ಬ್ರೇಕಿಂಗ್ ನ್ಯೂಸ್
27-03-23 11:50 am Source: news18 ಸಿನಿಮಾ
ಚಿರಂಜೀವಿ ಸರ್ಜಾ ಅಭಿನಯದ ರಾಜಮಾರ್ತಾಂಡ ಸಿನಿಮಾ ಎಲ್ಲಿಗೆ ಬಂದಿದೆ. ಸಿನಿಮಾದ ರಿಲೀಸ್ ಹಂತಕ್ಕೆ ಬಂದಿದಿಯಾ? ಧ್ರುವ ಸರ್ಜಾ ಡಬ್ಬಿಂಗ್ ಮಾಡಿರೋದು ಇದೇ ಚಿತ್ರಕ್ಕೆ ಅಲ್ವೇ? ಈ ಎಲ್ಲ ಪ್ರಶ್ನೆಗೆ ಉತ್ತರ ಹೌದು ಅಂತಲೇ ಹೇಳಬೇಕು. ಯಾಕೆಂದ್ರೆ, ರಾಜಮಾರ್ತಾಂಡ ಸಿನಿಮಾ ಬಹುತೇಕ ರಿಲೀಸ್ಗೆ ರೆಡಿ ಆಗಿದೆ. ಚಿರಂಜೀವಿ ಸರ್ಜಾ ಅವರು ತಮ್ಮ ರಾಜಮಾರ್ತಾಂಡ ಸಿನಿಮಾದ ಬಗ್ಗೆ ತುಂಬಾನೇ ಪ್ರೀತಿ ಇಟ್ಟುಕೊಂಡಿದ್ದರು. ತುಂಬಾ ಚೆನ್ನಾಗಿಯೇ ಸಿನಿಮಾ ಬರುತ್ತಿದೆ ಅಂತಲೂ ಹೇಳಿಕೊಂಡಿದ್ದರು. ಅದೇ ರೀತಿನೇ ಸಿನಿಮಾದ ಶೂಟಿಂಗ್ ಅನ್ನೂ ಪೂರ್ಣಗೊಳಿಸಿದ್ದರು. ಆದರೆ ಅತಿ ಚಿಕ್ಕ ವಯಸ್ಸಿನಲ್ಲಿಯೇ ಚಿರು ಎಲ್ಲರನ್ನೂ ಅಗಲಿರೋದು ಈಗಲೂ ಮಾಸದ ನೋವಾಗಿ ಉಳಿದಿದೆ.


ಚಿರಂಜೀವಿ ಸರ್ಜಾ ಅಭಿನಯದ ರಾಜಮಾರ್ತಾಂಡ ಸಿನಿಮಾ ಚೆನ್ನಾಗಿಯೇ ಬಂದಿದೆ. ಈ ಚಿತ್ರದ ಡಬ್ಬಿಂಗ್ ಒಂದೇ ಬಾಕಿಯಿತ್ತು. ಆ ಕೆಲಸವನ್ನ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಪೂರ್ಣಗೊಳಿಸಿ ಚಿತ್ರ ತಂಡಕ್ಕೆ ಸಪೋರ್ಟ್ ಮಾಡಿದ್ದಾರೆ. ಅಣ್ಣನ ಚಿತ್ರಕ್ಕೆ ಡಬ್ಬಿಂಗ್ ಮಾಡೋದೇ ಖುಷಿನೇ. ಆದರೆ ಅಣ್ಣನಿಲ್ಲದೇ ಹೇಗೆ ಅನ್ನೋ ನೋವು ಕಾಡಿದ್ದು ಇದೆ. ಅದು ಡಬ್ಬಿಂಗ್ ವೇಳೆ ಇನ್ನೂ ಹೆಚ್ಚಾಗಿತ್ತು. ಆ ಕಾರಣಕ್ಕೇನೆ ಡಬ್ಬಿಂಗ್ ಮಾಡೋವಾಗ ಅಣ್ಣನನ್ನ ನೆನೆದು ಧ್ರುವ ತುಂಬಾ ಭಾವುಕರಾಗಿದ್ದರು.


ರಾಜಮಾರ್ತಾಂಡ ಸಿನಿಮಾದ ಶೂಟಿಂಗ್ ಡಬ್ಬಿಂಗ್ ಹೀಗೆ ಎಲ್ಲವೂ ಈಗ ಪೂರ್ಣ ಆಗಿದೆ. ಸದ್ಯ ಚಿತ್ರಕ್ಕೆ ಡಿ.ಟಿ.ಎಸ್. ಕೆಲಸ ನಡೆಯುತ್ತಿದೆ. ಇದೇ ಏಪ್ರಿಲ್ನಲ್ಲಿ ಸಿನಿಮಾ ತೆರೆಗೆ ತರೋ ಪ್ಲಾನ್ ಅನ್ನ ಸಿನಿಮಾ ತಂಡ ಹಾಕಿಕೊಂಡಿದೆ. ರಾಜಮಾರ್ತಾಂಡ ಚಿತ್ರದಲ್ಲಿ ಚಿರುಗೆ ಮೇಘಶ್ರೀ ಮತ್ತು ದೀಪ್ತಿ ಸಾತಿ ಜೋಡಿ ಆಗಿದ್ದಾರೆ. ಇದೇ ಚಿತ್ರದಲ್ಲಿ ಟಗರು ಚಿತ್ರ ಖ್ಯಾತಿಯ ನಟಿ ತ್ರಿವೇಣಿ ಕೂಡ ಅಭಿನಯಿಸಿದ್ದಾರೆ.


ರಾಜಮಾರ್ತಾಂಡ ಸಿನಿಮಾದಲ್ಲಿ ದೊಡ್ಡ ತಾರಾಬಳಗವೇ ಇದೆ. ದೇವರಾಜ್, ಚಿಕ್ಕಣ್ಣ, ಭಜರಂಗಿ ಲೋಕಿ, ಶಂಕರ್ ಅಶ್ವಥ್ ಇವರೆಲ್ಲ ಚಿತ್ರದಲ್ಲಿ ಅಭಿನಯಿಸಿದ್ದಾರೆ. ನಿರ್ದೇಶಕ ಕೆ. ರಾಮನಾರಾಯಣ್ ಈ ಚಿತ್ರವನ್ನ ಡೈರೆಕ್ಟ್ ಮಾಡಿದ್ದಾರೆ. ಅರ್ಜುನ್ ಜನ್ಯ ಈ ಚಿತ್ರಕ್ಕೆ ಸಂಗೀತ ಕೊಟ್ಟಿದ್ದಾರೆ.
kannada actor chiranjeevi sarja movie rajamarthand almost ready to release.
17-08-26 02:26 pm
HK News Staffer
ಜಮೀರ್ ಹಲ್ಲು ಕಿತ್ತ ಹಾವು, ನೆಪಕ್ಕಷ್ಟೇ ಸಚಿವ ಸ್ಥಾನ...
14-08-26 08:42 pm
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
17-08-26 05:38 pm
HK News Staffer
ನೀಟ್ ಪರೀಕ್ಷೆ ರದ್ದುಗೊಳಿಸಲು ತಮಿಳುನಾಡು ವಿಧಾನಸಭೆಯ...
11-08-26 10:25 pm
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
17-08-26 05:07 pm
HK News Staffer
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
17-08-26 05:02 pm
HK News Staffer
ಬಂಟ್ವಾಳ ಪೊಲೀಸರ ಭರ್ಜರಿ ಬೇಟೆ; ಬೆಂಗಳೂರಿನಿಂದ ಕಾರಿ...
17-08-26 10:54 am
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm