ಬ್ರೇಕಿಂಗ್ ನ್ಯೂಸ್
29-05-23 01:23 pm Source: news18 ಸಿನಿಮಾ
ಶೀಘ್ರದಲ್ಲೇ ಅಂಬಿ ಮನೆಯಲ್ಲಿ ಮದುವೆ ಸಂಭ್ರಮ ಮನೆ ಮಾಡಲಿದೆ. ಅಭಿಷೇಕ್ ಅಂಬರೀಷ್ ಹಾಗೂ ಅವಿವ ಬಿದ್ದಪ್ಪ ಮದುವೆಗೆ ಭರ್ಜರಿ ತಯಾರಿ ಕೂಡ ನಡೆಯುತ್ತಿದೆ. ಇಂದು (ಮೇ.29) ಅಂಬಿ ಹುಟ್ಟುಹಬ್ಬವಾದ ಹಿನ್ನೆಲೆ ಸಮಾಧಿ ಬಳಿ ಮದುವೆ ಆಮಂತ್ರಣ ಪತ್ರಿಕೆ ಇಟ್ಟು ಪೂಜೆ ಸಲ್ಲಿಸಿದ್ರು. ಸೋಶಿಯಲ್ ಮೀಡಿಯಾದಲ್ಲಿ ಅಭಿಷೇಕ್ ಹಾಗೂ ಅಂಬರೀಷ್–ಅವಿವ ವಿವಾಹದ ಆಮಂತ್ರಣ ಪತ್ರ ವೈರಲ್ ಆಗಿದೆ. ಅಭಿಮಾನಿಗಳು ಹಾಗೂ ಸೆಲೆಬ್ರೆಟಿಗಳು ಯಂಗ್ ರೆಬಲ್ ಸ್ಟಾರ್ಗೆ ಶುಭ ಕೋರಿದ್ದಾರೆ.
ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಕಳೆದ ವರ್ಷ ಡಿಸೆಂಬರ್ 11ರಂದು ಅಭಿಷೇಕ್ ಹಾಗೂ ಅವಿವ ನಿಶ್ಚಿತಾರ್ಥ ನೆರವೇರಿತು. ಕುಟುಂಬಸ್ಥರು, ಆಪ್ತರು ಹಾಗೂ ಕೆಲ ಗಣ್ಯರ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯಿತು. ಜೂನ್ 4ರಂದು ಜೆಪಿ ನಗರದ ಅಂಬಿ ನಿವಾಸದಲ್ಲಿ ಚಪ್ಪರ ಪೂಜೆ ನಡೆಯಲಿದೆ. ಜೂನ್ 5ರಂದು ಮಾಣಿಕ್ಯ-ಚಾಮರ ವಜ್ರದಲ್ಲಿ ಬೆಳಿಗ್ಗೆ ಕರ್ಕಾಟಕ ಲಗ್ನದಲ್ಲಿ (9:30-10:30) ಮದುವೆ ಸಮಾರಂಭ ನಡೆಯಲಿದೆ.


ಜೂನ್ 7ಕ್ಕೆ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ನ ತ್ರಿಪುರ ವಾಸಿನಿಯಲ್ಲಿ ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಮಂಡ್ಯದಲ್ಲಿ ಅದ್ಧೂರಿ ಆರತಕ್ಷತೆ ನಡೆಯುತ್ತದೆ ಎಂದು ಸುದ್ದಿಯಾಗಿತ್ತು. ಆದ್ರೆ ಕಾರ್ಯಕ್ರಮ ಬೆಂಗಳೂರಲ್ಲೇ ನಡೆಯಲಿದೆ. ಜೂನ್ 16 ರಂದು ಮಂಡ್ಯದಲ್ಲಿ ಬೀಗರ ಊಟ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಬೀಗರ ಔತಣಕೂಟಕ್ಕೆ ಸುಮಾರು 1 ಲಕ್ಷ ಜನರು ಸೇರುವ ಸಾಧ್ಯತೆ ಇದೆ. 1ಲಕ್ಷಕ್ಕೂ ಹೆಚ್ಚು ಜನರಿಗೆ ಭೋಜನ ವ್ಯವಸ್ಥೆ ಮಾಡಲಾಗುತ್ತದೆ.


ಜೂನ್ ತಿಂಗಳಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡ್ತಿರೋ ಈ ಜೋಡಿ, ಬಹು ದಿನಗಳ ಸ್ನೇಹಿತರೇ ಆಗಿದ್ದಾರೆ. ಈ ಬಗ್ಗೆ ಎಲ್ಲೂ ಅಭಿ ಹೇಳಿಕೊಂಡಿರಲಿಲ್ಲ. ಅವಿವಾ ಕೂಡ ಏನೂ ಎಲ್ಲೂ ಹೇಳಿರಲಿಲ್ಲ. ಆದರೆ ಇವರ ಸ್ನೇಹ ಎಂಗೇಜ್ಮೆಂಟ್ ಟೈಮ್ ಅಲ್ಲಿಯೇ ರಿವೀಲ್ ಆಯಿತು. ಅಭಿಷೇಕ್ ಅಂಬರೀಶ್ ಅಭಿನಯದ ಬ್ಯಾಡ್ಮ್ಯಾನರ್ಸ್ ರಿಲೀಸ್ಗೆ ರೆಡಿ ಆಗುತ್ತಿದೆ. ಕಾಳಿ ಸಿನಿಮಾವನ್ನ ಕೂಡ ಅಭಿಷೇಕ್ ಈಗಾಗಲೇ ಒಪ್ಪಿಕೊಂಡಿದ್ದಾರೆ.
abhishek ambareesh and aviva bidapa marriage invitation card viral.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 11:47 am
HK News Desk
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm