ಬ್ರೇಕಿಂಗ್ ನ್ಯೂಸ್
05-06-23 02:51 pm HK News Desk ಸಿನಿಮಾ
ಬೆಂಗಳೂರು, ಜೂನ್ 5: ರೆಬಲ್ ಸ್ಟಾರ್ ಅಂಬರೀಶ್ ಮತ್ತು ಸಂಸದೆ ಸುಮಲತಾ ಪುತ್ರ, ನಟ ಅಭಿಷೇಕ್ ಹಾಗೂ ಫ್ಯಾಷನ್ ಉದ್ಯಮಿ ಅವಿವಾ ಬಿದ್ದಪ್ಪ ಮದುವೆ ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿಅದ್ಧೂರಿಯಾಗಿ ನಡೆದಿದೆ. ಜೂನ್ 7ರಂದು ಗ್ರ್ಯಾಂಡ್ ರಿಸೆಪ್ಷನ್ ನೆರವೇರಲಿದೆ.
ಅಭಿಷೇಕ್ ಅವರಿಗೆ ಮುತ್ತುಗಳಿಂದ ತಯಾರಾದ ಮೈಸೂರು ಪೇಟವನ್ನು ಹಾಕಲಾಗಿತ್ತು. ಒಕ್ಕಲಿಗ ಸಂಪ್ರದಾಯದಂತೆ ಮದುವೆ ನಡೆದಿದೆ. ಇಂದು ಕರ್ಕಾಟಕ ಲಗ್ನದಲ್ಲಿ ಮದುವೆ ನಡೆದಿದೆ.



ಕಳೆದ ಶುಕ್ರವಾರ ಅರಿಷಿಣ ಶಾಸ್ತ್ರ ಮುಗಿಸಿರುವ ಅಭಿಷೇಕ್ ಮತ್ತು ಅವಿವಾ, ಭಾನುವಾರ ಕೈಗೆ ಮೆಹೆಂದಿ ಹಚ್ಚಿಕೊಂಡು ಮದುವೆ ಕಳೆಯಲ್ಲಿ ಮಿಂಚುತ್ತಿದ್ದರು. ಅವರ ಮೆಹೆಂದಿಯ ಸುಂದರ ಫೋಟೊಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಅಭಿಷೇಕ್ ಅವರು ತಮ್ಮ ಕೈಯಲ್ಲಿ ರೆಬಲ್, ಸುಮಾ, ಅವಿವಾ ಮತ್ತು ಮಂಡ್ಯ ಎಂಬ ಹೆಸರುಗಳ ಮೆಹೆಂದಿ ಹಾಕಿಸಿಕೊಂಡು ಕ್ಯಾಮೆರಾಗೆ ಪೋಸ್ ನೀಡಿದ್ದಾರೆ. ಈ ಸಮಯದಲ್ಲಿ ನಟ ಪ್ರಜ್ವಲ್ ದೇವರಾಜ್ ದಂಪತಿ, ನಟಿಯರಾದ ಪ್ರಿಯಾಂಕಾ ಉಪೇಂದ್ರ, ಮೇಘನಾ ರಾಜ್ ಮುಂತಾದವರು ಪಾಲ್ಗೊಂಡಿದ್ದರು.



ಅದ್ದೂರಿಯಾಗಿ ಅರಿಷಿಣ ಶಾಸ್ತ್ರ, ಮೆಹೆಂದಿ, ಸಂಗೀತ ಕಾರ್ಯಕ್ರಮಗಳು ನಡೆದಿದೆ. ಅವಿವಾ ಬಿದ್ದಪ್ಪ ಕೂಡ ಸೋಶಿಯಲ್ ಮೀಡಿಯಾದಲ್ಲಿ ಅರಿಷಿಣ ಶಾಸ್ತ್ರದ ಫೋಟೋ, ವಿಡಿಯೋಗಳನ್ನು ಹಂಚಿಕೊಂಡಿದ್ದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಭಿಷೇಕ್, ಅವಿವಾ ಅವರು ಅದ್ದೂರಿಯಾಗಿ ಮದುವೆ ಆಗಿದ್ದಾರೆ. ಕುಟುಂಬಸ್ಥರು, ಆಪ್ತರು ಮಾತ್ರ ಈ ಮದುವೆಯಲ್ಲಿ ಭಾಗಿಯಾಗಿದ್ದರು.





ಕಳೆದ ನಾಲ್ಕೈದು ವರ್ಷಗಳಿಂದ ಅಭಿಷೇಕ್ ಅಂಬರೀಶ್- ಅವಿವ ಬಿದ್ದಪ್ಪ ಪ್ರೀತಿ ಮಾಡುತ್ತಿದ್ದರು. ಅಭಿಷೇಕ್ ಅವರು ವಿದೇಶದಲ್ಲಿ ಅಭ್ಯಾಸ ಮಾಡುತ್ತಿದ್ದರು. ಆ ವೇಳೆ ಅಲ್ಲಿ ಅವಿವಾ ಅವರ ಪರಿಚಯ ಆಗಿದೆ ಎನ್ನಲಾಗುತ್ತದೆ. ಪ್ರೀತಿ ವಿಷಯದ ಬಗ್ಗೆ ಅಭಿಷೇಕ್ ಅವರು ಅಷ್ಟಾಗಿ ಮಾಹಿತಿ ನೀಡಿಲ್ಲ. ಆದರೆ ನಿಶ್ಚಿತಾರ್ಥ ಮಾಡಿಕೊಳ್ಳುವ ಕೆಲ ದಿನಗಳ ಮುಂಚೆ ಅವರು ಎಲ್ಲಿಯೂ ಪ್ರೀತಿ ಬಗ್ಗೆ ಸುಳಿವು ನೀಡಿರಲಿಲ್ಲ. ಕುಟುಂಬದ ಒಪ್ಪಿಗೆ ಪಡೆದು ಅಭಿಷೇಕ್ ಅವರು ಅವಿವಾ ಜೊತೆ ಬೆಂಗಳೂರಿನಲ್ಲಿ ಅದ್ದೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು.
Superstar Rajinikanth and Kannada star Ambareesh remained good friends until the demise of the latter. However, his rapport with the family continues as he was spotted at the wedding of Ambareesh and Sumalatha’s son Abhishek. Along with his wife Latha, Rajinikanth attended the event and blessed the couple. Videos and photos of Rajinikanth from the event went viral on social media.
18-06-26 01:25 pm
HK News Staffer
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm