ಬ್ರೇಕಿಂಗ್ ನ್ಯೂಸ್
19-05-23 02:45 pm Source: news18 ಸಿನಿಮಾ
ಸುದಿಪ್ತೋ ಸೆನ್ ನಿರ್ದೇಶನದ ದಿ ಕೇರಳ ಸ್ಟೋರಿ ಸಿನಿಮಾ ಈಗ ವೈರಲ್ ಆಗಿದೆ. ಸಿನಿಮಾಗೆ ವ್ಯಾಪಕ ಮೆಚ್ಚುಗೆ ಹರಿದುಬಂದಿದೆ. ಹಾಗೆಯೇ ಟೀಕೆಯೂ ವ್ಯಕ್ತವಾಗಿದೆ. ಬಹಳಷ್ಟು ಜನರು ಇದನ್ನು ಪ್ರೊಪಗಾಂಡ ಮೂವಿ ಎಂದು ಕರೆದಿದ್ದಾರೆ. ಈಗ ನಟ ಪ್ರಕಾಶ್ ರಾಜ್ ಕೂಡಾ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ವಿಶ್ವಗುರುಗಳೇ ಈ ಸುಳ್ಳಿನ ಕತೆಯನ್ನು ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಮತಯಾಚನೆಗಾಗಿ ಯಾಕೆ ಪ್ರಯೋಗಿಸಿದಿರಿ.. ಎಂದು ಬರೆದಿರುವ ಪ್ರಕಾಶ್ ರಾಜ್ ಅವರು ಜಸ್ಟ್ ಆಸ್ಕಿಂಗ್ ಎಂಬ ಹ್ಯಾಶ್ಟ್ಯಾಗ್ ಬಳಸಿದ್ದಾರೆ.
ಸಿನಿಮಾದಲ್ಲಿ ಡಿಸ್ಕ್ಲೈಮರ್ ಸೇರಿಸಬೇಕು. 32 ಸಾವಿರ ಅಥವಾ ಇನ್ಯಾವುದೇ ಸಂಖ್ಯೆಯಷ್ಟು ಯುವತಿಯರು ಮತಾಂತರವಾಗಿದ್ದಾರೆ ಎಂದು ತೋರಿಸಲು ಯಾವುದೇ ಸಾಕ್ಷಿಗಳಿಲ್ಲ. ಇಲ್ಲಿ ತೋರಿಸಲಾದ ವಿಷಯದ ಒಂದು ಕಾಲ್ಪನಿಕ ಕಥಾ ವಸ್ತು ಆಧರಿಸಿದ ಸಿನಿಮಾ ಇದಾಗಿದೆ ಎಂದು ಬರೆಯಬೇಕು ಎಂದು ಸುಪ್ರೀಂ ಕೋರ್ಟ್ ದೀ ಕೇರಳ ಸ್ಟೋರಿ ಸಿನಿಮಾಗೆ ಸೂಚನೆ ನೀಡಿತ್ತು.


ಕಾಶ್ಮೀರ್ ಫೈಲ್ಸ್ ಸಿನಿಮಾದ ಬಗ್ಗೆ ಕೆಲವು ವಿವಾದಗಳು ಎದ್ದರೂ ದೊಡ್ಡ ಯಶಸ್ಸು ಕಂಡಿತ್ತು. ಇತ್ತೀಚೆಗಷ್ಟೇ ಕೇರಳದ ಜೊತೆಗೆ ಚಿತ್ರರಂಗದ ಹಲವೆಡೆ ಈ ಸಿನಿಮಾದ ಬಗ್ಗೆ ವಿವಾದ ಎದ್ದಿದ್ದರೂ ಇದೇ ವರ್ಗದ ಮತ್ತೊಂದು ಸಿನಿಮಾ ‘ದಿ ಕೇರಳ ಸ್ಟೋರಿ’ ಈಗ ಬ್ಲಾಕ್ ಬಸ್ಟರ್ ಟಾಕ್ ಆಗಿದೆ. ಮೇಲಾಗಿ ಬಾಕ್ಸ್ ಆಫೀಸ್ನಲ್ಲಿ ಕಲೆಕ್ಷನ್ ಹೆಚ್ಚಾಗಿದೆ. ಈಗಾಗಲೇ ಬಿಡುಗಡೆಯಾಗಿರುವ ಪ್ರಚಾರ ಚಿತ್ರಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವು ಗುಂಪುಗಳು ಈ ಸಿನಿಮಾವನ್ನು ವಿರೋಧಿಸುತ್ತಿದ್ದರೆ, ಇನ್ನು ಕೆಲವು ಗುಂಪುಗಳು ಸಿನಿಮಾ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಚಿತ್ರಕ್ಕೆ ಸೆನ್ಸಾರ್ ತಂಡ 10 ಕಟ್ಗಳನ್ನು ಹೇಳಿದೆ. ತಮಿಳುನಾಡು, ಕೇರಳದಂತಹ ರಾಜ್ಯಗಳು ಈ ಸಿನಿಮಾದಿಂದ ಶಾಂತಿ ಮತ್ತು ಭದ್ರತೆಗೆ ಧಕ್ಕೆಯಾಗುತ್ತಿದೆ ಎಂದು ಹೇಳಿ ನಿಷೇಧ ಹೇರಿವೆ.

ನಿರ್ದೇಶಕ ಸುದಿಪ್ಟೋ ಸೆನ್ ಹಾಗೂ ವಿ.ಪುಲ್ ಅಮೃತ್ಲಾಲ್ ಶಾ ಅವರು ಸಿನಿಮಾದಲ್ಲಿ ಕೇರಳದಿಂದ ನಾಪತ್ತೆಯಾದ 32000 ಯುವತಿಯರ ಕಥೆ ಇದು ಎಂದು ಹೇಳಿದ್ದರು. ಇಸ್ಲಾಂಗೆ (Islam) ಮತಾಂತರಗೊಂಡು (Conversion) ನಂತರ ಅಫ್ಘಾನಿಸ್ತಾನ (Afghanistan), ಟರ್ಕಿ, ಸಿರಿಯಾದಲ್ಲಿ ಐಸಿಸ್ ಸೇರಲ್ಪಟ್ಟ ಯುವತಿಯರ ಕಥೆ ಎಂದು ಹೇಳಿದ್ದರು. ಇದರ ಸತ್ಯಾಸತ್ಯತೆ ಬಗ್ಗೆ ಪ್ರಶ್ನೆ ಏಳುತ್ತಿದ್ದಂತೆ 32,000 ಯುವತಿಯರು ಎಂಬಲ್ಲಿ ಮೂವರು ಯುವತಿಯರ ಕಥೆ ಎಂದು ಬಲಾಯಿಸಲಾಯಿತು. ಈ ನಂಬರ್ಸ್ ವಿಚಾರವಾಗಿ ಸಾಕಷ್ಟು ಟೀಕೆ ಎದುರಾಗಿತ್ತು.
actor prakash raj comments on the kerala story movie.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm