ಬ್ರೇಕಿಂಗ್ ನ್ಯೂಸ್
17-06-23 03:59 pm Source: news18 ಸಿನಿಮಾ
ಆದಿಪುರುಷ್ ಸಿನಿಮಾ ನೋಡಿದ ಬಹಳಷ್ಟು ಪ್ರೇಕ್ಷಕರು ಸಿನಿಮಾ ಕುರಿತು ನೆಗೆಟಿವ್ ರಿವ್ಯೂ ಕೊಡುತ್ತಿದ್ದಾರೆ. ರಾಮಾಯಣದ ಕಥೆಯನ್ನು ಅದರ ಕಥಾ ಪಾತ್ರಗಳನ್ನು ತೋರಿಸಿರುವ ರೀತಿಗೆ ಜನರು ಚಿತ್ರ ತಂಡದ ಮೇಲೆ ಸಿಟ್ಟಾಗಿದ್ದಾರೆ. ಸಿನಿಮಾದ ಟೀಸರ್ ರಿಲೀಸ್ ಆದಾಗಲೇ ವ್ಯಾಪಕ ಟೀಕೆ ಎದುರಾಗಿತ್ತು. ಆಮೇಲೆ ಸಿನಿಮಾದ ಗ್ರಾಫಿಕ್ಸ್ಗಳಲ್ಲಿ ಹಲವು ಬದಲಾವಣೆಗಳನ್ನು ಮಾಡಲಾಯಿತು. ಸಿನಿಮಾದಲ್ಲಿ ರಾಮ ಸೇರಿದಂತೆ ಹಲವು ಪ್ರಮುಖ ಪಾತ್ರಗಳ ಚಿತ್ರಣದ ಬಗ್ಗೆ ನೆಟ್ಟಿಗರು ಸಿಟ್ಟಾಗಿದ್ದಾರೆ.
ಇದೀಗ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಿನಿಮಾ ವಿರುದ್ಧ ದೂರು ದಾಖಲಿಸಲಾಗಿದೆ. ದೆಹಲಿ ಹೈಕೋರ್ಟ್ನಲ್ಲಿ ಹಿಂದೂ ಸೇನಾ ಮುಖ್ಯಸ್ಥ ವಿಷ್ಣು ಗುಪ್ತಾ ಅವರು ಸಿನಿಮಾ ವಿರುದ್ಧ ಅರ್ಜಿ ಸಲ್ಲಿಸಿದ್ದಾರೆ. ರಾಮಾಯಣವನ್ನು ಆಧರಿಸಿದ ಸಿನಿಮಾ ಆಗಿರುವುದರಿಂದ ಚಿತ್ರತಂಡ ಬೇಕಾಬಿಟ್ಟಿಯಾಗಿ ತಮಗೆ ಬೇಕಾದಂತೆ ಬದಲಾವಣೆ ತಂದು ರಾಮಾಯಣ ಪಾತ್ರಗಳನ್ನು ಚಿತ್ರಿಸಿದ್ದು ಹಿಂದೂ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ.



ಸಾರ್ವಜನಿಕ ಹಿತಾಸಕ್ತಿಯಲ್ಲಿ ಅರ್ಜಿ ಸಲ್ಲಿಸಲಾಗಿದೆ. ಧಾರ್ಮಿಕ ಮುಖಂಡರು/ಪಾತ್ರಗಳು/ವ್ಯಕ್ತಿಗಳನ್ನು ಕೆಟ್ಟ ಅಭಿರುಚಿಯಲ್ಲಿ ಬಿಂಬಿಸುವ ಆಕ್ಷೇಪಾರ್ಹ ದೃಶ್ಯಗಳನ್ನು ತೆಗೆದುಹಾಕಲು ಸೂಕ್ತ ನೋಟಿಸ್ ನೀಡುವಂತೆ ಈ ಅರ್ಜಿಯಲ್ಲಿ ಕೇಳಲಾಗಿದೆ. 'ಆದಿಪುರುಷ್' ಚಲನಚಿತ್ರವನ್ನು ಪ್ರಮಾಣೀಕರಿಸದಂತೆ ಆದೇಶವನ್ನು ಹೊರಡಿಸಿ ಸಿನಿಮಾ ಪ್ರದರ್ಶಿಸದಂತೆ ಕೋರಿ ಅರ್ಜಿ ಸಲ್ಲಿಸಲಾಗಿದೆ. ಪ್ರಭಾಸ್ ಅಭಿನಯದ ಆದಿಪುರುಷ್



ಆಲ್ ಇಂಡಿಯಾ ಆದಿಪುರುಷ್ ಬಾಕ್ಸ್ ಆಫೀಸ್ ಕಲೆಕ್ಷನ್ ನೋಡುವುದಾದರೆ ಎಲ್ಲಾ ಭಾಷೆಗಳಲ್ಲಿ ಸೇರಿ ಒಟ್ಟು 90 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಪಠಾಣ್ ಹಾಗೂ ಕೆಜಿಎಫ್2 ನಂತರ ಕೊರೋನಾ ನಂತರದ ಅವಧಿಯಲ್ಲಿ ಮೊದಲ ದಿನ ಅತ್ಯಧಿಕ ಗಳಿಸಿದ ಮೂರನೇ ಸಿನಿಮಾ ಇದಾಗಿದೆ. Boxofficeindia.com ಪ್ರಕಾರ ಸಿನಿಮಾದ ತೆಲುಗು ವರ್ಷನ್ ಚೆನ್ನಾಗಿ ಓಡಿದೆ ಎನ್ನಲಾಗಿದೆ. ಹಿಂದಿಯಲ್ಲಿ 90 ಕೋಟಿಯಷ್ಟು ಕಲೆಕ್ಷನ್ ಸೇರಿ ಚೆನ್ನಾಗಿ ಕಲೆಕ್ಷನ್ ಮಾಡಿದೆ. ಸಿನಿಮಾ ಒಟ್ಟಾಗಿ 110 ರಿಂದ 140 ಕೋಟಿ ಕಲೆಕ್ಷನ್ ಮಾಡಿದೆ ಎನ್ನಲಾಗಿದೆ.
Hindu Sena files write petition against adipurush in delhi high court.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 11:47 am
HK News Desk
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm