ಬ್ರೇಕಿಂಗ್ ನ್ಯೂಸ್
16-05-23 12:12 pm Source: news18 ಸಿನಿಮಾ
ಸಮಂತಾ ನಂತರ ನಾಗ ಚೈತನ್ಯ ಕೂಡ ಹಿನ್ನಡೆ ಅನುಭವಿಸಿದ್ದಾರೆ. ನಟನ ಇತ್ತೀಚಿನ ಚಿತ್ರ ಕಸ್ಟಡಿ ನಿರೀಕ್ಷೆಯಂತೆ ಪ್ರದರ್ಶನ ನೀಡಲು ವಿಫಲವಾಗಿದೆ. ಗಲ್ಲಾಪೆಟ್ಟಿಗೆಯಲ್ಲೂ ನಿರಾಶೆ ಮೂಡಿಸಿದೆ. ಕಸ್ಟಡಿ ಚಿತ್ರವನ್ನು ಚೊಚ್ಚಲ ನಿರ್ದೇಶಕ ವೆಂಕಟ್ ಪ್ರಭು ನಿರ್ದೇಶಿಸಿದ್ದಾರೆ. ನಾಗ ಚೈತನ್ಯ ಅವರ ಹೊಸ ಚಿತ್ರಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು. ಆದರೆ, ನಟನ ಚಿತ್ರ ನಿರೀಕ್ಷೆಯಂತಿಲ್ಲ ಎಂದು ಹೇಳಲಾಗ್ತಿದೆ.
ಹಿಂದೂಸ್ತಾನ್ ಟೈಮ್ಸ್ ವರದಿಯ ಪ್ರಕಾರ, ಚಿತ್ರವು ಬಿಡುಗಡೆಯಾದ ಮೊದಲ ವಾರದಲ್ಲಿ ಹಿನ್ನೆಡೆಯನ್ನು ಎದುರಿಸಿತು. ಮೊದಲ ವಾರದ ನಂತರ, ಕೇವಲ 8.6 ಕೋಟಿ ಕಲೆಕ್ಷನ್ ಮಾಡಿದೆ. ಈ ಸಿನಿಮಾದಲ್ಲಿ ನಾಗ ಚೈತನ್ಯ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅರವಿಂದ್ ಸ್ವಾಮಿ, ಶರತ್ ಕುಮಾರ್, ಕೀರ್ತಿ ಶೆಟ್ಟಿ, ಪ್ರಿಯಾಮಣಿ, ಪ್ರೇಮ್ಜಿ, ವೆನ್ನಲ ಕಿಶೋರ್ ಮತ್ತು ಸಂಪತ್ ರಾಜ್ ಕೂಡ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.


ಇತ್ತೀಚೆಗಷ್ಟೇ ನಾಗ ಚೈತನ್ಯ ಅವರ ಮಾಜಿ ಪತ್ನಿ ಸಮಂತಾ ಸಿನಿಮಾ ಶಾಕುಂತಲಂ ದೊಡ್ಡ ಫ್ಲಾಪ್ ಆಗಿತ್ತು. ಇದಾದ ನಂತರ ನಾಗ ಚೈತನ್ಯ ಅವರ ಚಿತ್ರವೂ ಸೋಲು ಕಂಡಿದ್ದು, ವಿಚ್ಛೇದನ ಬಳಿಕ ಇಬ್ಬರ ಲಕ್ ಬದಲಾಗಿ ಹೋಗಿದೆ. ತೆಲುಗು ಅಲ್ಲದೆ ತಮಿಳಿನಲ್ಲೂ ಚಿತ್ರ ಬಿಡುಗಡೆಯಾಗಿದೆ. ಈ ಚಿತ್ರ ತಮಿಳಿನಲ್ಲಿ ನಾಗ ಚೈತನ್ಯ ಅವರ ಚೊಚ್ಚಲ ಚಿತ್ರವೂ ಆಗಿತ್ತು. ನಟ ನಾಗ ಚೈತನ್ಯ ಅವರೇ ಸ್ವತಃ ಡಬ್ಬಿಂಗ್ ಮಾಡಿದ್ದಾರೆ.

ಈ ಚಿತ್ರವು ಮೊದಲ ದಿನ ಎರಡೂ ತೆಲುಗು ರಾಜ್ಯಗಳಲ್ಲಿ ಒಟ್ಟು 1.82 ಕೋಟಿ ಕಲೆಕ್ಷನ್ ಮಾಡಿದೆ. ಎರಡನೇ ದಿನದಲ್ಲಿ 80 ಲಕ್ಷ ಮತ್ತು ಭಾನುವಾರದಂದು 78 ಲಕ್ಷಗಳನ್ನು ಸಂಗ್ರಹಿಸಿದೆ. ಒಟ್ಟಾರೆಯಾಗಿ, ಕಸ್ಟಡಿ ಈ 3 ದಿನಗಳಲ್ಲಿ 3.40 Cr ನಿವ್ವಳ ಮತ್ತು 6.25 Cr~ ಗ್ರಾಸ್ ಸಂಗ್ರಹಿಸಿದೆ.
naga chaitanya custody disappoints at box office.
18-06-26 01:25 pm
HK News Staffer
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm