ಬ್ರೇಕಿಂಗ್ ನ್ಯೂಸ್
01-05-23 01:09 pm Source: news18 ಸಿನಿಮಾ
ಮೇ 5ರಂದು ರಿಲೀಸ್ ಆಗಲಿರುವ ದಿ ಕೇರಳ ಸ್ಟೋರಿ ಸಿನಿಮಾ ಈಗಾಗಲೇ ಭಾರೀ ಸದ್ದು ಮಾಡುತ್ತಿದೆ. ಬಾಲಿವುಡ್ ನಟಿ ಆದಾ ಶರ್ಮಾ ಪ್ರಮುಖ ಪಾತ್ರದಲ್ಲಿ ನಟಿಸಿರುವ ಈ ಸಿನಿಮಾ ಟ್ರೈಲರ್ ರಿಲೀಸ್ ಆಗಿ ಭಾರೀ ವಿವಾದ ಸೃಷ್ಟಿಸಿದೆ. ಈ ಸಿನಿಮಾವನ್ನು ಯಾವುದೇ ಕಾರಣಕ್ಕೂ ಬಿಡುಗಡೆ ಮಾಡಲು ಅವಕಾಶ ನೀಡಬಾರದು ಎಂದು ಕೇರಳ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸುತ್ತಿದೆ. ಒಂದು ಸಮುದಾಯವನ್ನು ಅವಮಾನಿಸುವ, ವಿಷ ಬೀಜ ಬಿತ್ತುವ ಸಿನಿಮಾ ರಿಲೀಸ್ ಬೇಡ ಎಂದು ಸರ್ಕಾರಕ್ಕೆ ಮನವಿ ಮಾಡಿದೆ.


ಈ ಒಂದು ಬೆಳವಣಿಗೆ ಬಗ್ಗೆ ಚೇತನ್ ಅವರು ಪ್ರತಿಕ್ರಿಯಿಸಿದ್ದಾರೆ. ವಿವಾದಾತ್ಮಕ ಚಿತ್ರ 'ದಿ ಕೇರಳ ಸ್ಟೋರಿ' ಮೇ 5 ರಂದು ತೆರೆಗೆ ಬರಲಿದೆ. ನಾನು ಈ ಹಿಂದೆ ಸಮುದಾಯದ/ಲಿಂಗದ ವಿರುದ್ಧ ದ್ವೇಷ ಮತ್ತು ಅವಹೇಳನ ಮಾಡುವ ಚಲನಚಿತ್ರಗಳಲ್ಲಿ ನಟಿಸಲು ನಿರಾಕರಿಸಿದ್ದೆ. ಆದರೆ, ಸೈದ್ಧಾಂತಿಕ ಆಧಾರದ ಮೇಲೆ ಸೆನ್ಸಾರ್ ಮಂಡಳಿಯಿಂದ ಅನುಮತಿ ಪಡೆದ ಚಲನಚಿತ್ರವನ್ನು ರಾಜ್ಯವು ನಿಷೇಧಿಸಬೇಕು ಎಂದು ಹೇಳುವುದನ್ನು ನಾನು ಒಪ್ಪುವುದಿಲ್ಲ. ನಮಗೆ ಅಭಿವ್ಯಕ್ತಿ ಸ್ವಾತಂತ್ರ್ಯ ಅತ್ಯಗತ್ಯ ಎಂದು ನಟ ಚೇತನ್ ಅವರು ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದಾರೆ.


ವಿವಾದಾತ್ಮಕ ಸಿನಿಮಾ ದಿ ಕೇರಳ ಸ್ಟೋರಿ ಮೇ 5ರಂದು ಥಿಯೇಟರ್ಗಳಲ್ಲಿ ರಿಲೀಸ್ ಆಗಲಿದೆ. ಸಿನಿಮಾ ರಿಲೀಸ್ಗೆ ಇನ್ನೂ ಬೆರಳೆಣಿಕೆಯ ದಿನಗಳಷ್ಟೇ ಬಾಕಿ ಇದೆ. ಸಿನಿಮಾ ಬಿಡುಗಡೆಗೆ ಕೆಲವೇ ದಿನ ಬಾಕಿ ಇರುವಂತಹ ಸಂದರ್ಭದಲ್ಲಿ ಕಾಂಗ್ರೆಸ್ ಶುಕ್ರವಾರ ಕೇರಳ ಸರ್ಕಾರದ ಮುಂದೆ ಹೊಸ ಬೇಡಿಕೆ ಇಟ್ಟಿದೆ. ಸುಳ್ಳುಗಳು ತುಂಬಿರುವ, ಮುಸ್ಲಿಂ ಸಮುದಾಯವನ್ನು ಕೆಟ್ಟದಾಗಿ ತೋರಿಸಿರುವ ಈ ಸಿನಿಮಾದ ಪ್ರದರ್ಶನಕ್ಕೆ ಅವಕಾಶ ನೀಡಬಾರದು ಎಂದು ಕಾಂಗ್ರೆಸ್ ಕೇರಳ ಸರ್ಕಾರಕ್ಕೆ ಮನವಿ ಮಾಡಿದೆ.



ಕೇರಳದ ಆಡಳಿತ ಪಕ್ಷ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (Marxist)ನ ಯೂತ್ ವಿಂಗ್ ದಿ ಡೆಮಾಕ್ರೆಟಿಕ್ ಯೂತ್ ಫೆಡರೇಷನ್ ಆಫ್ ಇಂಡಿಯಾ (ಡಿವೈಎಫ್ಐ) (DYFI) ಕೂಡಾ ಸಿನಿಮಾವನ್ನು ವಿರೋಧಿಸಿದೆ. ಸಂಘ ಪರಿವಾದ ಪ್ರಭಾವಿ ಮಾಧ್ಯಮವನ್ನು ಬಳಸಿಕೊಂಡು ಕೇರಳ ರಾಜ್ಯ ಹಾಗೂ ಪೂರ್ತಿ ಸಮುದಾಯವನ್ನು ಅವಮಾನಿಲಸು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದೆ. ಆದಾ ಶರ್ಮಾ ಸಣ್ಣ ಹಳ್ಳಿಯ ಹುಡುಗಿ ಪಾತ್ರವನ್ನು ಮಾಡಿದ್ದು ಆಕೆ ಯಾವ ರೀತಿ ಪ್ರೀತಿಯಲ್ಲಿ ಬೀಳುತ್ತಾಳೆ, ಮುಸ್ಲಿಂ ಆಗಿ ಮತಾಂತರವಾಗುತ್ತಾಳೆ ಎಂಬೆಲ್ಲ ವಿಚಾರಗಳನ್ನು ಈ ಸಿನಿಮಾದಲ್ಲಿ ತಿಳಿಸಲಾಗಿದೆ.
sandalwood actor chethan reacts to the kerala story movie controversy.
18-06-26 01:25 pm
HK News Staffer
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm