ಬ್ರೇಕಿಂಗ್ ನ್ಯೂಸ್
07-06-23 01:42 pm Source: news18 ಸಿನಿಮಾ
ಇದೇ ಮೊದಲ ಬಾರಿಗೆ ಆದಿಪುರುಷ್ ಸಿನಿಮಾ ತಂಡ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಅದೇನೆಂದರೆ ಆದಿಪುರುಷ್ ಸಿನಿಮಾ ರಿಲೀಸ್ ಆಗುವ ಪ್ರತಿ ಚಿತ್ರಮಂದಿರಲ್ಲಿ ಒಂದು ಖಾಲಿ ಸೀಟ್ ಇರಲಿದೆಯಂತೆ. ಪ್ರಿ ರಿಲೀಸ್ ಇವೆಂಟ್ನಲ್ಲಿ ನಿರ್ದೇಶಕ ಓಂ ರಾವತ್ ಅವರು ಎಲ್ಲಾ ಥಿಯೇಟರ್ ಮಾಲೀಕರಲ್ಲಿ ಈ ಬೇಡಿಕೆ ಇಟ್ಟಿದ್ದಾರೆ. ವಿದೇಶ ಸೇರಿದಂತೆ ಎಲ್ಲಾ ಚಿತ್ರಮಂದಿರಗಳಲ್ಲಿ ಒಂದು ಸೀಟ್ನನ್ನು ಹನುಮಾನ್ ದೇವರಿಗಾಗಿ ಖಾಲಿ ಇಡಿ ಎಂದು ಆದಿಪುರುಷ್ ಸಿನಿಮಾದ ನಿರ್ದೇಶಕ ಓಂ ರಾವತ್ ಅವರು ಬೇಡಿಕೆ ಇಟ್ಟಿದ್ದಾರೆ. ಈ ನಿಟ್ಟಿನಲ್ಲಿ ಸಿನಿಮಾ ರಿಲೀಸ್ ದಿನ ಎಲ್ಲಾ ಥಿಯೇಟರ್ನಲ್ಲಿ ಒಂದು ಸೀಟ್ ಖಾಲಿ ಇರಲಿದೆಯಂತೆ.
ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಹಳಷ್ಟು ಜನರು ಚಿತ್ರತಂಡದ ಭಕ್ತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹನುಮಾನ್ಗೆ ಗೌರವ ಕೊಡುವ ಈ ನಡೆಯನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಇನ್ನೂ ಕೆಲವರು ಪ್ರತಿಕ್ರಿಯಿಸಿ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ಬರದಿದ್ದರೆ ಏನು ಮಾಡುತ್ತೀರಿ? ಮೊದಲ ದಿನವೇ ನೆಗಟಿವ್ ಟಾಕ್ ಬಂದರೆ ಒಂದು ಸೀಟ್ ಅಲ್ಲ, ಇಡೀ ಥಿಯೇಟರ್ ಖಾಲಿಯಾಗುತ್ತದೆ ಎಂದು ಕಾಲೆಳೆದಿದ್ದಾರೆ.



ಇನ್ನೊಬ್ಬರು ಕಮೆಂಟ್ ಮಾಡಿ ಸಿನಿಮಾ ನೋಡಲು ಬರುವಾಗ ಚಪ್ಪಲಿ ಧರಿಸಿಕೊಂಡು ಬರಬಹುದೇ ಎಂದು ಪ್ರಶ್ನಿಸಿದ್ದಾರೆ. ಥಿಯೇಟರ್ನಲ್ಲಿ ಪ್ರಸಾದ ಅಥವಾ ಪಾಯಸ ಕೊಡುತ್ತೀರಾ ಎಂದು ಕಿಂಡಲ್ ಮಾಡಿದ್ದಾರೆ ಇನ್ನೊಬ್ಬರು. ಪಾಪ್ಕಾರ್ನ್, ಕೂಲ್ಡ್ರಿಂಕ್ಸ್ ಬದಲು ಪಾಯಸ ಮತ್ತು ಪ್ರಸಾದ ಕೊಡ್ತೀರಾ ಎಂದು ಕೇಳಿದ್ದಾರೆ ನೆಟ್ಟಿಗರು. ಇನ್ನು ಹನುಮಾನ್ ಥಿಯೇಟರ್ ಒಳಗೆ ಕುಳಿತ ಕೆಲವು ಫೋಟೋಶೋಪ್ ಮಾಡಿದ ಫೋಟೋಗಳು ವೈರಲ್ ಆಗುತ್ತವೆ ಎಂದಿದ್ದಾರೆ ಇನ್ನೊಬ್ಬರು. ಸಿನಿಮಾ ಚೆನ್ನಾಗಿದ್ರೆ ಇದನ್ನೆಲ್ಲಾ ಯಾಕೆ ಮಾಡ್ತೀರಿ ಎಂದು ಕೇಳಿದ್ದಾರೆ.



ಈ ರೀತಿ ಬೇಕಾಬಿಟ್ಟಿ ಕಮೆಂಟ್ ಮಾಡಿ ಚಿತ್ರತಂಡದ ಮಹತ್ವದ ಉದ್ದೇಶವನ್ನು ಸುಮ್ಮನೆ ನೋಯಿಸಬೇಡಿ ಎಂದಿದ್ದಾರೆ ಪ್ರಭಾಸ್ ಫ್ಯಾನ್ಸ್. ಅಂತೂ ಈ ವಿಚಾರ ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಆದಿಪುರುಷ್ ಸಿನಿಮಾದಲ್ಲಿ ಪ್ರಭಾಸ್ ರಾಮನಾಗಿ, ಕೃತಿ ಸನೋನ್ ಸೀತೆಯಾಗಿ ಹಾಗೂ ಸೈಫ್ ಅಲಿ ಖಾನ್ ರಾವಣನ ಪಾತ್ರವನ್ನು ಮಾಡಲಿದ್ದಾರೆ. ಮಲ್ಟಿ ಸ್ಟಾರರ್ ಸಿನಿಮಾ ಈಗಾಗಲೇ ಸಾಕಷ್ಟು ಕುತೂಹಲ ಸೃಷ್ಟಿಸಿದೆ.
one empty seat in theaters during adipurush release.
17-08-26 02:26 pm
HK News Staffer
ಜಮೀರ್ ಹಲ್ಲು ಕಿತ್ತ ಹಾವು, ನೆಪಕ್ಕಷ್ಟೇ ಸಚಿವ ಸ್ಥಾನ...
14-08-26 08:42 pm
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
17-08-26 05:07 pm
HK News Staffer
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
17-08-26 05:02 pm
HK News Staffer
ಬಂಟ್ವಾಳ ಪೊಲೀಸರ ಭರ್ಜರಿ ಬೇಟೆ; ಬೆಂಗಳೂರಿನಿಂದ ಕಾರಿ...
17-08-26 10:54 am
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm