ಬ್ರೇಕಿಂಗ್ ನ್ಯೂಸ್
18-05-23 02:32 pm Source: news18 ಸಿನಿಮಾ
ಇತ್ತೀಚಿಗೆ ಯಂಗ್ ಹೀರೋಯಿನ್ಗಳು ಒಬ್ಬರ ನಂತರ ಒಬ್ಬರಂತೆ ಮದುವೆಯಾಗುತ್ತಿದ್ದು, ಟಾಲಿವುಡ್ನ ಮೋಸ್ಟ್ ಎಲಿಜಿಬಲ್ ಬ್ಯಾಚುಲರ್ಗಳ ಮದುವೆಯ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಇದೀಗ ನಾಯಕಿ ಕೀರ್ತಿ ಸುರೇಶ್ ಮದುವೆ ಬಗ್ಗೆಯೂ ಹಲವು ಸುದ್ದಿಗಳು ಹರಿದಾಡುತ್ತಿವೆ. ಕೀರ್ತಿ ಸುರೇಶ್ ಉದ್ಯಮಿಯೊಬ್ಬರನ್ನು ಮದುವೆಯಾಗಲಿದ್ದಾರೆ ಎನ್ನುವ ಸುದ್ದಿ ಹಬ್ಬಿದೆ. ಈ ಸಮಯದಲ್ಲಿ ಕೀರ್ತಿ ಒಬ್ಬ ಹುಡುಗನ ಜೊತೆ ಕಾಣಿಸಿಕೊಂಡಿದ್ದು, ಹಲವು ಚರ್ಚೆಗೆ ಕಾರಣವಾಗಿತ್ತು. ಈತ ಬ್ಯುಸಿನೆಸ್ ಮ್ಯಾನ್ ಫರ್ಹಾನ್, ಕೀರ್ತಿ ಅನೇಕ ವರ್ಷಗಳಿಂದ ಈತನನ್ನು ಪ್ರೀತಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಕೀರ್ತಿ ಸುರೇಶ್ ಜೊತೆ ಇರುವ ಫರ್ಹಾನ್, ರಿಯಲ್ ಎಸ್ಟೇಟ್ ಉದ್ಯಮಿ ಎಂದು ಹೇಳಲಾಗ್ತಿದೆ. ಉದ್ಯಮಿ ಫರ್ಹಾನ್ ನನ್ನು ಕೀರ್ತಿ ಸುರೇಶ್ ಪ್ರೀತಿಸುತ್ತಿದ್ದು, ಶೀಘ್ರದಲ್ಲೇ ಅವರ ಮದುವೆ ಬಗ್ಗೆ ಅನೌನ್ಸ್ ಮಾಡಲಿದ್ದಾರೆ. ಇಬ್ಬರೂ ಒಟ್ಟಿಗೆ ಇರುವ ಫೋಟೋ ಇದೀಗ ವೈರಲ್ ಆಗಿದ್ದು, ಇವರೇ ಕೀರ್ತಿಯ ಭಾವಿ ಪತಿ ಎಂಬ ಮಾತುಗಳು ಕೇಳಿ ಬರುತ್ತಿವೆ. ಮಹಾನಟಿ ಚಿತ್ರದ ಮೂಲಕ ಮಹಾನಟಿ ಎಂದೇ ಖ್ಯಾತಿ ಗಳಿಸಿರುವ ದಕ್ಷಿಣದ ಚೆಲುವೆ ಕೀರ್ತಿ ಸುರೇಶ್ ಸೋಷಿಯಲ್ ಮೀಡಿಯಾದಲ್ಲಿ ವಿಭಿನ್ನ ಶೈಲಿಯನ್ನು ಕಾಯ್ದುಕೊಳ್ಳುತ್ತಿದ್ದಾರೆ. ಕೀರ್ತಿ ಸುರೇಶ್ ಅನೇಕ ಸಿನಿಮಾಗಳಲ್ಲಿ ಸಾಫ್ಟ್ ಮತ್ತು ಟ್ರೆಡಿಷನ್ ಗರ್ಲ್ ಪಾತ್ರಗಳಲ್ಲಿ ನಟಿಸಿದ್ದಾರೆ.
ಸೌತ್, ನಾರ್ತ್ ಎಂಬ ಬೇಧವಿಲ್ಲದೆ ಪ್ರತಿ ನಾಯಕಿಯೂ ಸೋಶಿಯಲ್ ಮೀಡಿಯಾದಲ್ಲಿ ಜನಪ್ರಿಯತೆಗಾಗಿ ಗಳಿಸಿದ್ದಾರೆ. ಆ ಪಟ್ಟಿಗೆ ಈ ಮಹಾನಟಿ ಕೂಡ ಸೇರಿಕೊಂಡಿದ್ದಾರೆ. ಬಾಲಿವುಡ್ ಮತ್ತು ಟಾಲಿವುಡ್ನಲ್ಲಿ ಯಾರೊಂದಿಗಾದರೂ ಸ್ಪರ್ಧಿಸುವಂತೆ ಫೋಟೋಗಳಿಗೆ ಪೋಸ್ ನೀಡುತ್ತಿದ್ದಾರೆ. ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಜೊತೆಗೆ ಸರ್ಕಾರ ವರಿ ಹಾಡಿನಲ್ಲಿ ಸ್ವಲ್ಪ ನಾಟಿ ಪಾತ್ರದಲ್ಲಿ ನಟಿಸಿದ ಕೀರ್ತಿ ಸುರೇಶ್ ಸಾಮಾಜಿಕ ಜಾಲತಾಣಗಳಲ್ಲಿ ಅದೇ ಗತಿಯನ್ನು ಮುಂದುವರೆಸಿದ್ದಾರೆ. ಕೀರ್ತಿಸುರೇಶ್ ಶೇರ್ ಮಾಡಿರುವ ಫೋಟೋಗಳು ಇದೀಗ ವೈರಲ್ ಆಗಿದೆ.
ಕೀರ್ತಿ ಸುರೇಶ್ ಗುಡ್ ಲಕ್ ಸಖಿ, ಮಹಾನಟಿ ಮತ್ತು ಸಾನಿ ಮುಂತಾದ ಲೇಡಿ ಓರಿಯೆಂಟೆಡ್ ಚಿತ್ರಗಳಲ್ಲಿ ನಟಿಸುವ ಮೂಲಕ ಫೇಮಸ್ ಆಗಿದ್ದಾರೆ. ರಾಷ್ಟ್ರಮಟ್ಟದಲ್ಲಿ ಅತ್ಯುತ್ತಮ ನಟಿ ಪ್ರಶಸ್ತಿಯನ್ನೂ ಪಡೆದಿದ್ದಾರೆ. ಇತ್ತೀಚೆಗೆ, ಮತ್ತೊಂದು ಯಶಸ್ವಿ ದಸರಾ ಚಿತ್ರವನ್ನು ಮಾಡಿದರು. ಕೀರ್ತಿ ಸುರೇಶ್ ಪ್ರಸ್ತುತ ಮೆಗಾಸ್ಟಾರ್ ಚಿರಂಜೀವಿ ಜೊತೆ ಭೋಲಾ ಶಂಕರ್ ಚಿತ್ರದಲ್ಲಿ ನಟಿಸುತ್ತಿದ್ದಾರೆ. ತಮಿಳಿನ ಸೂಪರ್ ಹಿಟ್ ಸಿನಿಮಾ ವೇದಾಲಂ ರಿಮೇಕ್ ಆಗಿ ಈ ಸಿನಿಮಾ ತಯಾರಾಗುತ್ತಿದೆ. ಈ ಚಿತ್ರವನ್ನು ಮೆಹರ್ ರಮೇಶ್ ನಿರ್ದೇಶಿಸುತ್ತಿದ್ದು, ಎಕೆ ಎಂಟರ್ಟೈನ್ಮೆಂಟ್ಸ್ ಬ್ಯಾನರ್ ಅಡಿಯಲ್ಲಿ ರಾಮಬ್ರಹ್ಮ ಸುಂಕರ ನಿರ್ಮಿಸುತ್ತಿದ್ದಾರೆ.
keerthy suresh marriage issue viral on social media.
08-06-23 12:43 pm
Bangalore Correspondent
ಸಕಲೇಶಪುರ ; ಕ್ಯಾಂಪ್ನಲ್ಲಿ ಮಧ್ಯಾಹ್ನದ ಊಟ ಸೇವಿಸಿ...
07-06-23 06:54 pm
ವಯಸ್ಸು, ಅನಾರೋಗ್ಯ, ವಿರೋಧಿ ಅಲೆ ; 25ರಲ್ಲಿ 13 ಬಿಜ...
07-06-23 03:17 pm
13 ಸಂಸದರ ವಿರುದ್ಧ ಅಪಪ್ರಚಾರ, ಟಿಕೆಟ್ ಇಲ್ಲವೆಂದು ಸ...
06-06-23 10:38 pm
ಲೋಕಸಭೆ ಚುನಾವಣೆಗೆ ಬಿಜೆಪಿ- ಜೆಡಿಎಸ್ ಮೈತ್ರಿ ಸುಳಿವ...
06-06-23 10:28 pm
07-06-23 10:58 pm
HK News Desk
ಟಿಪ್ಪು, ಔರಂಗಜೇಬ್ ವೈಭವೀಕರಿಸಿ ಪೋಸ್ಟ್ ; ಕೊಲ್ಲಾಪು...
07-06-23 10:32 pm
ಯುಪಿಯಲ್ಲಿ ಅತೀಕ್ ಅಹ್ಮದ್ ಬೆನ್ನಲ್ಲೇ ಮತ್ತೊಬ್ಬ ಗ...
07-06-23 08:51 pm
ಮೋದಿ ಮ್ಯಾಜಿಕ್, ಹಿಂದುತ್ವದಿಂದ ಚುನಾವಣೆ ಗೆಲ್ಲಕ್ಕಾ...
06-06-23 09:37 pm
ತ್ರಿವಳಿ ರೈಲು ದುರಂತ ; 40 ಜನರ ಸಾವಿಗೆ ವಿದ್ಯುತ್ ಶ...
06-06-23 08:18 pm
08-06-23 10:48 am
Mangalore Correspondent
ಮಂಗಳೂರು-ಅಹಮದಾಬಾದ್ ನಡುವೆ ವಿಶೇಷ ರೈಲು ; ಜೂನ್ 9ರ...
07-06-23 11:09 pm
ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಭೀತಿ ; ಕರಾವಳಿಯಲ್ಲ...
07-06-23 09:34 pm
ಹೃದಯ ತಜ್ಞರು ಮನೆ ಬಾಗಿಲಿಗೆ ; ದೇಶದಲ್ಲೇ ಮೊದಲ ಬಾರಿ...
07-06-23 09:13 pm
ಪಿಲಿಕುಳ ಜೈವಿಕ ಉದ್ಯಾನದಲ್ಲಿ ಹುಲಿ ಸಾವು ; ಎರಡು ಹು...
07-06-23 02:04 pm
06-06-23 10:43 am
Mangalore Correspondent
Illegal Cow Transport: ಕುತ್ತಾರಿನಲ್ಲಿ ಉಸಿರುಗಟ್...
05-06-23 01:02 pm
ಪರವಾನಿಗೆ ಇಲ್ಲದೆ ಮನೆ ನಿರ್ಮಾಣ ; ಪ್ರಶ್ನಿಸಿದಕ್ಕೆ...
04-06-23 02:14 pm
ತರೀಕೆರೆ ಕಾಂಗ್ರೆಸ್ ಶಾಸಕರ ಅಭಿನಂದನ ಕಾರ್ಯಕ್ರಮದಲ್ಲ...
04-06-23 12:47 pm
ಹಿಂದು ಹೆಸರಲ್ಲಿ ಪ್ರೇಮಿಸಿ ಯುವತಿಯರ ಬ್ಲಾಕ್ಮೇಲ್ ;...
03-06-23 08:51 pm