ಬ್ರೇಕಿಂಗ್ ನ್ಯೂಸ್
01-05-23 01:09 pm Source: news18 ಸಿನಿಮಾ
ಮೇ 5ರಂದು ರಿಲೀಸ್ ಆಗಲಿರುವ ದಿ ಕೇರಳ ಸ್ಟೋರಿ ಸಿನಿಮಾ ಈಗಾಗಲೇ ಭಾರೀ ಸದ್ದು ಮಾಡುತ್ತಿದೆ. ಬಾಲಿವುಡ್ ನಟಿ ಆದಾ ಶರ್ಮಾ ಪ್ರಮುಖ ಪಾತ್ರದಲ್ಲಿ ನಟಿಸಿರುವ ಈ ಸಿನಿಮಾ ಟ್ರೈಲರ್ ರಿಲೀಸ್ ಆಗಿ ಭಾರೀ ವಿವಾದ ಸೃಷ್ಟಿಸಿದೆ. ಈ ಸಿನಿಮಾವನ್ನು ಯಾವುದೇ ಕಾರಣಕ್ಕೂ ಬಿಡುಗಡೆ ಮಾಡಲು ಅವಕಾಶ ನೀಡಬಾರದು ಎಂದು ಕೇರಳ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸುತ್ತಿದೆ. ಒಂದು ಸಮುದಾಯವನ್ನು ಅವಮಾನಿಸುವ, ವಿಷ ಬೀಜ ಬಿತ್ತುವ ಸಿನಿಮಾ ರಿಲೀಸ್ ಬೇಡ ಎಂದು ಸರ್ಕಾರಕ್ಕೆ ಮನವಿ ಮಾಡಿದೆ.


ಈ ಒಂದು ಬೆಳವಣಿಗೆ ಬಗ್ಗೆ ಚೇತನ್ ಅವರು ಪ್ರತಿಕ್ರಿಯಿಸಿದ್ದಾರೆ. ವಿವಾದಾತ್ಮಕ ಚಿತ್ರ 'ದಿ ಕೇರಳ ಸ್ಟೋರಿ' ಮೇ 5 ರಂದು ತೆರೆಗೆ ಬರಲಿದೆ. ನಾನು ಈ ಹಿಂದೆ ಸಮುದಾಯದ/ಲಿಂಗದ ವಿರುದ್ಧ ದ್ವೇಷ ಮತ್ತು ಅವಹೇಳನ ಮಾಡುವ ಚಲನಚಿತ್ರಗಳಲ್ಲಿ ನಟಿಸಲು ನಿರಾಕರಿಸಿದ್ದೆ. ಆದರೆ, ಸೈದ್ಧಾಂತಿಕ ಆಧಾರದ ಮೇಲೆ ಸೆನ್ಸಾರ್ ಮಂಡಳಿಯಿಂದ ಅನುಮತಿ ಪಡೆದ ಚಲನಚಿತ್ರವನ್ನು ರಾಜ್ಯವು ನಿಷೇಧಿಸಬೇಕು ಎಂದು ಹೇಳುವುದನ್ನು ನಾನು ಒಪ್ಪುವುದಿಲ್ಲ. ನಮಗೆ ಅಭಿವ್ಯಕ್ತಿ ಸ್ವಾತಂತ್ರ್ಯ ಅತ್ಯಗತ್ಯ ಎಂದು ನಟ ಚೇತನ್ ಅವರು ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದಾರೆ.


ವಿವಾದಾತ್ಮಕ ಸಿನಿಮಾ ದಿ ಕೇರಳ ಸ್ಟೋರಿ ಮೇ 5ರಂದು ಥಿಯೇಟರ್ಗಳಲ್ಲಿ ರಿಲೀಸ್ ಆಗಲಿದೆ. ಸಿನಿಮಾ ರಿಲೀಸ್ಗೆ ಇನ್ನೂ ಬೆರಳೆಣಿಕೆಯ ದಿನಗಳಷ್ಟೇ ಬಾಕಿ ಇದೆ. ಸಿನಿಮಾ ಬಿಡುಗಡೆಗೆ ಕೆಲವೇ ದಿನ ಬಾಕಿ ಇರುವಂತಹ ಸಂದರ್ಭದಲ್ಲಿ ಕಾಂಗ್ರೆಸ್ ಶುಕ್ರವಾರ ಕೇರಳ ಸರ್ಕಾರದ ಮುಂದೆ ಹೊಸ ಬೇಡಿಕೆ ಇಟ್ಟಿದೆ. ಸುಳ್ಳುಗಳು ತುಂಬಿರುವ, ಮುಸ್ಲಿಂ ಸಮುದಾಯವನ್ನು ಕೆಟ್ಟದಾಗಿ ತೋರಿಸಿರುವ ಈ ಸಿನಿಮಾದ ಪ್ರದರ್ಶನಕ್ಕೆ ಅವಕಾಶ ನೀಡಬಾರದು ಎಂದು ಕಾಂಗ್ರೆಸ್ ಕೇರಳ ಸರ್ಕಾರಕ್ಕೆ ಮನವಿ ಮಾಡಿದೆ.



ಕೇರಳದ ಆಡಳಿತ ಪಕ್ಷ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (Marxist)ನ ಯೂತ್ ವಿಂಗ್ ದಿ ಡೆಮಾಕ್ರೆಟಿಕ್ ಯೂತ್ ಫೆಡರೇಷನ್ ಆಫ್ ಇಂಡಿಯಾ (ಡಿವೈಎಫ್ಐ) (DYFI) ಕೂಡಾ ಸಿನಿಮಾವನ್ನು ವಿರೋಧಿಸಿದೆ. ಸಂಘ ಪರಿವಾದ ಪ್ರಭಾವಿ ಮಾಧ್ಯಮವನ್ನು ಬಳಸಿಕೊಂಡು ಕೇರಳ ರಾಜ್ಯ ಹಾಗೂ ಪೂರ್ತಿ ಸಮುದಾಯವನ್ನು ಅವಮಾನಿಲಸು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದೆ. ಆದಾ ಶರ್ಮಾ ಸಣ್ಣ ಹಳ್ಳಿಯ ಹುಡುಗಿ ಪಾತ್ರವನ್ನು ಮಾಡಿದ್ದು ಆಕೆ ಯಾವ ರೀತಿ ಪ್ರೀತಿಯಲ್ಲಿ ಬೀಳುತ್ತಾಳೆ, ಮುಸ್ಲಿಂ ಆಗಿ ಮತಾಂತರವಾಗುತ್ತಾಳೆ ಎಂಬೆಲ್ಲ ವಿಚಾರಗಳನ್ನು ಈ ಸಿನಿಮಾದಲ್ಲಿ ತಿಳಿಸಲಾಗಿದೆ.
sandalwood actor chethan reacts to the kerala story movie controversy.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 12:33 pm
HK News Staffer
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm