ಬ್ರೇಕಿಂಗ್ ನ್ಯೂಸ್
27-03-23 11:50 am Source: news18 ಸಿನಿಮಾ
ಚಿರಂಜೀವಿ ಸರ್ಜಾ ಅಭಿನಯದ ರಾಜಮಾರ್ತಾಂಡ ಸಿನಿಮಾ ಎಲ್ಲಿಗೆ ಬಂದಿದೆ. ಸಿನಿಮಾದ ರಿಲೀಸ್ ಹಂತಕ್ಕೆ ಬಂದಿದಿಯಾ? ಧ್ರುವ ಸರ್ಜಾ ಡಬ್ಬಿಂಗ್ ಮಾಡಿರೋದು ಇದೇ ಚಿತ್ರಕ್ಕೆ ಅಲ್ವೇ? ಈ ಎಲ್ಲ ಪ್ರಶ್ನೆಗೆ ಉತ್ತರ ಹೌದು ಅಂತಲೇ ಹೇಳಬೇಕು. ಯಾಕೆಂದ್ರೆ, ರಾಜಮಾರ್ತಾಂಡ ಸಿನಿಮಾ ಬಹುತೇಕ ರಿಲೀಸ್ಗೆ ರೆಡಿ ಆಗಿದೆ. ಚಿರಂಜೀವಿ ಸರ್ಜಾ ಅವರು ತಮ್ಮ ರಾಜಮಾರ್ತಾಂಡ ಸಿನಿಮಾದ ಬಗ್ಗೆ ತುಂಬಾನೇ ಪ್ರೀತಿ ಇಟ್ಟುಕೊಂಡಿದ್ದರು. ತುಂಬಾ ಚೆನ್ನಾಗಿಯೇ ಸಿನಿಮಾ ಬರುತ್ತಿದೆ ಅಂತಲೂ ಹೇಳಿಕೊಂಡಿದ್ದರು. ಅದೇ ರೀತಿನೇ ಸಿನಿಮಾದ ಶೂಟಿಂಗ್ ಅನ್ನೂ ಪೂರ್ಣಗೊಳಿಸಿದ್ದರು. ಆದರೆ ಅತಿ ಚಿಕ್ಕ ವಯಸ್ಸಿನಲ್ಲಿಯೇ ಚಿರು ಎಲ್ಲರನ್ನೂ ಅಗಲಿರೋದು ಈಗಲೂ ಮಾಸದ ನೋವಾಗಿ ಉಳಿದಿದೆ.
ಚಿರಂಜೀವಿ ಸರ್ಜಾ ಅಭಿನಯದ ರಾಜಮಾರ್ತಾಂಡ ಸಿನಿಮಾ ಚೆನ್ನಾಗಿಯೇ ಬಂದಿದೆ. ಈ ಚಿತ್ರದ ಡಬ್ಬಿಂಗ್ ಒಂದೇ ಬಾಕಿಯಿತ್ತು. ಆ ಕೆಲಸವನ್ನ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಪೂರ್ಣಗೊಳಿಸಿ ಚಿತ್ರ ತಂಡಕ್ಕೆ ಸಪೋರ್ಟ್ ಮಾಡಿದ್ದಾರೆ. ಅಣ್ಣನ ಚಿತ್ರಕ್ಕೆ ಡಬ್ಬಿಂಗ್ ಮಾಡೋದೇ ಖುಷಿನೇ. ಆದರೆ ಅಣ್ಣನಿಲ್ಲದೇ ಹೇಗೆ ಅನ್ನೋ ನೋವು ಕಾಡಿದ್ದು ಇದೆ. ಅದು ಡಬ್ಬಿಂಗ್ ವೇಳೆ ಇನ್ನೂ ಹೆಚ್ಚಾಗಿತ್ತು. ಆ ಕಾರಣಕ್ಕೇನೆ ಡಬ್ಬಿಂಗ್ ಮಾಡೋವಾಗ ಅಣ್ಣನನ್ನ ನೆನೆದು ಧ್ರುವ ತುಂಬಾ ಭಾವುಕರಾಗಿದ್ದರು.
ರಾಜಮಾರ್ತಾಂಡ ಸಿನಿಮಾದ ಶೂಟಿಂಗ್ ಡಬ್ಬಿಂಗ್ ಹೀಗೆ ಎಲ್ಲವೂ ಈಗ ಪೂರ್ಣ ಆಗಿದೆ. ಸದ್ಯ ಚಿತ್ರಕ್ಕೆ ಡಿ.ಟಿ.ಎಸ್. ಕೆಲಸ ನಡೆಯುತ್ತಿದೆ. ಇದೇ ಏಪ್ರಿಲ್ನಲ್ಲಿ ಸಿನಿಮಾ ತೆರೆಗೆ ತರೋ ಪ್ಲಾನ್ ಅನ್ನ ಸಿನಿಮಾ ತಂಡ ಹಾಕಿಕೊಂಡಿದೆ. ರಾಜಮಾರ್ತಾಂಡ ಚಿತ್ರದಲ್ಲಿ ಚಿರುಗೆ ಮೇಘಶ್ರೀ ಮತ್ತು ದೀಪ್ತಿ ಸಾತಿ ಜೋಡಿ ಆಗಿದ್ದಾರೆ. ಇದೇ ಚಿತ್ರದಲ್ಲಿ ಟಗರು ಚಿತ್ರ ಖ್ಯಾತಿಯ ನಟಿ ತ್ರಿವೇಣಿ ಕೂಡ ಅಭಿನಯಿಸಿದ್ದಾರೆ.
ರಾಜಮಾರ್ತಾಂಡ ಸಿನಿಮಾದಲ್ಲಿ ದೊಡ್ಡ ತಾರಾಬಳಗವೇ ಇದೆ. ದೇವರಾಜ್, ಚಿಕ್ಕಣ್ಣ, ಭಜರಂಗಿ ಲೋಕಿ, ಶಂಕರ್ ಅಶ್ವಥ್ ಇವರೆಲ್ಲ ಚಿತ್ರದಲ್ಲಿ ಅಭಿನಯಿಸಿದ್ದಾರೆ. ನಿರ್ದೇಶಕ ಕೆ. ರಾಮನಾರಾಯಣ್ ಈ ಚಿತ್ರವನ್ನ ಡೈರೆಕ್ಟ್ ಮಾಡಿದ್ದಾರೆ. ಅರ್ಜುನ್ ಜನ್ಯ ಈ ಚಿತ್ರಕ್ಕೆ ಸಂಗೀತ ಕೊಟ್ಟಿದ್ದಾರೆ.
kannada actor chiranjeevi sarja movie rajamarthand almost ready to release.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 07:56 pm
Mangalore Correspondent
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm