ಬ್ರೇಕಿಂಗ್ ನ್ಯೂಸ್
23-05-23 12:59 pm Source: news18 ಸಿನಿಮಾ
ಜೂನಿಯರ್ ಎನ್ಟಿಆರ್ ಅವರ ಒಂಭತ್ತು ಜನ ಅಭಿಮಾನಿಗಳನ್ನು ಪೊಲೀಸರು ಅರೆಸ್ಟ್ ಮಾಡಿರುವ ಘಟನೆ ನಡೆದಿದೆ. ಜೂನಿಯರ್ ಎನ್ಟಿಆರ್ ಅವರ ಬರ್ತ್ಡೇ ಸಂದರ್ಭವೇ ಅವರ ಅಭಿಮಾನಿಗಳನ್ನು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ. ಆಡುಗಳನ್ನು ಬಲಿಕೊಟ್ಟು ನಟನ ಬ್ಯಾನರ್ಗೆ ರಕ್ತಾಭಿಷೇಕ ಮಾಡಿದ ಹಿನ್ನೆಲೆಯಲ್ಲಿ ನಟನ ಅಭಿಮಾನಿಗಳನ್ನು ಬಂಧಿಸಲಾಗಿದೆ. ಪ್ರಾಣಿಗಳ ಬಲಿ ನಿಷೇಧಿಸಲಾಗಿದ್ದು ಆ ಕೃತ್ಯದಲ್ಲಿ ಪಾಲ್ಗೊಂಡಿದ್ದಕ್ಕೆ ಅಭಿಮಾನಿಗಳು ಅರೆಸ್ಟ್ ಆಗಿದ್ದಾರೆ.
ವಿಜಯವಾಡದಲ್ಲಿ ಘಟನೆ ನಡೆದಿದೆ. ನಟನ ಅಭಿಮಾನಿಗಳು ನಟನ ಬರ್ತ್ಡೇ ಆಚರಣೆ ಭಾಗವಾಗಿ ಥಿಯೇಟರ್ ಮುಂದೆ ಅವರ ಫ್ಲೆಕ್ಸಿ ಬ್ಯಾನರ್ಗೆ ಆಡುಗಳನ್ನು ಬಲಿ ಕೊಟ್ಟು ರಕ್ತ ಚಿಮ್ಮುವಂತೆ ಮಾಡಿದ್ದಾರೆ. ಅಭಿಮಾನಿಗಳು ಎರಡು ಆಡುಗಳನ್ನು ಸಾಯಿಸಿ ರಕ್ತಾಭಿಷೇಕ ಮಾಡಿದ್ದಾಗಿ ಆರೋಪಿಸಲಾಗಿದೆ. ನಟನ ಬರ್ತ್ಡೇ ಪ್ರಯುಕ್ತ ಅವರ ಹಳೆಯ ಸಿನಿಮಾ ಸಿಂಹಾದ್ರಿ ರಿ ರಿಲೀಸ್ ಆಗಿದೆ. ಈ ಸಂದರ್ಭ ಥಿಯೇಟರ್ ಮುಂದೆ ಈ ಘಟನೆ ನಡೆದಿದೆ.

ಪಿ. ಶಿವ ನಾಗ ರಾಜು, ಕೆ ಸಾಯಿ, ಜಿ ಸಾಯಿ, ಡಿ ನಾಗ ಭೂಷಣಂ, ವಿ ಸಾಯಿ, ಪಿ ನಾಗೇಶ್ವರ ರಾವ್, ವೈ. ಧರಣಿ, ಪಿ. ಶಿವ ಹಾಗೂ ಬಿ. ಅನಿಲ್ ಕುಮಾರ್ ಎಂಬವರನ್ನು ಈ ಘಟನೆಗೆ ಸಂಬಂಧಿಸಿ ಅರೆಸ್ಟ್ ಮಾಡಲಾಗಿದೆ. ಶಿವ ನಾಗ ರಾಜು ಹಾಗೂ ಅವರ ಸ್ನೇಹಿತರು ಸಿರಿ ಕೃಷ್ಣ ಹಾಗೂ ಸಿರಿ ವೆಂಕಟ ಥಿಯೇಟರ್ನಲ್ಲಿ ಮೇ 20ರಂದು ನಟನ ಬರ್ತ್ಡೇ ಆಚರಿಸಿದ್ದಾರೆ. ಈ ಸಂದರ್ಭದಲ್ಲಿಯೇ ಆಡನ್ನು ಬಲಿಕೊಟ್ಟ ಘಟನೆಯೂ ನಡೆದಿದೆ.

ನಟನ ಬರ್ತ್ಡೇ ಸಂದರ್ಭ ಇನ್ನೊಂದು ಘಟನೆಯಲ್ಲಿ ನಟ ಅಭಿಮಾನಿಗಳು ಥಿಯೇಟರ್ ಒಳಗಡೆ ಪಟಾಕಿ ಸಿಡಿಸಿ ಚಿತ್ರಮಂದಿರದೊಳಗೆ ಬೆಂಕಿ ಅವಘಡ ಸಂಭವಿಸುವಂತೆ ಮಾಡಿದ್ದಾರೆ. ಥಿಯೇಟರ್ನಲ್ಲಿ ಸೀಟುಗಳಿಗೂ ಹಾನಿಯಾಗಿದೆ. ಎಲ್ಲಾ ಕಡೆಗಳಲ್ಲಿ ಸಿನಿಮಾ ರಿ-ರಿಲೀಸ್ ಸಂಭ್ರಮ ತುಂಬಿದ್ದ ಹಿನ್ನೆಲೆಯಲ್ಲಿ ವಿಜಯವಾಡದಲ್ಲಿ ಸಂಭ್ರಮಾಚರಣೆ ವೇಳೆ ಅವಘಡ ಸಂಭವಿಸಿದೆ. ಘಟನೆಯ ಫೊಟೋ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದವು. ನಂತರ ಶೋ ಕ್ಯಾನ್ಸಲ್ ಮಾಡಲಾಯಿತು.
nine fans of jr ntr arrested for sacrificing goats.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 11:47 am
HK News Desk
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm