ಬ್ರೇಕಿಂಗ್ ನ್ಯೂಸ್
04-04-23 01:55 pm Source: news18 ಸಿನಿಮಾ
ಪ್ರಭುದೇವ ಅವರ ಸ್ಪಷ್ಟ ಕನ್ನಡ
ಯಾರೇ ಆದರೂ ಪ್ರಭುದೇವ ಅವರ ಸಿನಿಮಾ, ಡ್ಯಾನ್ಸ್, ನಿರ್ದೇಶನವನ್ನು ನೋಡಿದ್ದರೆ ಅವರ ಪ್ರತಿಭೆಯನ್ನು ಮೆಚ್ಚುತ್ತಾರೆ. ಅವರ ಟ್ಯಾಲೆಂಟ್ಗೆ ಸಲಾಂ ಎನ್ನುತ್ತಾರೆ. ಆದರೆ ಅವರ ಕನ್ನಡ ಕೇಳಿದ್ರೆ ಕನ್ನಡಿಗರಂತೂ ಮೆಚ್ಚಿ ತಲೆದೂಗುತ್ತಾರೆ. ಇದರಲ್ಲಿ ಡೌಟೇ ಇಲ್ಲ.
ನೀವಿಷ್ಟು ಚಂದ ಕನ್ನಡ ಮಾತಾಡ್ತೀರಾ?
ಕಾಲಿವುಡ್ ನಟ ಪ್ರಭುದೇವ ಅವರು ವೀಕೆಂಡ್ ವಿತ್ ರಮೇಶ್ನಲ್ಲಿ ಎರಡನೇ ವಾರದ ಅತಿಥಿಯಾಗಿ ಭಾಗವಹಿಸಿದ್ದಾರೆ. ನಟನ ನಿರರ್ಗಳವಾಗಿ ಕನ್ನಡ ಮಾತನಾಡುವುದನ್ನು ಕೇಳಿದ ಕನ್ನಡ ಕಿರುತೆರೆ ಪ್ರೇಕ್ಷಕರು ಹಾಗೂ ವೀಕೆಂಡ್ ವಿತ್ ರಮೇಶ್ ಶೋ ಅಭಿಮಾನಿಗಳು ಶಾಕ್ ಆಗಿದ್ದಾರೆ. ಇವರಿಗೆ ಇಷ್ಟೊಂದು ಚೆನ್ನಾಗಿ ಕನ್ನಡ ಮಾತನಾಡಲು ಬರುತ್ತದೆಯೇ ಎಂದು ಸೋಷಿಯಲ್ ಮೀಡಿಯಾದಲ್ಲಿ ಚರ್ಚಿಸುತ್ತಿದ್ದಾರೆ.

ವೀಕೆಂಡ್ ವಿತ್ ರಮೇಶ್ ನೋಡೋ ತನಕ ಈ ಸತ್ಯ ಗೊತ್ತಿರಲಿಲ್ಲ
ನಿಜ ಹೇಳ್ತೀವಿ ಕೇಳಿ. ವೀಕೆಂಡ್ ವಿತ್ ರಮೇಶ್ ಶೋ ನೋಡುವ ತನಕವೂ ಇವರು ಇಷ್ಟು ಚಂದ ಕನ್ನಡ ಮಾತನಾಡುತ್ತಾರೆ ಎನ್ನುವ ವಿಚಾರ ನಮಗೆ ಗೊತ್ತಿರಲಿಲ್ಲ ಎಂದು ನೆಟ್ಟಿಗರು ಪ್ರೋಮೋಗೆ ಕಮೆಂಟ್ ಮಾಡಿದ್ದಾರೆ. ಅಚ್ಚುಕಟ್ಟಾಗಿ ಕನ್ನಡ ಮಾತನಾಡಿದ್ದಕ್ಕೆ ಜನರು ಪ್ರಭುದೇವ ಅವರನ್ನು ಹೊಗಳುತ್ತಿದ್ದಾರೆ.

ಅಪ್ಪಟ ಕನ್ನಡದ ಕೂಸು
ಸ್ಯಾಂಡಲ್ವುಡ್ ನಿರ್ದೇಶಕ ಯೋಗರಾಜ್ ಭಟ್ ಅವರೂ ಈ ಶೋದಲ್ಲಿ ಬಂದಿದ್ದಾರೆ. ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭು ದೇವ ಅವರ ಕುರಿತು ಮಾತನಾಡಿದ್ದಾರೆ. ಮೂಗೂರಿನ ಅಪ್ಪಟ ಕನ್ನಡದ ಕೂಸು ಪ್ರಭು ದೇವ ಅನ್ನೋದನ್ನ ಕೂಡ ಹೇಳಿಕೊಂಡಿದ್ದಾರೆ.
ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟುಬೇಕು ಅನ್ನುವ ಅಣ್ಣಾವ್ರ ಹಾಡಿಗೆ ಪ್ರಭು ದೇವ, ಮೂಗೂರು ಸುಂದರಂ, ರಮೇಶ್ ಅರವಿಂದ್ ಅವರು ಡ್ಯಾನ್ಸ್ ಮಾಡಿದ್ದಾರೆ. ತುಂಬಾ ವಿಶೇಷವಾಗಿ ಇಲ್ಲಿ ಇನ್ನೂ ಒಂದು ಘಟನೆಯ ಝಲಕ್ ಕೂಡ ಸಿಗುತ್ತದೆ.
ಮೊದಲ ಎಪಿಸೋಡ್ನಲ್ಲಿ ಟ್ರೋಲ್ ಆದ ರಮ್ಯಾ
ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಮೊದಲ ಅತಿಥಿಯಾಗಿದ್ದ ನಟಿ ರಮ್ಯಾ ಅವರು ಕಾರ್ಯಕ್ರಮದಲ್ಲಿ ಕನ್ನಡಕ್ಕಿಂತ ಹೆಚ್ಚು ಇಂಗ್ಲಿಷ್ ಬಳಸಿ ಟ್ರೋಲ್ ಆಗಿದ್ದರು. ಪ್ರೋಗ್ರಾಂ ನೋಡಿದವರೆಲ್ಲ ನಟಿಯನ್ನು ಟ್ರೋಲ್ ಮಾಡಿದ್ದರು. ಕನ್ನಡದವರೇ ಆದ ರಮ್ಯಾಗೆ ಕನ್ನಡ ಬರಲ್ವಾ ಎಂದು ಬಹಳಷ್ಟು ಜನರು ರಮ್ಯಾ ಅವರ ನಡೆಗೆ ವಿರೋಧ ವ್ಯಕ್ತಪಡಿಸಿದ್ದರು. ಈಗ ರಮ್ಯಾ ನಂತರ ಪ್ರಭುದೇವ ಅವರು ಕಾರ್ಯಕ್ರಮಕ್ಕೆ ಬಂದಿರುವುದು, ಅದರಲ್ಲೂ ನಟ ಕನ್ನಡ ಮಾತನಾಡಿರುವುದು ವ್ಯಾಪಕ ಮೆಚ್ಚುಗೆ ಗಳಿಸಿದೆ.
people surprised to see tamil actor prabhu deva speak in kannada fluently on weekend with ramesh show.
17-08-26 02:26 pm
HK News Staffer
ಜಮೀರ್ ಹಲ್ಲು ಕಿತ್ತ ಹಾವು, ನೆಪಕ್ಕಷ್ಟೇ ಸಚಿವ ಸ್ಥಾನ...
14-08-26 08:42 pm
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
17-08-26 05:38 pm
HK News Staffer
ನೀಟ್ ಪರೀಕ್ಷೆ ರದ್ದುಗೊಳಿಸಲು ತಮಿಳುನಾಡು ವಿಧಾನಸಭೆಯ...
11-08-26 10:25 pm
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
17-08-26 05:07 pm
HK News Staffer
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
17-08-26 05:02 pm
HK News Staffer
ಬಂಟ್ವಾಳ ಪೊಲೀಸರ ಭರ್ಜರಿ ಬೇಟೆ; ಬೆಂಗಳೂರಿನಿಂದ ಕಾರಿ...
17-08-26 10:54 am
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm