ಬ್ರೇಕಿಂಗ್ ನ್ಯೂಸ್
23-05-23 12:59 pm Source: news18 ಸಿನಿಮಾ
ಜೂನಿಯರ್ ಎನ್ಟಿಆರ್ ಅವರ ಒಂಭತ್ತು ಜನ ಅಭಿಮಾನಿಗಳನ್ನು ಪೊಲೀಸರು ಅರೆಸ್ಟ್ ಮಾಡಿರುವ ಘಟನೆ ನಡೆದಿದೆ. ಜೂನಿಯರ್ ಎನ್ಟಿಆರ್ ಅವರ ಬರ್ತ್ಡೇ ಸಂದರ್ಭವೇ ಅವರ ಅಭಿಮಾನಿಗಳನ್ನು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ. ಆಡುಗಳನ್ನು ಬಲಿಕೊಟ್ಟು ನಟನ ಬ್ಯಾನರ್ಗೆ ರಕ್ತಾಭಿಷೇಕ ಮಾಡಿದ ಹಿನ್ನೆಲೆಯಲ್ಲಿ ನಟನ ಅಭಿಮಾನಿಗಳನ್ನು ಬಂಧಿಸಲಾಗಿದೆ. ಪ್ರಾಣಿಗಳ ಬಲಿ ನಿಷೇಧಿಸಲಾಗಿದ್ದು ಆ ಕೃತ್ಯದಲ್ಲಿ ಪಾಲ್ಗೊಂಡಿದ್ದಕ್ಕೆ ಅಭಿಮಾನಿಗಳು ಅರೆಸ್ಟ್ ಆಗಿದ್ದಾರೆ.
ವಿಜಯವಾಡದಲ್ಲಿ ಘಟನೆ ನಡೆದಿದೆ. ನಟನ ಅಭಿಮಾನಿಗಳು ನಟನ ಬರ್ತ್ಡೇ ಆಚರಣೆ ಭಾಗವಾಗಿ ಥಿಯೇಟರ್ ಮುಂದೆ ಅವರ ಫ್ಲೆಕ್ಸಿ ಬ್ಯಾನರ್ಗೆ ಆಡುಗಳನ್ನು ಬಲಿ ಕೊಟ್ಟು ರಕ್ತ ಚಿಮ್ಮುವಂತೆ ಮಾಡಿದ್ದಾರೆ. ಅಭಿಮಾನಿಗಳು ಎರಡು ಆಡುಗಳನ್ನು ಸಾಯಿಸಿ ರಕ್ತಾಭಿಷೇಕ ಮಾಡಿದ್ದಾಗಿ ಆರೋಪಿಸಲಾಗಿದೆ. ನಟನ ಬರ್ತ್ಡೇ ಪ್ರಯುಕ್ತ ಅವರ ಹಳೆಯ ಸಿನಿಮಾ ಸಿಂಹಾದ್ರಿ ರಿ ರಿಲೀಸ್ ಆಗಿದೆ. ಈ ಸಂದರ್ಭ ಥಿಯೇಟರ್ ಮುಂದೆ ಈ ಘಟನೆ ನಡೆದಿದೆ.

ಪಿ. ಶಿವ ನಾಗ ರಾಜು, ಕೆ ಸಾಯಿ, ಜಿ ಸಾಯಿ, ಡಿ ನಾಗ ಭೂಷಣಂ, ವಿ ಸಾಯಿ, ಪಿ ನಾಗೇಶ್ವರ ರಾವ್, ವೈ. ಧರಣಿ, ಪಿ. ಶಿವ ಹಾಗೂ ಬಿ. ಅನಿಲ್ ಕುಮಾರ್ ಎಂಬವರನ್ನು ಈ ಘಟನೆಗೆ ಸಂಬಂಧಿಸಿ ಅರೆಸ್ಟ್ ಮಾಡಲಾಗಿದೆ. ಶಿವ ನಾಗ ರಾಜು ಹಾಗೂ ಅವರ ಸ್ನೇಹಿತರು ಸಿರಿ ಕೃಷ್ಣ ಹಾಗೂ ಸಿರಿ ವೆಂಕಟ ಥಿಯೇಟರ್ನಲ್ಲಿ ಮೇ 20ರಂದು ನಟನ ಬರ್ತ್ಡೇ ಆಚರಿಸಿದ್ದಾರೆ. ಈ ಸಂದರ್ಭದಲ್ಲಿಯೇ ಆಡನ್ನು ಬಲಿಕೊಟ್ಟ ಘಟನೆಯೂ ನಡೆದಿದೆ.

ನಟನ ಬರ್ತ್ಡೇ ಸಂದರ್ಭ ಇನ್ನೊಂದು ಘಟನೆಯಲ್ಲಿ ನಟ ಅಭಿಮಾನಿಗಳು ಥಿಯೇಟರ್ ಒಳಗಡೆ ಪಟಾಕಿ ಸಿಡಿಸಿ ಚಿತ್ರಮಂದಿರದೊಳಗೆ ಬೆಂಕಿ ಅವಘಡ ಸಂಭವಿಸುವಂತೆ ಮಾಡಿದ್ದಾರೆ. ಥಿಯೇಟರ್ನಲ್ಲಿ ಸೀಟುಗಳಿಗೂ ಹಾನಿಯಾಗಿದೆ. ಎಲ್ಲಾ ಕಡೆಗಳಲ್ಲಿ ಸಿನಿಮಾ ರಿ-ರಿಲೀಸ್ ಸಂಭ್ರಮ ತುಂಬಿದ್ದ ಹಿನ್ನೆಲೆಯಲ್ಲಿ ವಿಜಯವಾಡದಲ್ಲಿ ಸಂಭ್ರಮಾಚರಣೆ ವೇಳೆ ಅವಘಡ ಸಂಭವಿಸಿದೆ. ಘಟನೆಯ ಫೊಟೋ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದವು. ನಂತರ ಶೋ ಕ್ಯಾನ್ಸಲ್ ಮಾಡಲಾಯಿತು.
nine fans of jr ntr arrested for sacrificing goats.
17-08-26 02:26 pm
HK News Staffer
ಜಮೀರ್ ಹಲ್ಲು ಕಿತ್ತ ಹಾವು, ನೆಪಕ್ಕಷ್ಟೇ ಸಚಿವ ಸ್ಥಾನ...
14-08-26 08:42 pm
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
17-08-26 05:38 pm
HK News Staffer
ನೀಟ್ ಪರೀಕ್ಷೆ ರದ್ದುಗೊಳಿಸಲು ತಮಿಳುನಾಡು ವಿಧಾನಸಭೆಯ...
11-08-26 10:25 pm
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
17-08-26 05:07 pm
HK News Staffer
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
17-08-26 05:02 pm
HK News Staffer
ಬಂಟ್ವಾಳ ಪೊಲೀಸರ ಭರ್ಜರಿ ಬೇಟೆ; ಬೆಂಗಳೂರಿನಿಂದ ಕಾರಿ...
17-08-26 10:54 am
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm