ಬ್ರೇಕಿಂಗ್ ನ್ಯೂಸ್
03-06-23 02:46 pm Source: Vijayakarnataka ಸಿನಿಮಾ
'ಆಪರೇಶನ್ ಅಲಮೇಲ್ಲಮ್ಮ', 'ಕವಲುದಾರಿ' ಮುಂತಾದ ಚಿತ್ರಗಳ ಮೂಲಕ ಮನೆಮಾತಾಗಿರುವ ನಟ ರಿಷಿ ನಾಯಕರಾಗಿ ನಟಿಸುತ್ತಿದ್ದಾರೆ. ಕಾರಂಜಿ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಕೆ ಎಸ್ ನಂದೀಶ್ ನಿರ್ದೇಶನದ ನೂತನ ಚಿತ್ರದ ಮುಹೂರ್ತ ಸಮಾರಂಭ ಹಾಗೂ ಶೀರ್ಷಿಕೆ ಅನಾವರಣ ನೆರವೇರಿತು.
ನಟ ನೀನಾಸಂ ಸತೀಶ್ ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು ಹಾಗೂ ಶೀರ್ಷಿಕೆ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. 'ರುದ್ರ ಗರುಡ ಪುರಾಣ' ಎಂದು ಚಿತ್ರಕ್ಕೆ ಹೆಸರಿಡಲಾಗಿದೆ.
'ಚಂಬಲ್', 'ಡಿಯರ್ ವಿಕ್ರಮ್' ಚಿತ್ರಗಳು ಸೇರಿದಂತೆ ಕೆಲವು ಚಿತ್ರಗಳನ್ನು ನಿರ್ದೇಶಿಸಿರುವ ಕೆ ಎಸ್ ನಂದೀಶ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಕಥೆ ಹಾಗೂ ಚಿತ್ರಕಥೆಯನ್ನು ನಿರ್ದೇಶಕರೆ ಬರೆದಿದ್ದಾರೆ. ಸಂಭಾಷಣೆ ರಘು ನಿಡುವಳ್ಳಿ ಅವರದು. ಉದ್ಯಮಿ ಲೋಹಿತ್ ನಿರ್ಮಾಣ ಮಾಡುತ್ತಿದ್ದಾರೆ. ರಿಷಿ ಅವರಿಗೆ ನಾಯಕಿಯಾಗಿ ಪ್ರಿಯಾಂಕಾ ಕುಮಾರ್ ಅಭಿನಯಿಸುತ್ತಿದ್ದಾರೆ.
'ರುದ್ರ ಗರುಡ ಪುರಾಣ' ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರ. ಇಂದಿನಿಂದ ಚಿತ್ರೀಕರಣ ಆರಂಭವಾಗಲಿದೆ. ಸಿನಿಮಾ ಜನರ ಮೇಲೆ ಉತ್ತಮ ಪ್ರಭಾವ ಬೀರಬೇಕು. ಅಂತಹ ಸಿನಿಮಾವನ್ನು ಜನರಿಗೆ ಕೊಡುವ ಆಸೆ ನನಗೆ.
2022 UPSC ಪರೀಕ್ಷೆಯಲ್ಲಿ 265ನೇ ರ್ಯಾಂಕ್ ಪಡೆದಿರುವ ಮೈಸೂರು ಮೂಲದ ಕೆ ಸೌರಭ್ ಅವರು ಸಂದರ್ಶನವೊಂದರಲ್ಲಿ ನನಗೆ ಪುನೀತ್ ರಾಜಕುಮಾರ್ ಅಭಿನಯದ 'ಪೃಥ್ವಿ' ಚಿತ್ರ ಪ್ರೇರಣೆ ಎಂದಿದ್ದಾರೆ.
'ಪೃಥ್ವಿ' ಚಿತ್ರ ಸೌರಭ್ ಅವರಿಗಷ್ಟೆ ಅಲ್ಲ. ಸಾಕಷ್ಟು ಜನರಿಗೆ ಸ್ಪೂರ್ತಿಯಾಗಿದೆ. ನಾನು ಆ ಚಿತ್ರದ ಸಹ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದೆ. ನಾವು ಮಾಡುವ ಚಿತ್ರ, ಈ ರೀತಿ ಜನರಿಗೆ ತಲುಪಿದಾಗ ಮುಂದೆ ಇಂತಹ ಹೆಚ್ಚುಹೆಚ್ಚು ಚಿತ್ರಗಳನ್ನು ಮಾಡುವ ಹುಮ್ಮಸ್ಸು ನಿರ್ದೇಶಕನಿಗೆ ಹೆಚ್ಚಾಗುತ್ತದೆ ಎಂದು ನಿರ್ದೇಶಕ ಕೆ.ಎಸ್ ನಂದೀಶ್ ತಿಳಿಸಿದರು.
ನಾನು ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಈ ಹಿಂದೆ 'ಕವಲುದಾರಿ' ಚಿತ್ರದಲ್ಲೂ ಪೊಲೀಸ್ ಅಧಿಕಾರಿಯ ಪಾತ್ರ ಮಾಡಿದ್ದೆ. ಹಾಗಾಗಿ, ಅದೇ ಜಾನರ್ನ ಇನ್ನೊಂದು ಚಿತ್ರ ಮಾಡುವುದಕ್ಕೆ ಇಷ್ಟವಿರಲಿಲ್ಲ. ಆದರೆ ನಂದೀಶ್ ಅವರು ಈ ಚಿತ್ರದ ಕಥೆ ಕೇಳಿದಾಗ ಬಹಳ ಇಷ್ಟವಾಯಿತು. ಎರಡೂ ಚಿತ್ರಗಳ ಮಧ್ಯೆ ಯಾವುದೇ ಹೋಲಿಕೆ ಇಲ್ಲ. ಇದರಲ್ಲಿ ನಾನು ಪೊಲೀಸ್ ಅಧಿಕಾರಿಯಾದರೂ ಬಹಳ ವಿಭಿನ್ನವಾಗಿದೆ. ಜೊತೆಗೆ ಕರ್ಮ, ಪಾಪ, ಪುಣ್ಯಕ್ಕೆ ಸಂಬಂಧಿಸಿದ ಗರುಡ ಪುರಾಣದ ಸಾಕಷ್ಟು ಅಂಶಗಳು ಈ ಚಿತ್ರದಲ್ಲಿದೆ. ಈ ಚಿತ್ರಕ್ಕೆ 'ಗರುಡ ಪುರಾಣ' ಎಂದು ಹೆಸರಿಡಲು ನಿರ್ಧರಿಸಿದ್ದೆವು. ಚಿತ್ರದಲ್ಲಿ ನನ್ನ ಪಾತ್ರದ ಹೆಸರು ರುದ್ರ. ಹಾಗಾಗಿ 'ರುದ್ರ ಗರುಡ ಪುರಾಣ' ಅಂತ ಶೀರ್ಷಿಕೆ ಇಡಲಾಗಿದೆ. ಚಿತ್ರಕ್ಕೆ ಚಾಲನೆ ನೀಡಿದ ನೀನಾಸಂ ಸತೀಶ್ ಅವರಿಗೆ ಧನ್ಯವಾದ ಎಂದರು ನಾಯಕ ರಿಷಿ.
ನಾಯಕಿ ಪ್ರಿಯಾಂಕಾ ಕುಮಾರ್, ನಟರಾದ ಶಿವರಾಜ್ ಕೆ ಆರ್ ಪೇಟೆ, ಪವನ್ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.
rishi priyanka kumar starrer upcoming movies rudra garuda purana.
18-06-26 01:25 pm
HK News Staffer
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm