ಬ್ರೇಕಿಂಗ್ ನ್ಯೂಸ್
23-05-23 12:59 pm Source: news18 ಸಿನಿಮಾ
ಜೂನಿಯರ್ ಎನ್ಟಿಆರ್ ಅವರ ಒಂಭತ್ತು ಜನ ಅಭಿಮಾನಿಗಳನ್ನು ಪೊಲೀಸರು ಅರೆಸ್ಟ್ ಮಾಡಿರುವ ಘಟನೆ ನಡೆದಿದೆ. ಜೂನಿಯರ್ ಎನ್ಟಿಆರ್ ಅವರ ಬರ್ತ್ಡೇ ಸಂದರ್ಭವೇ ಅವರ ಅಭಿಮಾನಿಗಳನ್ನು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ. ಆಡುಗಳನ್ನು ಬಲಿಕೊಟ್ಟು ನಟನ ಬ್ಯಾನರ್ಗೆ ರಕ್ತಾಭಿಷೇಕ ಮಾಡಿದ ಹಿನ್ನೆಲೆಯಲ್ಲಿ ನಟನ ಅಭಿಮಾನಿಗಳನ್ನು ಬಂಧಿಸಲಾಗಿದೆ. ಪ್ರಾಣಿಗಳ ಬಲಿ ನಿಷೇಧಿಸಲಾಗಿದ್ದು ಆ ಕೃತ್ಯದಲ್ಲಿ ಪಾಲ್ಗೊಂಡಿದ್ದಕ್ಕೆ ಅಭಿಮಾನಿಗಳು ಅರೆಸ್ಟ್ ಆಗಿದ್ದಾರೆ.
ವಿಜಯವಾಡದಲ್ಲಿ ಘಟನೆ ನಡೆದಿದೆ. ನಟನ ಅಭಿಮಾನಿಗಳು ನಟನ ಬರ್ತ್ಡೇ ಆಚರಣೆ ಭಾಗವಾಗಿ ಥಿಯೇಟರ್ ಮುಂದೆ ಅವರ ಫ್ಲೆಕ್ಸಿ ಬ್ಯಾನರ್ಗೆ ಆಡುಗಳನ್ನು ಬಲಿ ಕೊಟ್ಟು ರಕ್ತ ಚಿಮ್ಮುವಂತೆ ಮಾಡಿದ್ದಾರೆ. ಅಭಿಮಾನಿಗಳು ಎರಡು ಆಡುಗಳನ್ನು ಸಾಯಿಸಿ ರಕ್ತಾಭಿಷೇಕ ಮಾಡಿದ್ದಾಗಿ ಆರೋಪಿಸಲಾಗಿದೆ. ನಟನ ಬರ್ತ್ಡೇ ಪ್ರಯುಕ್ತ ಅವರ ಹಳೆಯ ಸಿನಿಮಾ ಸಿಂಹಾದ್ರಿ ರಿ ರಿಲೀಸ್ ಆಗಿದೆ. ಈ ಸಂದರ್ಭ ಥಿಯೇಟರ್ ಮುಂದೆ ಈ ಘಟನೆ ನಡೆದಿದೆ.

ಪಿ. ಶಿವ ನಾಗ ರಾಜು, ಕೆ ಸಾಯಿ, ಜಿ ಸಾಯಿ, ಡಿ ನಾಗ ಭೂಷಣಂ, ವಿ ಸಾಯಿ, ಪಿ ನಾಗೇಶ್ವರ ರಾವ್, ವೈ. ಧರಣಿ, ಪಿ. ಶಿವ ಹಾಗೂ ಬಿ. ಅನಿಲ್ ಕುಮಾರ್ ಎಂಬವರನ್ನು ಈ ಘಟನೆಗೆ ಸಂಬಂಧಿಸಿ ಅರೆಸ್ಟ್ ಮಾಡಲಾಗಿದೆ. ಶಿವ ನಾಗ ರಾಜು ಹಾಗೂ ಅವರ ಸ್ನೇಹಿತರು ಸಿರಿ ಕೃಷ್ಣ ಹಾಗೂ ಸಿರಿ ವೆಂಕಟ ಥಿಯೇಟರ್ನಲ್ಲಿ ಮೇ 20ರಂದು ನಟನ ಬರ್ತ್ಡೇ ಆಚರಿಸಿದ್ದಾರೆ. ಈ ಸಂದರ್ಭದಲ್ಲಿಯೇ ಆಡನ್ನು ಬಲಿಕೊಟ್ಟ ಘಟನೆಯೂ ನಡೆದಿದೆ.

ನಟನ ಬರ್ತ್ಡೇ ಸಂದರ್ಭ ಇನ್ನೊಂದು ಘಟನೆಯಲ್ಲಿ ನಟ ಅಭಿಮಾನಿಗಳು ಥಿಯೇಟರ್ ಒಳಗಡೆ ಪಟಾಕಿ ಸಿಡಿಸಿ ಚಿತ್ರಮಂದಿರದೊಳಗೆ ಬೆಂಕಿ ಅವಘಡ ಸಂಭವಿಸುವಂತೆ ಮಾಡಿದ್ದಾರೆ. ಥಿಯೇಟರ್ನಲ್ಲಿ ಸೀಟುಗಳಿಗೂ ಹಾನಿಯಾಗಿದೆ. ಎಲ್ಲಾ ಕಡೆಗಳಲ್ಲಿ ಸಿನಿಮಾ ರಿ-ರಿಲೀಸ್ ಸಂಭ್ರಮ ತುಂಬಿದ್ದ ಹಿನ್ನೆಲೆಯಲ್ಲಿ ವಿಜಯವಾಡದಲ್ಲಿ ಸಂಭ್ರಮಾಚರಣೆ ವೇಳೆ ಅವಘಡ ಸಂಭವಿಸಿದೆ. ಘಟನೆಯ ಫೊಟೋ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದವು. ನಂತರ ಶೋ ಕ್ಯಾನ್ಸಲ್ ಮಾಡಲಾಯಿತು.
nine fans of jr ntr arrested for sacrificing goats.
18-06-26 01:25 pm
HK News Staffer
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm