ಬ್ರೇಕಿಂಗ್ ನ್ಯೂಸ್
27-03-23 11:50 am Source: news18 ಸಿನಿಮಾ
ಚಿರಂಜೀವಿ ಸರ್ಜಾ ಅಭಿನಯದ ರಾಜಮಾರ್ತಾಂಡ ಸಿನಿಮಾ ಎಲ್ಲಿಗೆ ಬಂದಿದೆ. ಸಿನಿಮಾದ ರಿಲೀಸ್ ಹಂತಕ್ಕೆ ಬಂದಿದಿಯಾ? ಧ್ರುವ ಸರ್ಜಾ ಡಬ್ಬಿಂಗ್ ಮಾಡಿರೋದು ಇದೇ ಚಿತ್ರಕ್ಕೆ ಅಲ್ವೇ? ಈ ಎಲ್ಲ ಪ್ರಶ್ನೆಗೆ ಉತ್ತರ ಹೌದು ಅಂತಲೇ ಹೇಳಬೇಕು. ಯಾಕೆಂದ್ರೆ, ರಾಜಮಾರ್ತಾಂಡ ಸಿನಿಮಾ ಬಹುತೇಕ ರಿಲೀಸ್ಗೆ ರೆಡಿ ಆಗಿದೆ. ಚಿರಂಜೀವಿ ಸರ್ಜಾ ಅವರು ತಮ್ಮ ರಾಜಮಾರ್ತಾಂಡ ಸಿನಿಮಾದ ಬಗ್ಗೆ ತುಂಬಾನೇ ಪ್ರೀತಿ ಇಟ್ಟುಕೊಂಡಿದ್ದರು. ತುಂಬಾ ಚೆನ್ನಾಗಿಯೇ ಸಿನಿಮಾ ಬರುತ್ತಿದೆ ಅಂತಲೂ ಹೇಳಿಕೊಂಡಿದ್ದರು. ಅದೇ ರೀತಿನೇ ಸಿನಿಮಾದ ಶೂಟಿಂಗ್ ಅನ್ನೂ ಪೂರ್ಣಗೊಳಿಸಿದ್ದರು. ಆದರೆ ಅತಿ ಚಿಕ್ಕ ವಯಸ್ಸಿನಲ್ಲಿಯೇ ಚಿರು ಎಲ್ಲರನ್ನೂ ಅಗಲಿರೋದು ಈಗಲೂ ಮಾಸದ ನೋವಾಗಿ ಉಳಿದಿದೆ.


ಚಿರಂಜೀವಿ ಸರ್ಜಾ ಅಭಿನಯದ ರಾಜಮಾರ್ತಾಂಡ ಸಿನಿಮಾ ಚೆನ್ನಾಗಿಯೇ ಬಂದಿದೆ. ಈ ಚಿತ್ರದ ಡಬ್ಬಿಂಗ್ ಒಂದೇ ಬಾಕಿಯಿತ್ತು. ಆ ಕೆಲಸವನ್ನ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಪೂರ್ಣಗೊಳಿಸಿ ಚಿತ್ರ ತಂಡಕ್ಕೆ ಸಪೋರ್ಟ್ ಮಾಡಿದ್ದಾರೆ. ಅಣ್ಣನ ಚಿತ್ರಕ್ಕೆ ಡಬ್ಬಿಂಗ್ ಮಾಡೋದೇ ಖುಷಿನೇ. ಆದರೆ ಅಣ್ಣನಿಲ್ಲದೇ ಹೇಗೆ ಅನ್ನೋ ನೋವು ಕಾಡಿದ್ದು ಇದೆ. ಅದು ಡಬ್ಬಿಂಗ್ ವೇಳೆ ಇನ್ನೂ ಹೆಚ್ಚಾಗಿತ್ತು. ಆ ಕಾರಣಕ್ಕೇನೆ ಡಬ್ಬಿಂಗ್ ಮಾಡೋವಾಗ ಅಣ್ಣನನ್ನ ನೆನೆದು ಧ್ರುವ ತುಂಬಾ ಭಾವುಕರಾಗಿದ್ದರು.


ರಾಜಮಾರ್ತಾಂಡ ಸಿನಿಮಾದ ಶೂಟಿಂಗ್ ಡಬ್ಬಿಂಗ್ ಹೀಗೆ ಎಲ್ಲವೂ ಈಗ ಪೂರ್ಣ ಆಗಿದೆ. ಸದ್ಯ ಚಿತ್ರಕ್ಕೆ ಡಿ.ಟಿ.ಎಸ್. ಕೆಲಸ ನಡೆಯುತ್ತಿದೆ. ಇದೇ ಏಪ್ರಿಲ್ನಲ್ಲಿ ಸಿನಿಮಾ ತೆರೆಗೆ ತರೋ ಪ್ಲಾನ್ ಅನ್ನ ಸಿನಿಮಾ ತಂಡ ಹಾಕಿಕೊಂಡಿದೆ. ರಾಜಮಾರ್ತಾಂಡ ಚಿತ್ರದಲ್ಲಿ ಚಿರುಗೆ ಮೇಘಶ್ರೀ ಮತ್ತು ದೀಪ್ತಿ ಸಾತಿ ಜೋಡಿ ಆಗಿದ್ದಾರೆ. ಇದೇ ಚಿತ್ರದಲ್ಲಿ ಟಗರು ಚಿತ್ರ ಖ್ಯಾತಿಯ ನಟಿ ತ್ರಿವೇಣಿ ಕೂಡ ಅಭಿನಯಿಸಿದ್ದಾರೆ.


ರಾಜಮಾರ್ತಾಂಡ ಸಿನಿಮಾದಲ್ಲಿ ದೊಡ್ಡ ತಾರಾಬಳಗವೇ ಇದೆ. ದೇವರಾಜ್, ಚಿಕ್ಕಣ್ಣ, ಭಜರಂಗಿ ಲೋಕಿ, ಶಂಕರ್ ಅಶ್ವಥ್ ಇವರೆಲ್ಲ ಚಿತ್ರದಲ್ಲಿ ಅಭಿನಯಿಸಿದ್ದಾರೆ. ನಿರ್ದೇಶಕ ಕೆ. ರಾಮನಾರಾಯಣ್ ಈ ಚಿತ್ರವನ್ನ ಡೈರೆಕ್ಟ್ ಮಾಡಿದ್ದಾರೆ. ಅರ್ಜುನ್ ಜನ್ಯ ಈ ಚಿತ್ರಕ್ಕೆ ಸಂಗೀತ ಕೊಟ್ಟಿದ್ದಾರೆ.
kannada actor chiranjeevi sarja movie rajamarthand almost ready to release.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm