ಬ್ರೇಕಿಂಗ್ ನ್ಯೂಸ್
26-05-23 01:03 pm Source: news18 ಸಿನಿಮಾ
ಬಾಲಿವುಡ್ ಮತ್ತು ಹಾಲಿವುಡ್ನಲ್ಲಿ ಗುರುತಿಸಿಕೊಂಡ ನಟ ಕಬೀರ್ ಬೇಡಿ ತಮ್ಮ ಮೊದಲ ದಕ್ಷಿಣ ಭಾರತದ ಚಿತ್ರೀಕರಣ ಮುಗಿಸಿ ಮುಂಬೈಗೆ ಹೋಗಿದ್ದಾರೆ. ಕರಿ ಹೈದ ಕರಿ ಅಜ್ಜ ಸಿನಿಮಾ ಮೂಲಕ ಈ ಕಡೆಗೆ ಬಂದ ಕಬೀರ್ ಬೇಡಿ ಈಗ ಇನ್ನೂ ಒಂದು ಕೆಲಸ ಮಾಡಿದ್ದಾರೆ. ಕಬೀರ್ ಬೇಡಿ ಅವರ ಕಂಠಸಿರಿ ಅದ್ಭುತವಾಗಿಯೇ ಇದೆ. ಸಾಕ್ಷ್ಯ ಚಿತ್ರಗಳಿಗೂ ಧ್ವನಿ ಕೊಡ್ತಾರೆ ಕಬೀರ್ ಬೇಡಿ. ಹೀಗಿರೋವಾಗ ತಮ್ಮ ಮೊದಲ ದಕ್ಷಿಣ ಭಾರತದ ಸಿನಿಮಾಕ್ಕೆ ಡಬ್ಬಿಂಗ್ ಮಾಡದೇ ಇರ್ತಾರಾ ? ಇಲ್ಲ ಬಿಡಿ, ಕರಿ ಹೈದ ಕರಿ ಅಜ್ಜ ಸಿನಿಮಾದ ಆರಂಭದಲ್ಲಿಯೇ ಈ ಚಿತ್ರಕ್ಕೆ ನಾನೇ ಡಬ್ ಮಾಡುತ್ತೇನೆ ಅಂತೇ ಹೇಳಿದ್ದರು.
ಚಿತ್ರದ ಡೈರೆಕ್ಟರ್ ಸುಧೀರ್ ಅತ್ತಾವರ್ ಈ ಮಾತನ್ನ ಅಂದು ಕೇಳಿ ಸುಮ್ಮನಾಗಿದ್ದರು. ಆದರೆ ಕಬೀರ್ ಬೇಡಿ ಅದನ್ನ ಅಷ್ಟಕ್ಕೆ ಬಿಟ್ಟಿಲ್ಲ ನೋಡಿ. ಮುಂಬೈನ ಪ್ರತಿಷ್ಠಿತ ಸ್ಟುಡಿಯೋದಲ್ಲಿ ತಮ್ಮ ಪಾತ್ರಕ್ಕೆ ತಾವೇ ಡಬ್ ಮಾಡುತ್ತಿದ್ದಾರೆ. ಕಬೀರ್ ಬೇಡಿ ಅವರಿಗೆ ಹಿಂದಿ ಚೆನ್ನಾಗಿ ಗೊತ್ತಿದೆ. ಇಂಗ್ಲೀಷ್ ಭಾಷೆ ಮೇಲೆ ಹಿಡಿತವಿದೆ. ಯುರೋಪಿಯನ್ ಭಾಷೆಯನ್ನ ಕೂಡ ಕಬೀರ್ ಬೇಡಿ ತಿಳಿದುಕೊಂಡಿದ್ದಾರೆ.
ಕಬೀರ್ ಬೇಡಿ ಇದೀಗ ಕರಿ ಹೈದ ಕರಿ ಅಜ್ಜ ಸಿನಿಮಾದ ಮೂಲಕ ಕನ್ನಡ, ಮಲೆಯಾಳಂ ಹಾಗೂ ತುಳು ಭಾಷೆಯನ್ನೂ ಕಲಿತಿದ್ದಾರೆ. ಈ ಕಲಿಕೆ ಮೂಲಕ ಕರಿ ಹೈದ ಕರಿ ಅಜ್ಜ ಚಿತ್ರಕ್ಕೆ ಡಬ್ಬಿಂಗ್ ಕೂಡ ಮಾಡಿದ್ದಾರೆ. ಕಬೀರ್ ಬೇಡಿ ಈ ಸಿನಿಮಾದಲ್ಲಿ ಉದ್ಯಾವರ ಅರಸರ ಪಾತ್ರವನ್ನ ನಿರ್ವಹಿಸಿದ್ದಾರೆ. ಆ ಪಾತ್ರಕ್ಕೇನೆ ಕಬೀರ್ ಬೇಡಿ ಈಗ ಡಬ್ಬಿಂಗ್ ಈಗ ಮಾಡುತ್ತಿದ್ದಾರೆ. ಪ್ರತಿ ದಿನ ಎರಡೋ ಇಲ್ಲವೇ ಮೂರೋ ಡೈಲಾಗ್ಗಳನ್ನ ಡಬ್ಬಿಂಗ್ ಮಾಡುತ್ತಲೇ, ಕಬೀರ್ ಬೇಡಿ ತಮ್ಮ ಈ ಪಾತ್ರದ ಡಬ್ಬಿಂಗ್ ಕೆಲಸವನ್ನ ಮುಗಿಸಿಕೊಡ್ತಿದ್ದಾರೆ. ಈ ಮೂಲಕ ಕಬೀರ್ ಬೇಡಿ ತಮ್ಮ ಧ್ವನಿಯಲ್ಲಿಯೇ ಉದ್ಯಾವರ ಅರಸರ ಪಾತ್ರಕ್ಕೆ ನೈಜತೆ ತಂದುಕೊಡುತ್ತಿದ್ದಾರೆ.
bollywood actor kabir bedi dubbed for kannada movie at mumbai.
08-06-23 12:43 pm
Bangalore Correspondent
ಸಕಲೇಶಪುರ ; ಕ್ಯಾಂಪ್ನಲ್ಲಿ ಮಧ್ಯಾಹ್ನದ ಊಟ ಸೇವಿಸಿ...
07-06-23 06:54 pm
ವಯಸ್ಸು, ಅನಾರೋಗ್ಯ, ವಿರೋಧಿ ಅಲೆ ; 25ರಲ್ಲಿ 13 ಬಿಜ...
07-06-23 03:17 pm
13 ಸಂಸದರ ವಿರುದ್ಧ ಅಪಪ್ರಚಾರ, ಟಿಕೆಟ್ ಇಲ್ಲವೆಂದು ಸ...
06-06-23 10:38 pm
ಲೋಕಸಭೆ ಚುನಾವಣೆಗೆ ಬಿಜೆಪಿ- ಜೆಡಿಎಸ್ ಮೈತ್ರಿ ಸುಳಿವ...
06-06-23 10:28 pm
07-06-23 10:58 pm
HK News Desk
ಟಿಪ್ಪು, ಔರಂಗಜೇಬ್ ವೈಭವೀಕರಿಸಿ ಪೋಸ್ಟ್ ; ಕೊಲ್ಲಾಪು...
07-06-23 10:32 pm
ಯುಪಿಯಲ್ಲಿ ಅತೀಕ್ ಅಹ್ಮದ್ ಬೆನ್ನಲ್ಲೇ ಮತ್ತೊಬ್ಬ ಗ...
07-06-23 08:51 pm
ಮೋದಿ ಮ್ಯಾಜಿಕ್, ಹಿಂದುತ್ವದಿಂದ ಚುನಾವಣೆ ಗೆಲ್ಲಕ್ಕಾ...
06-06-23 09:37 pm
ತ್ರಿವಳಿ ರೈಲು ದುರಂತ ; 40 ಜನರ ಸಾವಿಗೆ ವಿದ್ಯುತ್ ಶ...
06-06-23 08:18 pm
08-06-23 10:48 am
Mangalore Correspondent
ಮಂಗಳೂರು-ಅಹಮದಾಬಾದ್ ನಡುವೆ ವಿಶೇಷ ರೈಲು ; ಜೂನ್ 9ರ...
07-06-23 11:09 pm
ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಭೀತಿ ; ಕರಾವಳಿಯಲ್ಲ...
07-06-23 09:34 pm
ಹೃದಯ ತಜ್ಞರು ಮನೆ ಬಾಗಿಲಿಗೆ ; ದೇಶದಲ್ಲೇ ಮೊದಲ ಬಾರಿ...
07-06-23 09:13 pm
ಪಿಲಿಕುಳ ಜೈವಿಕ ಉದ್ಯಾನದಲ್ಲಿ ಹುಲಿ ಸಾವು ; ಎರಡು ಹು...
07-06-23 02:04 pm
06-06-23 10:43 am
Mangalore Correspondent
Illegal Cow Transport: ಕುತ್ತಾರಿನಲ್ಲಿ ಉಸಿರುಗಟ್...
05-06-23 01:02 pm
ಪರವಾನಿಗೆ ಇಲ್ಲದೆ ಮನೆ ನಿರ್ಮಾಣ ; ಪ್ರಶ್ನಿಸಿದಕ್ಕೆ...
04-06-23 02:14 pm
ತರೀಕೆರೆ ಕಾಂಗ್ರೆಸ್ ಶಾಸಕರ ಅಭಿನಂದನ ಕಾರ್ಯಕ್ರಮದಲ್ಲ...
04-06-23 12:47 pm
ಹಿಂದು ಹೆಸರಲ್ಲಿ ಪ್ರೇಮಿಸಿ ಯುವತಿಯರ ಬ್ಲಾಕ್ಮೇಲ್ ;...
03-06-23 08:51 pm