ಬ್ರೇಕಿಂಗ್ ನ್ಯೂಸ್
17-03-23 02:16 pm Source: news18 ಸಿನಿಮಾ
ಅಪ್ಪು ಅಗಲಿಕೆ ನಂತರ ಅಭಿಮಾನಿಗಳು ಇಂದು ಎರಡನೇ ವರ್ಷ ಪುನೀತ್ ಬರ್ತ್ಡೇ ಆಚರಿಸುತ್ತಿದ್ದಾರೆ. ಅದ್ದೂರಿಯಾಗಿ ಅಪ್ಪು ಉತ್ಸವ ಆಚರಿಸುತ್ತಿರುವ ಅಭಿಮಾನಿಗಳು ಹಲವು ಸಮಾಜಮುಖಿ ಕಾರ್ಯಗಳನ್ನೂ ಮಾಡುತ್ತಿದ್ದಾರೆ.
ಅಪ್ಪು ಉತ್ಸವಕ್ಕೆ ಅಭಿಮಾನಿಗಳ ಸಿದ್ದತೆ
ಕಂಠೀರವ ಸ್ಟೂಡಿಯೋ ಬಳಿ ಅಪ್ಪು ಉತ್ಸವಕ್ಕೆ ಅಭಿಮಾನಿಗಳ ಸಿದ್ದತೆ ಕೂಡಾ ನಡೆದಿದೆ. ಅಪ್ಪು ಸಮಾಧಿ ದರ್ಶನ ಪಡೆಯಲು ಬೆಳಗ್ಗಿನಿಂದಲೇ ಕಂಠೀರವ ಬಳಿ ಅಭಿಮಾನಿಗಳು ಸೇರಿದ್ದಾರೆ. ಅಪ್ಪು ಜನ್ಮದಿನದ ಅಂಗವಾಗಿ ಅಭಿಮಾನಿಗಳಿಗೆ ಅನ್ನದಾನ ಕೂಡಾ ವ್ಯವಸ್ಥೆ ಮಾಡಲಾಗಿದೆ. ಗಂಧದಗುಡಿ ಕನಸು ಕಂಡಿದ್ದ ಅಪ್ಪು ನೆನಪಲ್ಲಿ 3000 ಗಿಡಗಳ ವಿತರಣೆ ಮಾಡಲಾಗಿದ್ದು ರಾಘವೇಂದ್ರ ರಾಜ್ಕುಮಾರ್ ತಮ್ಮನ ನೆನಪಲ್ಲಿ ಗಿಡಗಳ ಉಡುಗೊರೆ ಕೊಡಲಿದ್ದಾರೆ.

ಸಂಜೆ 6ಗಂಟೆ ವೇಳೆಗೆ ರಸಮಂಜರಿ ಕಾರ್ಯಕ್ರಮ ಹಾಗು ಸಮಾಧಿ ಬಳಿ ವಿದ್ಯುತ್ ದೀಪಾಲಂಕಾರ ಕೂಡಾ ವ್ಯವಸ್ಥೆ ಮಾಡಲಾಗಿದೆ. ಅಪ್ಪು ಮಾಲೆ ಧರಿಸಿ ಪವರ್ಸ್ಟಾರ್ ಫ್ಯಾನ್ಸ್ ಸಮಾಧಿ ಬಳಿ ಬರುತ್ತಿದ್ದಾರೆ. ಸ್ಮಾರಕದ ಬಳಿ ಬೆಳಗ್ಗೆ 10 ಗಂಟೆಯಿಂದ ನಿರಂತರವಾಗಿ ಅನ್ನದಾನ ನಡೆಯುತ್ತಿದೆ.
ಮಾಲೆ ಧರಿಸಿ ಬಂದ ಅಪ್ಪು ಫ್ಯಾನ್ಸ್
ಅಪ್ಪು ಮಾಲೆಧರಿಸಿ ಅಭಿಮಾನಿಗಳು ಹೊಸಪೇಟೆಯಿಂದ ಕಾಲ್ನಡಿಗೆಯಲ್ಲಿ ಬಂದಿದ್ದಾರೆ. ಮೂರುದಿನಗಳು ಪಾದಯಾತ್ರೆಯ ಮೂಲಕ ಕಂಠೀರವ ಸಮಾಧಿ ಬಳಿ ಬಂದಿರುವ ಅಪ್ಪು ಅಭಿಮಾನಿ ಅಪ್ಪು ನೆನಪಲ್ಲಿ ಹಗಲು ರಾತ್ರಿ ಪಾದಯಾತ್ರೆ ಮಾಡಿದ್ದಾರೆ. ವಿವಿಧ ಹೂಗಳಿಂದ ಅಪ್ಪು ಸ್ಮಾರಕಕ್ಕೆ ಅಲಂಕಾರ ಮಾಡಲಾಗಿದೆ. 10ಗಂಟೆ ವೇಳೆಗೆ ಅಪ್ಪು ಸಮಾಧಿಗೆ ಕುಟುಂಬಸ್ಥರು ಪೂಜೆ ಸಲ್ಲಿಸಿದ್ದಾರೆ. ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಹುಟ್ಟು ಹಬ್ಬ ಹಿನ್ನಲೆ ಅವರ ಅಭಿಮಾನಿ ಸುಮಿತ್ರ ಭಾಯಿ ಕಡಲೆಪುರಿ ಹಾರ ತಂದಿದ್ದಾರೆ. ಕಳೆದ ಎರಡು ವರ್ಷಗಳಿಂದ ಅಪ್ಪು ಅವರಿಗೆ ಕಡಲೆ ಪುರಿ ಹಾರ ತರುತ್ತಿದ್ದಾರೆ ಈ ಅಭಿಮಾನಿ.
ಕಬ್ಜ ನಟ ಉಪೇಂದ್ರ ಅವರು ಇತ್ತೀಚೆಗೆ ಕಬ್ಜ ಸಿನಿಮಾದ ಮೂರನೇ ಹಾಡು ರಿಲೀಸ್ ಸಂದರ್ಭ ಅಪ್ಪು ಅವರ ಬಗ್ಗೆ ಮಾತನಾಡಿದ್ದರು. ಚಂದ್ರು ನಿರ್ದೇಶನದ ಸಿನಿಮಾ ಕಬ್ಜದಲ್ಲಿ ಉಪೇಂದ್ರ ಅವರ ಹೊಸ ಅವತಾರ ರಿವೀಲ್ ಆಗಿದ್ದು ಮೂರನೇ ಸಾಂಗ್ನಲ್ಲಿ ಉಪ್ಪಿ ಹಾಗೂ ತಾನ್ಯಾ ಡ್ಯಾನ್ಸ್ ಮಾಡಿದ್ದಾರೆ.
ಆ್ಯಕ್ಷನ್ ಕಟ್ ಹೇಳೋ ಆಸೆ ಹಾಗೆಯೇ ಉಳಿಯಿತು
ಈ ಹಾಡಿನ ಲಾಂಚ್ ಸಂದರ್ಭ ಉಪ್ಪಿ ಅಪ್ಪುವನ್ನು ನೆನಪಿಸಿಕೊಂಡು ಭಾವುಕರಾಗಿದ್ದಾರೆ. ವೇದಿಕೆಯಲ್ಲಿ ಪುನೀತ್ ರಾಜ್ಕುಮಾರ್ ಬಗ್ಗೆ ಮಾತನಾಡಿದ ನಟ, ನಾನು ಪುನೀತ್ ರಾಜ್ಕುಮಾರ್ಗೆ ಆ್ಯಕ್ಷನ್ ಕಟ್ ಎಂದು ಹೇಳಲು ಬಯಸಿದ್ದೆ. ಆದರೆ ಸಾಧ್ಯವಾಗಲಿಲ್ಲ. ಆದರೆ ಶೀಘ್ರ ಶಿವಣ್ಣ ಅವರಿಗೆ ಆ್ಯಕ್ಷನ್ ಕಟ್ ಹೇಳಿ ಅವರ ಬ್ಯಾನರ್ನಲ್ಲಿ ಸಿನಿಮಾ ಮಾಡುವ ಗೀತಕ್ಕ ಅವರ ಕನಸು ನನಸು ಮಾಡುತ್ತೇನೆ ಎಂದಿದ್ದಾರೆ. ಕಿಚ್ಚ ಸುದೀಪ್, ಶಿವರಾಜ್ಕುಮಾರ್ ಅವರ ಜೊತೆ ಮಲ್ಟಿಸ್ಟಾರರ್ ಸಿನಿಮಾದಲ್ಲಿ ಉಪೇಂದ್ರ ಪ್ರೇಕ್ಷಕರ ಮುಂದೆ ಬರಲಿದ್ದು ಇದು ಪ್ರೇಕ್ಷಕರಿಗೆ ಸಿನಿ ಹಬ್ಬವಾಗಲಿದೆ.
karnataka people remembers puneeth rajkumar on his birthday.
18-06-26 01:25 pm
HK News Staffer
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm