ಬ್ರೇಕಿಂಗ್ ನ್ಯೂಸ್
27-10-20 04:37 pm Headline Karnataka News Network ಸಿನಿಮಾ
ಮಂಗಳೂರು, ಅಕ್ಟೋಬರ್ 27: ಬಹುಸಂಖ್ಯಾತ ಹಿಂದೂಗಳ ಭಾವನೆಗೆ ಧಕ್ಕೆ ಹಾಗೂ ಲವ್ ಜಿಹಾದ್ ಗೆ ಪ್ರೋತ್ಸಾಹ ನೀಡುವ ಲಕ್ಷ್ಮೀ ಬಾಂಬ್ ಚಲನಚಿತ್ರ ಪ್ರಸಾರ ಆಗದಂತೆ ನಿಷೇಧ ಹೇರಬೇಕು ಎಂದು ಹಿಂದೂ ಮಹಾಸಭಾ ಕರ್ನಾಟಕ ಆಗ್ರಹಿಸಿದೆ.
ಈ ಬಗ್ಗೆ ನಗರದಲ್ಲಿ ಸುದ್ದಿಗೋಷ್ಟಿ ನಡೆಸಿದ ಹಿಂದು ಮಹಾಸಭಾ ಮುಖಂಡರಾದ ಧರ್ಮೇಂದ್ರ ಹಾಗೂ ರಾಜೇಶ್ ಪವಿತ್ರನ್, ಅಕ್ಷಯ್ ಕುಮಾರ್ ನಟಿಸಿರುವ ಲಕ್ಷ್ಮೀ ಬಾಂಬ್ ಚಲನಚಿತ್ರ ನವೆಂಬರ್ 9ರಂದು ತೆರೆಕಾಣಲಿದೆ. ಚಲನಚಿತ್ರದ ಹೆಸರನ್ನು ಉದ್ದೇಶಪೂರ್ವಕ ಹಿಂದುಗಳನ್ನು ಅಣಕಿಸಲೆಂದೇ ಲಕ್ಷ್ಮೀ ಬಾಂಬ್ ಎಂದು ಇಡಲಾಗಿದೆ. ಚಿತ್ರವನ್ನು ದೀಪಾವಳಿ ತೆರೆಗೆ ಬರುವಂತೆ ಮಾಡಿರುವುದರ ಹಿಂದೆ ದೊಡ್ಡ ಷಡ್ಯಂತ್ರವೇ ಅಡಗಿದೆ ಎಂದು ಆರೋಪಿಸಿದ್ದಾರೆ.


ಬಹುಸಂಖ್ಯಾತ ಹಿಂದೂಗಳು ಆರಾಧಿಸುವ ಲಕ್ಷ್ಮಿ ದೇವಿಯ ಹೆಸರನ್ನು ಈ ಚಲನಚಿತ್ರಕ್ಕೆ ಇಟ್ಟಿರುವುದರಿಂದ ಹಿಂದೂಗಳ ಭಾವನೆಗೆ ಧಕ್ಕೆಯಾಗಿದೆ. ಈ ಚಲನಚಿತ್ರದಲ್ಲಿ ನಾಯಕಿಯ ಹೆಸರು ಪ್ರಿಯಾ ಯಾದವ್ ಹಾಗೂ ನಾಯಕನ ಹೆಸರು ಆಸಿಫ್ ಎಂದು ಇಟ್ಟಿರುವುದು ಕಂಡುಬಂದಿದ್ದು ಇದರಲ್ಲಿ ಮುಸಲ್ಮಾನ ಯುವಕ ಹಾಗೂ ಹಿಂದು ಯುವತಿಯ ಸಂಬಂಧವನ್ನು ತೋರಿಸಲಾಗಿದೆ. ಈ ಮೂಲಕ ಉದ್ದೇಶಪೂರ್ವಕವಾಗಿ ಲವ್ ಜಿಹಾದ್ ಜಾಡ್ಯಕ್ಕೆ ಪ್ರೇರಣೆ ನೀಡಿದಂತಾಗಿದೆ. ಆದ್ದರಿಂದ ಲಕ್ಷ್ಮೀ ಬಾಂಬ್ ಚಲನಚಿತ್ರದ ಪ್ರದರ್ಶನದ ಮೇಲೆ ಕೂಡಲೇ ನಿರ್ಬಂಧ ಹೇರಬೇಕೆಂದು ಹಿಂದೂ ಮಹಾಸಭಾ ಆಗ್ರಹಿಸಿದೆ.
ಪತ್ರಿಕಾಗೋಷ್ಠಿಯಳ್ಳಿ ಧರ್ಮೇಂದ್ರ, ರಾಜೇಶ್ ಪವಿತ್ರನ್, ಜಗನ್ ಕುಮಾರ್, ಧನರಾಜ್ ಪೂಜಾರಿ, ಅಕ್ಷಿತ್ ಶೆಟ್ಟಿ, ವಸಂತ, ಸುಧೀರ್ ಶೆಟ್ಟಿ, ಕಮಲಾಕ್ಷ ಎಂ. ಹಾಗೂ ಮತ್ತಿತರರು ಉಪಸ್ಥಿತರಿದ್ದರು.
Laxmi Bomb the upcoming Indian Hindi-language comedy horror film is now in controversy as Hindu Activits in Mangalore allege of Hurting Religious Sentiments. The movie script is written and directed by Raghava Lawrence
22-03-26 11:44 am
HK News Staffer
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
22-03-26 08:37 pm
HK News Staffer
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
22-03-26 07:30 pm
HK News Staffer
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
Rape, Sandesh PG Inspector: ಇನ್ಸ್ ಪೆಕ್ಟರ್ ಸಂ...
22-03-26 12:10 pm
ಕಲ್ಲಡ್ಕದ ಫ್ಯಾಬ್ರಿಕೇಶನ್ ಉದ್ಯಮಿ ಸುಳ್ಯದ ಲಾಡ್ಜ್ ನ...
21-03-26 08:23 pm
22-03-26 09:44 pm
HK News Staffer
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm