ಬ್ರೇಕಿಂಗ್ ನ್ಯೂಸ್
17-06-23 03:59 pm Source: news18 ಸಿನಿಮಾ
ಆದಿಪುರುಷ್ ಸಿನಿಮಾ ನೋಡಿದ ಬಹಳಷ್ಟು ಪ್ರೇಕ್ಷಕರು ಸಿನಿಮಾ ಕುರಿತು ನೆಗೆಟಿವ್ ರಿವ್ಯೂ ಕೊಡುತ್ತಿದ್ದಾರೆ. ರಾಮಾಯಣದ ಕಥೆಯನ್ನು ಅದರ ಕಥಾ ಪಾತ್ರಗಳನ್ನು ತೋರಿಸಿರುವ ರೀತಿಗೆ ಜನರು ಚಿತ್ರ ತಂಡದ ಮೇಲೆ ಸಿಟ್ಟಾಗಿದ್ದಾರೆ. ಸಿನಿಮಾದ ಟೀಸರ್ ರಿಲೀಸ್ ಆದಾಗಲೇ ವ್ಯಾಪಕ ಟೀಕೆ ಎದುರಾಗಿತ್ತು. ಆಮೇಲೆ ಸಿನಿಮಾದ ಗ್ರಾಫಿಕ್ಸ್ಗಳಲ್ಲಿ ಹಲವು ಬದಲಾವಣೆಗಳನ್ನು ಮಾಡಲಾಯಿತು. ಸಿನಿಮಾದಲ್ಲಿ ರಾಮ ಸೇರಿದಂತೆ ಹಲವು ಪ್ರಮುಖ ಪಾತ್ರಗಳ ಚಿತ್ರಣದ ಬಗ್ಗೆ ನೆಟ್ಟಿಗರು ಸಿಟ್ಟಾಗಿದ್ದಾರೆ.
ಇದೀಗ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಿನಿಮಾ ವಿರುದ್ಧ ದೂರು ದಾಖಲಿಸಲಾಗಿದೆ. ದೆಹಲಿ ಹೈಕೋರ್ಟ್ನಲ್ಲಿ ಹಿಂದೂ ಸೇನಾ ಮುಖ್ಯಸ್ಥ ವಿಷ್ಣು ಗುಪ್ತಾ ಅವರು ಸಿನಿಮಾ ವಿರುದ್ಧ ಅರ್ಜಿ ಸಲ್ಲಿಸಿದ್ದಾರೆ. ರಾಮಾಯಣವನ್ನು ಆಧರಿಸಿದ ಸಿನಿಮಾ ಆಗಿರುವುದರಿಂದ ಚಿತ್ರತಂಡ ಬೇಕಾಬಿಟ್ಟಿಯಾಗಿ ತಮಗೆ ಬೇಕಾದಂತೆ ಬದಲಾವಣೆ ತಂದು ರಾಮಾಯಣ ಪಾತ್ರಗಳನ್ನು ಚಿತ್ರಿಸಿದ್ದು ಹಿಂದೂ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ.



ಸಾರ್ವಜನಿಕ ಹಿತಾಸಕ್ತಿಯಲ್ಲಿ ಅರ್ಜಿ ಸಲ್ಲಿಸಲಾಗಿದೆ. ಧಾರ್ಮಿಕ ಮುಖಂಡರು/ಪಾತ್ರಗಳು/ವ್ಯಕ್ತಿಗಳನ್ನು ಕೆಟ್ಟ ಅಭಿರುಚಿಯಲ್ಲಿ ಬಿಂಬಿಸುವ ಆಕ್ಷೇಪಾರ್ಹ ದೃಶ್ಯಗಳನ್ನು ತೆಗೆದುಹಾಕಲು ಸೂಕ್ತ ನೋಟಿಸ್ ನೀಡುವಂತೆ ಈ ಅರ್ಜಿಯಲ್ಲಿ ಕೇಳಲಾಗಿದೆ. 'ಆದಿಪುರುಷ್' ಚಲನಚಿತ್ರವನ್ನು ಪ್ರಮಾಣೀಕರಿಸದಂತೆ ಆದೇಶವನ್ನು ಹೊರಡಿಸಿ ಸಿನಿಮಾ ಪ್ರದರ್ಶಿಸದಂತೆ ಕೋರಿ ಅರ್ಜಿ ಸಲ್ಲಿಸಲಾಗಿದೆ. ಪ್ರಭಾಸ್ ಅಭಿನಯದ ಆದಿಪುರುಷ್



ಆಲ್ ಇಂಡಿಯಾ ಆದಿಪುರುಷ್ ಬಾಕ್ಸ್ ಆಫೀಸ್ ಕಲೆಕ್ಷನ್ ನೋಡುವುದಾದರೆ ಎಲ್ಲಾ ಭಾಷೆಗಳಲ್ಲಿ ಸೇರಿ ಒಟ್ಟು 90 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಪಠಾಣ್ ಹಾಗೂ ಕೆಜಿಎಫ್2 ನಂತರ ಕೊರೋನಾ ನಂತರದ ಅವಧಿಯಲ್ಲಿ ಮೊದಲ ದಿನ ಅತ್ಯಧಿಕ ಗಳಿಸಿದ ಮೂರನೇ ಸಿನಿಮಾ ಇದಾಗಿದೆ. Boxofficeindia.com ಪ್ರಕಾರ ಸಿನಿಮಾದ ತೆಲುಗು ವರ್ಷನ್ ಚೆನ್ನಾಗಿ ಓಡಿದೆ ಎನ್ನಲಾಗಿದೆ. ಹಿಂದಿಯಲ್ಲಿ 90 ಕೋಟಿಯಷ್ಟು ಕಲೆಕ್ಷನ್ ಸೇರಿ ಚೆನ್ನಾಗಿ ಕಲೆಕ್ಷನ್ ಮಾಡಿದೆ. ಸಿನಿಮಾ ಒಟ್ಟಾಗಿ 110 ರಿಂದ 140 ಕೋಟಿ ಕಲೆಕ್ಷನ್ ಮಾಡಿದೆ ಎನ್ನಲಾಗಿದೆ.
Hindu Sena files write petition against adipurush in delhi high court.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm