ಬ್ರೇಕಿಂಗ್ ನ್ಯೂಸ್
29-06-23 01:22 pm Source: news18 ಸಿನಿಮಾ
ದಳಪತಿ ವಿಜಯ್ ಅವರ ಮುಂದಿನ ಸಿನಿಮಾ ಲಿಯೋ ಅವರಿಗೆ ತೊಂದರೆ ತಂದಿಟ್ಟಿದೆ. ಸಿನಿಮಾದ ಫಸ್ಟ್ ಸಿಂಗಲ್ ರಿಲೀಸ್ ಆಗಿದ್ದೇ ತಟ ತಮಿಳು ನಟ, ಸ್ಟಾರ್ ವಿಜಯ್ ವಿರುದ್ಧ ಕೇಸ್ ದಾಖಲಾಗಿದೆ. ಲಿಯೋ ಸಿನಿಮಾದ ಮೊದಲ ಹಾಡು ಇತ್ತೀಚೆಗೆ ರಿಲೀಸ್ ಆಗಿತ್ತು. ಲಿಯೋ ಸಿನಿಮಾ ಅಕ್ಟೋಬರ್ನಲ್ಲಿ ದಸರಾ ಸಂದರ್ಭ ಬಿಡುಗಡೆಯಾಗಲಿದೆ. ಸಿನಿಮಾದ ಹೆಚ್ಚಿನ ಸೀನ್ ಶೂಟಿಂಗ್ ಕೂಡಾ ಮುಗಿದಿದೆ. ಸಿನಿಮಾದ ಮೊದಲ ಸಾಂಗ್ ವಿಜಯ್ ಬರ್ತ್ಡೇ ಸಂದರ್ಭ ರಿಲೀಸ್ ಮಾಡಲಾಗಿತ್ತು. ಆದರೆ ಹಾಡಿನ ಬಗ್ಗೆ ವಿರೋಧ ವ್ಯಕ್ತವಾಗಿದೆ.
ನಾ ರೆಡಿ ಎನ್ನುವ ಹಾಡು ರಿಲೀಸ್ ಆಗಿದ್ದು ಈಗ ಸಮಸ್ಯೆ ಎದುರಾಗಿದೆ. ಕೊರುಕ್ಕುಪೇಟ್ ಎಂಬಲ್ಲಿನ ಸಾಮಾಜಿಕ ಕಾರ್ಯಕರ್ತ ಸೆಲ್ವಮ್ ಎಂಬ ವ್ಯಕ್ತಿ ನಾ ರೆಡಿ ಹಾಡಿನ ವಿರುದ್ಧ ಕೇಸ್ ದಾಖಲಿಸಿದ್ದಾರೆ. ಈ ಹಾಡು ಮಾದಕ ವ್ಯಸನವನ್ನು ಹಾಗೂ ರೌಡಿಸಂ ಪ್ರೋತ್ಸಾಹಿಸುತ್ತದೆ ಎಂದು ಆರೋಪಿಸಿದ್ದಾರೆ. ನಾರ್ಕೋಟಿಕ್ಸ್ ಕಂಟ್ರೋಲ್ ಆ್ಯಕ್ಟ್ ಅಡಿಯಲ್ಲಿ ನಟ ವಿಜಯ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕಮಿಷನರ್ ಬಳಿ ದೂರು ನೀಡಲಾಗಿದೆ. ಈ ವಿಚಾರ ಈಗ ಎಲ್ಲೆಡೆ ವೈರಲ್ ಆಗಿದ್ದು ಹಾಡಿನ ಲಿರಿಕ್ಸ್ ಬಗ್ಗೆ ಟೀಕೆ ವ್ಯಕ್ತವಾಗಿದೆ.

ನಾ ರೆಡಿ ಹಾಡಿನಲ್ಲಿರುವ ಕೆಲವು ಸಾಲುಗಳು ಡ್ರಗ್ಸ್ ಹಾಗೂ ರೌಡಿಸಂ ಸಪೋರ್ಟ್ ಮಾಡುತ್ತವೆ. ವಿಜಯ್ ಅವರು ಸ್ಮೋಕ್ ಮಾಡುತ್ತಿದ್ದು ಮದ್ಯವನ್ನೂ ಈ ಹಾಡಿನಲ್ಲಿ ಬಳಸಲಾಗಿದೆ. ಸಾಂಗ್ ವೈರಲ್ ಆಗಿದ್ದು ಇದು ಯುವಜನರನ್ನು ಪ್ರಭಾವಿಸುತ್ತದೆ ಎಂದು ಆರೋಪಿಸಲಾಗಿದೆ. ವಿಜಯ್ ವಿರುದ್ಧ ಕ್ರಮ ಕೈಗೊಳ್ಳಲು ಕೋರ್ಟ್ನಲ್ಲಿ ಕೇಸ್ ಫೈಲ್ ಮಾಡುವುದಾಗಿ ಸೆಲ್ವಮ್ ಹೇಳಿದ್ದಾರೆ. ಇದೇ ವಿಚಾರವಾಗಿ ಕೆಲವು ನೆಟ್ಟಿಗರು ವಿಜಯ್ ವಿರುದ್ಧ ಕಿಡಿ ಕಾರಿದ್ದಾರೆ. ವಿಜಯ್ ಅವರ ಅಭಿಮಾನಿಗಳು ಇದು ಸಿನಿಮಾಗೆ ಬಿಟ್ಟಿ ಪ್ರಚಾರ ಎಂದು ಹೇಳಿದ್ದಾರೆ.

ಸದ್ಯ ಲಿಯೋ ಸಿನಿಮಾದ ಶೂಟಿಂಗ್ ಫೈನಲ್ ಸ್ಟೇಜ್ಗೆ ತಲುಪಿದೆ. ಈ ಸಿನಿಮಾ ಬಹುನಿರೀಕ್ಷಿತ ಚಿತ್ರವಾಗಿದ್ದು ವಿಜಯ್ ಫ್ಯಾನ್ಸ್ ಕುತೂಹಲದಿಂದ ಸಿನಿಮಾಗಾಗಿ ಕಾಯುತ್ತಿದ್ದಾರೆ. ವಿಜಯ್ ಅವರ ಹಲವಾರು ಫೋಟೋಗಳು ವೈರಲ್ ಆಗಿದ್ದು ಇದರಲ್ಲಿ ನಟ ಸಿಗರೇಟ್ ಸೇದುವುದನ್ನು ಕಾಣಬಹುದು. ಹಾಗೆಯೇ ನಟ ಪಿಸ್ತೂಲ್ ಹಿಡಿದಿರುವಂತಹ ಫೋಟೋಗಳು ಕೂಡಾ ವೈರಲ್ ಆಗಿದ್ದವು.
A police complaint filed against leo actor vijay for promoting drugs.
18-06-26 01:25 pm
HK News Staffer
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm