ಬ್ರೇಕಿಂಗ್ ನ್ಯೂಸ್
01-03-23 02:03 pm Source: news18 ಸಿನಿಮಾ
ಮುಂಬೈಯಲ್ಲಿ ದಾದಾ ಸಾಹೇಬ್ ಪಾಲ್ಕೆ ಅಕಾಡೆಮಿ ಪ್ರಶಸ್ತಿ ಪಡೆದು ಬಂದ ರಿಷಬ್ ಶೆಟ್ಟಿ, ಏರ್ಪೋರ್ಟ್ನಲ್ಲಿಯೇ ಮಾಧ್ಯಮಕ್ಕೂ ಮಾತನಾಡಿದ್ದರು. ಪ್ರಶಸ್ತಿ ಕುರಿತು ಹೇಳಿಕೊಂಡಿದ್ದರು. ಹೀಗೆ ದಿಢೀರನೆ ಮಾಧ್ಯಮವನ್ನ ವಿಮಾನ ನಿಲ್ದಾಣದಲ್ಲಿಯೇ ಮಾತನಾಡಿಸಿ ರಿಷಬ್ ಶೆಟ್ಟಿ ಹೋಗಿದ್ದು ಬೇರೆ ಎಲ್ಲೋ ಅಲ್ಲ. ತಮ್ಮ ಕಾಂತಾರ ಪ್ರಿಕ್ವೆಲ್ ಚಿತ್ರದ ಕೆಲಸದಲ್ಲಿ ತಲ್ಲೀನರಾಗಲು.
ಹೌದು, ರಿಷಬ್ ಶೆಟ್ಟಿ ಎಂದಿನಂತೆ ತಮ್ಮ ಕೆಲಸ ಮುಂದುವರೆಸಿದ್ದಾರೆ. ಯಾವುದೇ ರೀತಿಯ ಬೇರೆ ವಿಷಯಗಳನ್ನ ತಲೆಗೆ ಹಚ್ಚಿಕೊಳ್ಳದೇ ಧ್ಯಾನಸ್ಥ ಸ್ಥಿತಿಯಲ್ಲಿ ಕಾಂತಾರ ಪ್ರಿಕ್ವೆಲ್ ಕೆತ್ತಲು ಕುಳಿತಿದ್ದಾರೆ. ಆದರೆ ರಿಷಬ್ ಶೆಟ್ರಿಗೆ ಇನ್ನೂ ಒಂದು ಒತ್ತಡ ಇದ್ದೇ ಇದೆ. ಅದು ಗೆಲುವು, ಜನರ ನಿರೀಕ್ಷೆಯನ್ನ ಹುಸಿಗೊಳಿಸದೇ ಇರೋವಂತೆ ಕಥೆ ಮಾಡಬೇಕು ಅನ್ನುವ ಒತ್ತಡ.

ಕಾಂತಾರ ಚಿತ್ರವನ್ನ ಮೀರಿಸೋ ಚಿತ್ರ ಮಾಡೋ ಚಾಲೆಂಜ್!
ನಿಜ, ಕಾಂತಾರ ಚಿತ್ರಕ್ಕೆ ಸಾಮಾನ್ಯ ಗೆಲುವು ಸಿಕ್ಕಿಲ್ಲ. ನಿರೀಕ್ಷೆ ಮೀರಿ ಸಿಕ್ಕ ಗೆಲುವನ್ನ ಯಾರು ಬಿಡೋದಿಲ್ಲ. ಅದೇ ರೀತಿ ರಿಷಬ್ ಶೆಟ್ರು ಕಾಂತಾರ ಚಿತ್ರಕ್ಕಿಂತಲೂ ಹೆಚ್ಚಿನದ್ದೇನೋ ಮಾಡಬೇಕಿದೆ. ಅದಕ್ಕಾಗಿಯೇ ಶ್ರಮ ಪಡಲೇಬೇಕಿದೆ.
ಒತ್ತಡದಲ್ಲಿ ಏನು ಹುಟ್ಟುತ್ತದೆಯೋ ಏನೋ. ಆದರೆ ಪ್ರೀಕ್ವೆಲ್ ಇರಲಿ ಸೀಕ್ವೆಲ್ ಇರಲಿ, ಹಿಟ್ ಆಗಿರೋದು ಕಡಿಮೆ. ಹಾಗಂತ ಸೋಲಿದೆ ಅಂತ ಹೇಳೋದು ಸರಿ ಅಲ್ಲ. ಆಪ್ತಮಿತ್ರ ಚಿತ್ರ ಗೆದ್ಮೇಲೆ ಡೈರೆಕ್ಟರ್ ವಾಸು ಆಪ್ತರಕ್ಷಕ ಚಿತ್ರವನ್ನ ಗೆಲ್ಲಿಸಿ ತೋರಿಸಿದ್ರು.

ಕನ್ನಡದ ಕಾಂತಾರ ಪ್ರಿಕ್ವಲ್ಗೆ ಭಾರೀ ಬಜೆಟ್
ಅದೇ ಒತ್ತಡದಲ್ಲಿಯೆ ರಿಷಬ್ ಶೆಟ್ರು ಈಗ ಕೆಲಸ ಮಾಡುತ್ತಿದ್ದಾರೆ. ಕಾಂತಾರ ಚಿತ್ರದ ಪ್ರಿಕ್ವೆಲ್ ಸಿನಿಮಾದ ಬಜೆಟ್ ಹೆಚ್ಚಿದೆ ಅನ್ನುವ ಮಾಹಿತಿನೂ ಹರಿದಾಡುತ್ತಿದೆ. ಕಾಂತಾರ ಚಿತ್ರದಲ್ಲಿದ್ದ ಕಲಾವಿದರೆಲ್ಲ ಪ್ರೀಕ್ವೆಲ್ನಲ್ಲಿ ಇರ್ತಾರೆ ಅಂತಲೂ ಹೇಳೋಕೆ ಅಗೋದಿಲ್ಲ. ಪ್ರೀಕ್ವೆಲ್ನಲ್ಲಿ ಹೊಸ ಕಲಾವಿದರ ಎಂಟ್ರಿ ಆಗೋ ಸಾಧ್ಯತೆ ಇದೆ.
ಕಾಂತಾರ ಪ್ರಿಕ್ವೆಲ್ ಚಿತ್ರೀಕರಣ ಯಾವಾಗ?
ಇನ್ನು ರಿಷಬ್ ಶೆಟ್ರು ತಮ್ಮ ಈ ಸ್ಕ್ರಿಪ್ಟ್ ವರ್ಕ್ನ್ನ ಜೂನ್ ಇಲ್ಲವೇ ಜುಲೈ ಹೊತ್ತಿಗೆ ಪೂರ್ಣಗೊಳಿಸಲಿದ್ದಾರೆ. ಸ್ಕ್ರಿಪ್ಟ್ ವರ್ಕ್ ಪಕ್ಕಾ ಆದ್ಮೇಲೆ ಆಗಸ್ಟ್ ಹೊತ್ತಿಗೆ ಕಾಂತಾರ ಪ್ರಿಕ್ವೆಲ್ ಚಿತ್ರೀಕರಣ ಶುರು ಮಾಡೋ ಸಾಧ್ಯತೆ ಕೂಡ ಇದೆ.
ಆದರೆ ಕಾಂತಾರ ಪ್ರಿಕ್ವೆಲ್ ಸಿನಿಮಾ 2023 ರಲ್ಲಿ ಶೂಟಿಂಗ್ ಮುಗಿಸಿಕೊಳ್ಳುತ್ತದೆ. ಮುಂದಿನ ವರ್ಷ 2024 ಕ್ಕೇನೆ ತೆರೆಗೆ ಬರೋ ಚಾನ್ಸಸ್ ಇದೆ ಅನ್ನೋ ಮಾಹಿತಿ ಕೂಡ ಈಗ ಹರಿದಾಡುತ್ತಿದೆ.
ಇದರ ಬೆನ್ನಲ್ಲಿಯೇ ಒಂದು ಕುತೂಹಲ ಕೂಡ ಇದೆ. ಕಾಂತಾರ ಚಿತ್ರ ಅದ್ಭುತವಾಗಿಯೇ ಇತ್ತು. ಕಾಂತಾರ ಪ್ರಿಕ್ವೆಲ್ ನಲ್ಲಿ ಏನೆಲ್ಲ ಇರುತ್ತದೆ. ಕಾಂತಾರ ಪ್ರಿಕ್ವೆಲ್ನಲ್ಲಿ ರಿಷಬ್ ಹೇಗೆ ಕಾಣಿಸುತ್ತಾರೆ. ಸಪ್ತಮಿ ಗೌಡ ಈ ಚಿತ್ರದಲ್ಲೂ ಇರ್ತಾರಾ? ಈ ಎಲ್ಲ ಪ್ರಶ್ನೆಗಳೂ ಈಗ ಹುಟ್ಟಿಕೊಂಡಿವೆ.
Kantara Prequel movie latest update got viral.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am