ಬ್ರೇಕಿಂಗ್ ನ್ಯೂಸ್
14-03-23 01:21 pm Source: news18 ಸಿನಿಮಾ
ಪುನೀತ್ ರಾಜ್ಕುಮಾರ್ ಅವರ ಕನಸಾಗಿದ್ದ ಗಂಧದ ಗುಡಿ ಸಿನಿಮಾವನ್ನು ಅಶ್ವಿನಿ ಪುನೀತ್ ರಾಜ್ಕುಮಾರ್ ಯಶಸ್ವಿಯಾಗಿ ತೆರೆ ಮೇಲೆ ತಂದರು. ಜನರು ಕೂಡ ಅಷ್ಟೇ ಪ್ರೀತಿಯಿಂದ ಅಪ್ಪು ಕೊನೆಯ ಸಿನಿಮಾವನ್ನು ನೋಡಿ ಮೆಚ್ಚಿಕೊಂಡ್ರು. ಕಳೆದ ವರ್ಷ ಅಕ್ಟೋಬರ್ 29ರಂದು ಗಂಧದ ಗುಡಿ ಸಿನಿಮಾ ತೆರೆ ಕಂಡಿತ್ತು. ಕಳೆದ ವರ್ಷ ಅಕ್ಟೋಬರ್ 29ಕ್ಕೆ ಪುನೀತ್ ನಿಧನರಾಗಿ 1 ವರ್ಷಗಳೇ ಕಳದು ಹೋಗಿದೆ. ಪುಣ್ಯ ಸ್ಮರಣೆಯ ಅಂಗವಾಗಿ ಗಂಧದ ಗುಡಿ ಸಿನಿಮಾವನ್ನು ರಿಲೀಸ್ ಮಾಡಲಾಯ್ತು.
ಸಿನಿಮಾ ಕೂಡ ಯಶಸ್ವಿ ಪ್ರದರ್ಶನ ಕಂಡಿತು. ಪುನೀತ್ ಕೊನೆಯ ಸಿನಿಮಾ ಎಂದು ಅಭಿಮಾನಿಗಳು ಅಷ್ಟೇ ಅಲ್ಲದೇ ಅನೇಕ ಗಣ್ಯರು, ರಾಜಕಾರಣಿಗಳು ಕೂಡ ಸಿನಿಮಾ ನೋಡಿದ್ರ. ನಾಡು-ನುಡಿಯ ಬಗ್ಗೆ ಪುನೀತ್ ರಾಜ್ಕುಮಾರ್ ಅವರಿಗೆ ಇದ್ದ ಅಭಿಮಾನವನ್ನು ಕೊಂಡಾಡಿದ್ರು,. ಗಂಧದ ಗುಡಿ ಸಾಕ್ಷ್ಯಚಿತ್ರ ರಿಲೀಸ್ ಆಗಿ ಕೆಲ ತಿಂಗಳುಗಳೇ ಕಳೆದು ಹೋಗಿದೆ. ಇಷ್ಟು ದಿನವಾದ್ರೂ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಒಟಿಟಿಯಲ್ಲಿ ರಿಲೀಸ್ ಮಾಡುವ ಬಗ್ಗೆ ಘೋಷಣೆ ಮಾಡಿರಲಿಲ್ಲ.


ಯಾವಾಗ ಗಂಧದ ಗುಡಿ ಸಿನಿಮಾ ಒಟಿಟಿಯಲ್ಲಿ ಬರುತ್ತೆ ಎಂದು ಅಭಿಮಾನಿಗಳು ಕಾಯ್ತಿದ್ರು. ಕೊನೆಗೂ ಕಾಲ ಕೂಡಿ ಬಂದಿದ್ದು, ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬದ ದಿನವೇ ಗಂಧದ ಗುಡಿ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಲಿದೆ. ಇಂದು (ಮಾರ್ಚ್ 14) ಅಶ್ವಿನಿ ಪುನೀತ್ ರಾಜ್ಕುಮಾರ್ ಅವರ ಹುಟ್ಟುಹಬ್ಬ ಕೂಡ. ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ತಮ್ಮ ಹುಟ್ಟುಹಬ್ಬದ ದಿನ ಅಪ್ಪು ಗಂಧದ ಗುಡಿ ಸಿನಿಮಾದ ಒಟಿಟಿ ರಿಲೀಸ್ ದಿನಾಂಕವನ್ನು ಘೋಷಿಸಿದ್ದು, ಪಿಆರ್ಕೆ ಪ್ರೊಡೆಕ್ಷನ್ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.


ಮಾರ್ಚ್ 17ರಂದು ಅಮೆಜಾನ್ ಪ್ರೈಮ್ ಒಟಿಟಿಯಲ್ಲಿ ಗಂಧದ ಗುಡಿ ರಿಲೀಸ್ ಆಗಲಿದೆ. ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬದ ದಿನ ಅಭಿಮಾನಿಗಳು ಅಪ್ಪು ಕೊನೆಯ ಸಿನಿಮಾವನ್ನು ನೋಡಿ ಕಣ್ತುಂಬಿಕೊಳ್ಳಬಹುದಾಗಿದೆ. ಥಿಯೇಟರ್ನಲ್ಲಿ ಪುನೀತ್ ಕೊನೆಯ ಸಿನಿಮಾ ಗಂಧದ ಗುಡಿಯನ್ನು ಮಿಸ್ ಮಾಡಿಕೊಂಡವರು ಇದೀಗ ಒಟಿಟಿಯಲ್ಲಿ ನೋಡಿ ಖುಷಿ ಪಡಬಹುದಾಗಿದೆ. ಮಾರ್ಚ್ 17ರಂದು ಪವರ್ ಸ್ಟಾರ್ ಹುಟ್ಟುಹಬ್ಬ ಆಚರಿಸಲು ಅಭಿಮಾನಿಗಳು ಕೂಡ ಕಾಯ್ತಿದ್ದಾರೆ.
Puneeth Rajkumar birthday is on march 17 Gandhad Gudi movie release in ott.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm