ಬ್ರೇಕಿಂಗ್ ನ್ಯೂಸ್
29-05-23 01:23 pm Source: news18 ಸಿನಿಮಾ
ಶೀಘ್ರದಲ್ಲೇ ಅಂಬಿ ಮನೆಯಲ್ಲಿ ಮದುವೆ ಸಂಭ್ರಮ ಮನೆ ಮಾಡಲಿದೆ. ಅಭಿಷೇಕ್ ಅಂಬರೀಷ್ ಹಾಗೂ ಅವಿವ ಬಿದ್ದಪ್ಪ ಮದುವೆಗೆ ಭರ್ಜರಿ ತಯಾರಿ ಕೂಡ ನಡೆಯುತ್ತಿದೆ. ಇಂದು (ಮೇ.29) ಅಂಬಿ ಹುಟ್ಟುಹಬ್ಬವಾದ ಹಿನ್ನೆಲೆ ಸಮಾಧಿ ಬಳಿ ಮದುವೆ ಆಮಂತ್ರಣ ಪತ್ರಿಕೆ ಇಟ್ಟು ಪೂಜೆ ಸಲ್ಲಿಸಿದ್ರು. ಸೋಶಿಯಲ್ ಮೀಡಿಯಾದಲ್ಲಿ ಅಭಿಷೇಕ್ ಹಾಗೂ ಅಂಬರೀಷ್–ಅವಿವ ವಿವಾಹದ ಆಮಂತ್ರಣ ಪತ್ರ ವೈರಲ್ ಆಗಿದೆ. ಅಭಿಮಾನಿಗಳು ಹಾಗೂ ಸೆಲೆಬ್ರೆಟಿಗಳು ಯಂಗ್ ರೆಬಲ್ ಸ್ಟಾರ್ಗೆ ಶುಭ ಕೋರಿದ್ದಾರೆ.
ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಕಳೆದ ವರ್ಷ ಡಿಸೆಂಬರ್ 11ರಂದು ಅಭಿಷೇಕ್ ಹಾಗೂ ಅವಿವ ನಿಶ್ಚಿತಾರ್ಥ ನೆರವೇರಿತು. ಕುಟುಂಬಸ್ಥರು, ಆಪ್ತರು ಹಾಗೂ ಕೆಲ ಗಣ್ಯರ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯಿತು. ಜೂನ್ 4ರಂದು ಜೆಪಿ ನಗರದ ಅಂಬಿ ನಿವಾಸದಲ್ಲಿ ಚಪ್ಪರ ಪೂಜೆ ನಡೆಯಲಿದೆ. ಜೂನ್ 5ರಂದು ಮಾಣಿಕ್ಯ-ಚಾಮರ ವಜ್ರದಲ್ಲಿ ಬೆಳಿಗ್ಗೆ ಕರ್ಕಾಟಕ ಲಗ್ನದಲ್ಲಿ (9:30-10:30) ಮದುವೆ ಸಮಾರಂಭ ನಡೆಯಲಿದೆ.
ಜೂನ್ 7ಕ್ಕೆ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ನ ತ್ರಿಪುರ ವಾಸಿನಿಯಲ್ಲಿ ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಮಂಡ್ಯದಲ್ಲಿ ಅದ್ಧೂರಿ ಆರತಕ್ಷತೆ ನಡೆಯುತ್ತದೆ ಎಂದು ಸುದ್ದಿಯಾಗಿತ್ತು. ಆದ್ರೆ ಕಾರ್ಯಕ್ರಮ ಬೆಂಗಳೂರಲ್ಲೇ ನಡೆಯಲಿದೆ. ಜೂನ್ 16 ರಂದು ಮಂಡ್ಯದಲ್ಲಿ ಬೀಗರ ಊಟ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಬೀಗರ ಔತಣಕೂಟಕ್ಕೆ ಸುಮಾರು 1 ಲಕ್ಷ ಜನರು ಸೇರುವ ಸಾಧ್ಯತೆ ಇದೆ. 1ಲಕ್ಷಕ್ಕೂ ಹೆಚ್ಚು ಜನರಿಗೆ ಭೋಜನ ವ್ಯವಸ್ಥೆ ಮಾಡಲಾಗುತ್ತದೆ.
ಜೂನ್ ತಿಂಗಳಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡ್ತಿರೋ ಈ ಜೋಡಿ, ಬಹು ದಿನಗಳ ಸ್ನೇಹಿತರೇ ಆಗಿದ್ದಾರೆ. ಈ ಬಗ್ಗೆ ಎಲ್ಲೂ ಅಭಿ ಹೇಳಿಕೊಂಡಿರಲಿಲ್ಲ. ಅವಿವಾ ಕೂಡ ಏನೂ ಎಲ್ಲೂ ಹೇಳಿರಲಿಲ್ಲ. ಆದರೆ ಇವರ ಸ್ನೇಹ ಎಂಗೇಜ್ಮೆಂಟ್ ಟೈಮ್ ಅಲ್ಲಿಯೇ ರಿವೀಲ್ ಆಯಿತು. ಅಭಿಷೇಕ್ ಅಂಬರೀಶ್ ಅಭಿನಯದ ಬ್ಯಾಡ್ಮ್ಯಾನರ್ಸ್ ರಿಲೀಸ್ಗೆ ರೆಡಿ ಆಗುತ್ತಿದೆ. ಕಾಳಿ ಸಿನಿಮಾವನ್ನ ಕೂಡ ಅಭಿಷೇಕ್ ಈಗಾಗಲೇ ಒಪ್ಪಿಕೊಂಡಿದ್ದಾರೆ.
abhishek ambareesh and aviva bidapa marriage invitation card viral.
15-10-25 10:59 pm
Bangalore Correspondent
ದೀಪಾವಳಿಗೆ ಹೆಚ್ಚುವರಿ ರೈಲು ; ಮಂಗಳೂರು- ಬೆಂಗಳೂರು,...
15-10-25 03:35 pm
ರಘು ದೀಕ್ಷಿತ್ ಜೀವನದಲ್ಲಿ ಎರಡನೇ ಇನ್ನಿಂಗ್ಸ್ ; 50ರ...
15-10-25 03:32 pm
ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿನಡಿಗೆ...
14-10-25 11:24 am
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
15-10-25 11:02 pm
HK News Desk
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
15-10-25 05:36 pm
Mangalore Correspondent
ಬೈಂದೂರಿನಲ್ಲಿ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು ;...
15-10-25 12:12 pm
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm