ಬ್ರೇಕಿಂಗ್ ನ್ಯೂಸ್
23-05-23 12:59 pm Source: news18 ಸಿನಿಮಾ
ಜೂನಿಯರ್ ಎನ್ಟಿಆರ್ ಅವರ ಒಂಭತ್ತು ಜನ ಅಭಿಮಾನಿಗಳನ್ನು ಪೊಲೀಸರು ಅರೆಸ್ಟ್ ಮಾಡಿರುವ ಘಟನೆ ನಡೆದಿದೆ. ಜೂನಿಯರ್ ಎನ್ಟಿಆರ್ ಅವರ ಬರ್ತ್ಡೇ ಸಂದರ್ಭವೇ ಅವರ ಅಭಿಮಾನಿಗಳನ್ನು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ. ಆಡುಗಳನ್ನು ಬಲಿಕೊಟ್ಟು ನಟನ ಬ್ಯಾನರ್ಗೆ ರಕ್ತಾಭಿಷೇಕ ಮಾಡಿದ ಹಿನ್ನೆಲೆಯಲ್ಲಿ ನಟನ ಅಭಿಮಾನಿಗಳನ್ನು ಬಂಧಿಸಲಾಗಿದೆ. ಪ್ರಾಣಿಗಳ ಬಲಿ ನಿಷೇಧಿಸಲಾಗಿದ್ದು ಆ ಕೃತ್ಯದಲ್ಲಿ ಪಾಲ್ಗೊಂಡಿದ್ದಕ್ಕೆ ಅಭಿಮಾನಿಗಳು ಅರೆಸ್ಟ್ ಆಗಿದ್ದಾರೆ.
ವಿಜಯವಾಡದಲ್ಲಿ ಘಟನೆ ನಡೆದಿದೆ. ನಟನ ಅಭಿಮಾನಿಗಳು ನಟನ ಬರ್ತ್ಡೇ ಆಚರಣೆ ಭಾಗವಾಗಿ ಥಿಯೇಟರ್ ಮುಂದೆ ಅವರ ಫ್ಲೆಕ್ಸಿ ಬ್ಯಾನರ್ಗೆ ಆಡುಗಳನ್ನು ಬಲಿ ಕೊಟ್ಟು ರಕ್ತ ಚಿಮ್ಮುವಂತೆ ಮಾಡಿದ್ದಾರೆ. ಅಭಿಮಾನಿಗಳು ಎರಡು ಆಡುಗಳನ್ನು ಸಾಯಿಸಿ ರಕ್ತಾಭಿಷೇಕ ಮಾಡಿದ್ದಾಗಿ ಆರೋಪಿಸಲಾಗಿದೆ. ನಟನ ಬರ್ತ್ಡೇ ಪ್ರಯುಕ್ತ ಅವರ ಹಳೆಯ ಸಿನಿಮಾ ಸಿಂಹಾದ್ರಿ ರಿ ರಿಲೀಸ್ ಆಗಿದೆ. ಈ ಸಂದರ್ಭ ಥಿಯೇಟರ್ ಮುಂದೆ ಈ ಘಟನೆ ನಡೆದಿದೆ.
ಪಿ. ಶಿವ ನಾಗ ರಾಜು, ಕೆ ಸಾಯಿ, ಜಿ ಸಾಯಿ, ಡಿ ನಾಗ ಭೂಷಣಂ, ವಿ ಸಾಯಿ, ಪಿ ನಾಗೇಶ್ವರ ರಾವ್, ವೈ. ಧರಣಿ, ಪಿ. ಶಿವ ಹಾಗೂ ಬಿ. ಅನಿಲ್ ಕುಮಾರ್ ಎಂಬವರನ್ನು ಈ ಘಟನೆಗೆ ಸಂಬಂಧಿಸಿ ಅರೆಸ್ಟ್ ಮಾಡಲಾಗಿದೆ. ಶಿವ ನಾಗ ರಾಜು ಹಾಗೂ ಅವರ ಸ್ನೇಹಿತರು ಸಿರಿ ಕೃಷ್ಣ ಹಾಗೂ ಸಿರಿ ವೆಂಕಟ ಥಿಯೇಟರ್ನಲ್ಲಿ ಮೇ 20ರಂದು ನಟನ ಬರ್ತ್ಡೇ ಆಚರಿಸಿದ್ದಾರೆ. ಈ ಸಂದರ್ಭದಲ್ಲಿಯೇ ಆಡನ್ನು ಬಲಿಕೊಟ್ಟ ಘಟನೆಯೂ ನಡೆದಿದೆ.
ನಟನ ಬರ್ತ್ಡೇ ಸಂದರ್ಭ ಇನ್ನೊಂದು ಘಟನೆಯಲ್ಲಿ ನಟ ಅಭಿಮಾನಿಗಳು ಥಿಯೇಟರ್ ಒಳಗಡೆ ಪಟಾಕಿ ಸಿಡಿಸಿ ಚಿತ್ರಮಂದಿರದೊಳಗೆ ಬೆಂಕಿ ಅವಘಡ ಸಂಭವಿಸುವಂತೆ ಮಾಡಿದ್ದಾರೆ. ಥಿಯೇಟರ್ನಲ್ಲಿ ಸೀಟುಗಳಿಗೂ ಹಾನಿಯಾಗಿದೆ. ಎಲ್ಲಾ ಕಡೆಗಳಲ್ಲಿ ಸಿನಿಮಾ ರಿ-ರಿಲೀಸ್ ಸಂಭ್ರಮ ತುಂಬಿದ್ದ ಹಿನ್ನೆಲೆಯಲ್ಲಿ ವಿಜಯವಾಡದಲ್ಲಿ ಸಂಭ್ರಮಾಚರಣೆ ವೇಳೆ ಅವಘಡ ಸಂಭವಿಸಿದೆ. ಘಟನೆಯ ಫೊಟೋ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದವು. ನಂತರ ಶೋ ಕ್ಯಾನ್ಸಲ್ ಮಾಡಲಾಯಿತು.
nine fans of jr ntr arrested for sacrificing goats.
18-04-25 05:38 pm
HK News Desk
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
Chennaiyya Swamiji, Caste census: ಪರಿಶಿಷ್ಟ ಜಾ...
17-04-25 11:41 am
Shamanur, CM Siddaramaiah: ರಾಜ್ಯದಲ್ಲಿ ಲಿಂಗಾಯತ...
16-04-25 11:03 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
18-04-25 10:17 pm
Mangalore Correspondent
Mangalore Waqf Protest, Adyar, Police, Live:...
18-04-25 12:54 pm
Waqf Protest, Mangalore, Traffic: ಎಪ್ರಿಲ್ 18...
17-04-25 11:06 pm
Karnataka High Court, Waqf protest Mangalore...
17-04-25 10:27 pm
ಸುರತ್ಕಲ್ ಎನ್ಐಟಿಕೆ ಸಂಸ್ಥೆಯಲ್ಲಿ ಮಹತ್ತರ ಫೈಲ್ ಡಿಲ...
17-04-25 04:39 pm
18-04-25 10:59 pm
Mangalore Correspondent
Hyderabad Murder, Mother suicide: ತೆಂಗಿನಕಾಯಿ...
18-04-25 08:14 pm
Dead Baby Found, Garbage, Bangalore crime: ಅಪ...
18-04-25 03:41 pm
Ullal Gang rape, Mangalore, Arrest: ಪಶ್ಚಿಮ ಬಂ...
17-04-25 09:56 pm
Gang Rape, Mangalore, Ullal, Crime: ಪಶ್ಚಿಮ ಬಂ...
17-04-25 03:19 pm