ. ಡೈರೆಕ್ಟರ್ ಆರ್. ಚಂದ್ರು ಶ್ರಮದ ಫಲ ಈಗ ಎಲ್ಲೆಡೆ ಪ್ರಚಾರ ಪಡೆಯುತ್ತಿದೆ. ಸಂಗೀತ ನಿರ್ದೇಶಕ ರವಿ ಬಸ್ರೂರು ಮತ್ತು ಕಲಾ ನಿರ್ದೇಶಕ ಶಿವಕುಮಾರ್ ಅವರ ಕೆಲಸ ಇಲ್ಲಿ ಹೆಚ್ಚು ಮೆಚ್ಚುಗೆ ಪಡೆದಿದೆ.
ರಿಯಲ್ ಸ್ಟಾರ್ ಉಪೇಂದ್ರ ಈ ಬಗ್ಗೆ ಮೊನ್ನೆ ಶೀಡ್ಲಘಟ್ಟದಲ್ಲಿ ನಡೆದ ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ಈ ವಿಷಯವನ್ನ ಹೇಳಿಕೊಂಡಿದ್ದಾರೆ.

ಕಬ್ಜ ಟೀಸರ್ ಒಂದು ಲೆಕ್ಕ-ಟ್ರೈಲರ್ ಬೇರೆನೆ ಒಂದು ಲೆಕ್ಕ!
ಕಬ್ಜ ಸಿನಿಮಾ ಒಂದು ರೀತಿಯಲ್ಲಿ ಬೇರೆ ಲೆವಲ್ನ ಸಿನಿಮಾ ಅನ್ನುವ ಅಭಿಪ್ರಾಯವನ್ನ ಹಾಡುಗಳು ಈಗಾಗಲೇ ಮೂಡಿಸಿವೆ. ರಿಯಲ್ ಸ್ಟಾರ್ ಉಪ್ಪಿಯ ಜನ್ಮ ದಿನಕ್ಕೆ ಬಿಟ್ಟಿದ್ದ ಟೀಸರ್ ಅಷ್ಟೇನೂ ಒಳ್ಳೆ ಅಭಿಪ್ರಾಯ ಪಡೆದಿರಲಿಲ್ಲ.
ಇದಾದ್ಮೇಲೆ ಆರ್. ಚಂದ್ರು ತಮ್ಮ ಈ ಚಿತ್ರದ ಟ್ರೈಲರ್ ರಿಲೀಸ್ಗೆ ಪಕ್ಕಾ ಪ್ಲಾನ್ ಮಾಡಿಕೊಂಡಿದ್ದಾರೆ. ಈ ಟ್ರೈಲರ್ ರಿಲೀಸ್ಗೆ ಮುಂಬೈ ನಗರಿಯನ್ನ ಸೆಲೆಕ್ಟ್ ಮಾಡಿಕೊಂಡಿದ್ದಾರೆ.

ಮುಂಬೈ ನಗರಿಯಲ್ಲಿ ಕಬ್ಜ ಚಿತ್ರದ ದೊಡ್ಡ ಹವಾ
ಈ ಮೊದಲೇ ಹೇಳಿದಂತೆ, ಹೈದ್ರಾಬಾದ್, ಚೆನ್ನೈ, ತವರೂರು ಶೀಡ್ಲಘಟ್ಟ ಈಗ ಮುಂಬೈಯಲ್ಲಿ ಒಂದು ಪಕ್ಕಾ ಪ್ಲಾನ್ ಮಾಡಿಕೊಂಡಿದ್ದಾರೆ. ಈ ಒಂದು ಪ್ರಚಾರದ ಕೆಲಸಕ್ಕೆ ದಿನವೂ ಫಿಕ್ಸ್ ಆಗಿದೆ.
ಮಾರ್ಚ್-02 ರಂದು ಮುಂಬೈಯಲ್ಲಿ ಕಬ್ಜ ಚಿತ್ರದ ಟ್ರೈಲರ್ ರಿಲೀಸ್ ಆಗುತ್ತಿದೆ. ವಿಶೇಷವಾಗಿ ಈ ಒಂದು ಪ್ರಚಾರದಲ್ಲಿ ಕಬ್ಜ ಚಿತ್ರದ ಇಡೀ ಸ್ಟಾರ್ ಕ್ಯಾಸ್ಟ್ ಹಾಜರಾಗಿರುತ್ತದೆ.

ದೊಡ್ಡಮಟ್ಟದಲ್ಲಿ ಕಬ್ಜ ಟ್ರೈಲರ್ ರಿಲೀಸ್
ನಿರ್ಮಾಪಕ-ನಿರ್ದೇಶಕ ಆರ್. ಚಂದ್ರು ಹಾಗೂ ಮುಂಬೈ ಚಿತ್ರ ವಿತರಣಾ ಸಂಸ್ಥೆ ಜಂಟಿಯಾಗಿಯೇ ಈ ಒಂದು ದೊಡ್ಡ ಇವೆಂಟ್ ಪ್ಲಾನ್ ಮಾಡಿದೆ. ಮಾರ್ಚ್-17ರ ಮುಂಚೆ ಏನೆಲ್ಲ ಸಾಧ್ಯವೋ ಎಲ್ಲ ರೀತಿಯ ಇವೆಂಟ್ಗಳನ್ನ ಪ್ರಚಾರದ ಕೆಲಸಗಳನ್ನ ಆರ್.ಚಂದ್ರು ಮಾಡುತ್ತಿದ್ದಾರೆ.
ಪವರ್ ಸ್ಟಾರ್ ಪುನೀತ ಜನ್ಮ ದಿನ ಮಾರ್ಚ್-17 ರಂದು ತಮ್ಮ ಈ ಚಿತ್ರವನ್ನ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಮಾಡುತ್ತಿದ್ದಾರೆ. ಕನ್ನಡದ ಕಬ್ಜ ಮತ್ತೊಂದು ಭರವಸೆಯ ಸಿನಿಮಾ ಆಗಿದೆ. ಕಾಂತಾರದ ಬಳಿಕ ಕಬ್ಜ, ಮಾರ್ಟಿನ್ ಸಿನಿಮಾಗಳು ಹೊಸ ಭರವಸೆಯನ್ನ ಮೂಡಿಸಿವೆ.
kannada Kabzaa movie new updates about trailer release.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm