ಬ್ರೇಕಿಂಗ್ ನ್ಯೂಸ್
24-04-23 01:06 pm Source: news18 ಸಿನಿಮಾ
ಬೆಳಗ್ಗೆಯಿಂದಲೇ ಸ್ಮಾರಕಕ್ಕೆ ಅಭಿಮಾನಿಗಳ ದಂಡು ಹರಿದು ಬಂದಿದೆ. ಸ್ಮಾರಕದ ಮುಂದೆಯೇ ಅನ್ನಸಂತರ್ಪಣೆ, ಕೇಕ್ ಕತ್ತರಿಸಿದ್ದಾರೆ. ಡಾ. ರಾಜ್ಕುಮಾರ್ ಹೆಸರಿನಲ್ಲಿ ರಕ್ತದಾನ, ಅನ್ನದಾನ ಹಾಗೂ ವೃದ್ಧಾಶ್ರಮ, ಅನಾಥಾಶ್ರಮಗಳಿಗೆ ಸಹಾಯ ಮಾಡುವ ಮೂಲಕ ಅರ್ಥಪೂರ್ಣವಾಗಿ ಅಭಿಮಾನಿಗಳು ನೆಚ್ಚಿನ ನಟನ ಜನ್ಮದಿನವನ್ನು ಆಚರಿಸುತ್ತಿದ್ದಾರೆ.
ವರನಟನ ನೆನಪು ಅಮರ
ಸೋಶಿಯಲ್ ಮೀಡಿಯಾ ಮೂಲಕ ಅನೇಕ ಸಿನಿಮಾ ಹಾಗೂ ಇತರೆ ಕ್ಷೇತ್ರದ ಗಣ್ಯರು ಕೂಡ ವರನಟ ಡಾ.ರಾಜ್ ಕುಮಾರ್ ಅವರ ನೆನಪನ್ನು ಮೆಲುಕು ಹಾಕಿದ್ದಾರೆ. ಕುಟುಂಬಸ್ಥರು ಕೂಡ ಸೋಶಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ರಾಜ್ ತೋರಿಸಿದ ಹಾದಿಯಲ್ಲಿ ದೊಡ್ಮನೆ ಕುಡಿಗಳು
ಡಾ.ರಾಜ್ ಕುಮಾರ್ ತೋರಿಸಿದ ದಾರಿಯಲ್ಲಿ ಬದುಕುತ್ತಿರುವ ಅವರ ಮಕ್ಕಳಾದ ಶಿವರಾಜ್ ಕುಮಾರ್ ಹಾಗೂ ರಾಘವೇಂದ್ರ ರಾಜ್ ಕುಮಾರ್ ಸೋಶಿಯಲ್ ಮೀಡಿಯಾದಲ್ಲಿ ತಂದೆಯ ಫೋಟೋ ಹಂಚಿಕೊಂಡರು. ಅಷ್ಟೇ ಅಲ್ಲದೇ ಕರುನಾಡಿನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ಕುಮಾರ್ ಕೂಡ ಮಾವನ ಫೋಟೋ ಜೊತೆ ಉತ್ತಮ ಬಹರ ಪೋಸ್ಟ್ ಮಾಡಿದ್ದಾರೆ.
ವಿಶೇಷವಾಗಿ ಶುಭಕೋರಿದ ಅಶ್ವಿನಿ
ಡಾ.ರಾಜ್ ಕುಮಾರ್ ಹುಟ್ಟು ಹಬ್ಬಕ್ಕೆ ವಿಶೇಷವಾಗಿ ಶುಭಕೋರಿದ ಅಶ್ವಿನಿ ಪುನೀತ್ ರಾಜ್ ಕುಮಾರ್, ಪ್ರೀತಿಯ ಮಾವನ ಸರಳತೆ ಹಾಗೂ ಅಭಿಮಾನಿಗಳ ಮೇಲಿನ ಪ್ರೀತಿಯನ್ನು ಮೆಲುಕು ಹಾಕಿದ್ದಾರೆ. ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ರಾಜ್ಕುಮಾರ್ ಸಿನಿ ಜೀವನದ ಸ್ಪೆಷಲ್ ಸಿನಿಮಾಗಳು
ಕನ್ನಡದಲ್ಲಿ ಬಂದ ಆಫ್ ಬೀಟ್ ಸಿನಿಮಾಗಳಲ್ಲಿ ನಾಂದಿ ಸಿನಿಮಾನೇ ಮೊದಲ ಸಿನಿಮಾ ಆಗಿತ್ತು. ರಾಜ್ಕುಮಾರ್ ಅಭಿನಯದ ಬಾಂಡ್ ಸಿನಿಮಾಗಳೂ ಏನು ಕಮ್ಮಿ ಇದ್ದವೇ? ದೊರೈ-ಭಗವಾನ್ ನಿರ್ದೇಶನದ ಈ ಬಾಂಡ್ ಸರಣಿ ಸಿನಿಮಾಗಳು ಅಣ್ಣಾವ್ರಗೆ ಭಾರೀ ದೊಡ್ಡ ಹೆಸರನ್ನ ತಂದುಕೊಟ್ಟಿವೆ. ಇಂಡಿಯನ್ ಸಿನಿಮಾರಂಗದಲ್ಲಿಯೇ ರಾಜ್ ಮೊದಲ ಬಾಂಡ್ ಸಿನಿಮಾ ಹೀರೋ ಅನ್ನೋ ಮಟ್ಟವನ್ನ ತಂದುಕೊಟ್ಟಿವೆ.
ರಾಜ್ಕುಮಾರ್ ಸಿನಿಮಾ ಜೀವನದಲ್ಲಿ ಕಸ್ತೂರಿ ನಿವಾಸ ನಿಜಕ್ಕೂ ಗ್ರೇಟ್ ಸಿನಿಮಾ ಆಗಿದೆ. ಹೊಸ ಸ್ಪರ್ಶದಿಂದ ಮತ್ತೊಮ್ಮೆ ರಿಲೀಸ್ ಆದಾಗಲೂ ಕಸ್ತೂರಿ ನಿವಾಸ ಸೂಪರ್ ಹಿಟ್ ಆಗಿತ್ತು. ಬಂಗಾರದ ಮನುಷ್ಯ ಯಾರಿಗೆ ಗೊತ್ತಿಲ್ಲ ಹೇಳಿ?
ಬಂಗಾರದ ಮನುಷ್ಯನ ಬಂಗಾರದಂತಹ ಅಭಿಮಾನಿಗಳು
ಈ ಸಿನಿಮಾ ರಾಜ್ ಜೀವನದ ವಿಶೇಷ ಸಿನಿಮಾ ಆಗಿದೆ. ಈ ಚಿತ್ರ ಬಂದಾಗ, ಅನೇಕರು ವಾಪಸ್ ತಮ್ಮ ಹಳ್ಳಿಗೆ ಹೋಗಿ ವ್ಯವಸಾಯ ಮಾಡಿರೋ ಸತ್ಯ ಈಗಲೂ ಇತಿಹಾಸ ಪುಟದಲ್ಲಿ ಹೊಳೆಯುತ್ತದೆ. ಅಷ್ಟು ವಿಶೇಷವಾದ ಸಿನಿಮಾಗಳನ್ನ ಕೊಡುತ್ತಲೇ ರಾಜ್ ಕುಮಾರ್ ಅಜರಾಮರ ಆಗಿದ್ದಾರೆ.
ರಾಜ್ಕುಮಾರ್ ಅವರ ಜನ್ಮದಿನ ಬಂತು ಅಂದ್ರೇ ಅಂದು ಕಂಠೀರವ ಸ್ಟುಡಿಯೋ ಆವರಣದಲ್ಲಿರೋ ರಾಜ್ ಸಮಾಧಿ ಬಳಿ ಹಬ್ಬದ ವಾತಾವರಣ ನಿರ್ಮಾಣ ಆಗಿರುತ್ತದೆ. ರಾಜ್ಕುಮಾರ್ ಅವರನ್ನ ದೇವರ ರೀತಿಯಲ್ಲಿ ಆರಾಧಿಸೋ ಅಭಿಮಾನಿಗಳು ತಮ್ಮ ದೇವರಿಗೆ ತಮ್ಮದೇ ರೀತಿಯಲ್ಲಿ ಗೌರವ ಸಲ್ಲಿಸುತ್ತಾರೆ.
rajkumar 94th birthday a sea of fans flocked to the memorial.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm