ಬ್ರೇಕಿಂಗ್ ನ್ಯೂಸ್
05-07-23 01:40 pm Source: News18 Kannada ಸಿನಿಮಾ
ನಿಹಾರಿಕಾ ಕೊನಿಡೇಲಾ ಹಾಗೂ ಚೈತನ್ಯ ಪರಸ್ಪರ ಸಮ್ಮತಿಯೊಂದಿಗೆ ವಿಚ್ಛೇದನೆ ಪಡೆದಿದ್ದಾರೆ. ತೆಲುಗು ಮೆಗಾಸ್ಟಾರ್ ಚಿರಂಜೀವಿ ಅವರ ಕುಟುಂಬದ ನಿಹಾರಿಕಾ ಅವರ ದಾಂಪತ್ಯ ಜೀವನದ ಬಿರುಕಿನ ಬಗ್ಗೆ ಕೆಲವು ತಿಂಗಳಿಂದಲೇ ಚರ್ಚೆ ನಡೆಯುತ್ತಿತ್ತು. ಇದೀಗ ವಿಚ್ಛೇದನೆಯೂ ಆಗಿದ್ದು ಇದೇ ಮೊದಲಬಾರಿಗೆ ತೆಲುಗು ನಟಿ, ನಿಹಾರಿಕಾ ತಮ್ಮ ಡಿವೋರ್ಸ್ ಬಗ್ಗೆ ಪೋಸ್ಟ್ ಒಂದನ್ನು ಶೇರ್ ಮಾಡಿದ್ದಾರೆ. ಈ ಪೋಸ್ಟ್ ಶೇರ್ ಮಾಡುವಾಗ ನಟಿ ಕಮೆಂಟ್ ಟರ್ನ್ ಆಫ್ ಮಾಡಿದ್ದು ಯಾರೂ ಕೂಡಾ ನಟಿಯ ಪೋಸ್ಟ್ಗೆ ಪ್ರತಿಕ್ರಿಯಿಸಲು ಸಾಧ್ಯವಾಗುತ್ತಿಲ್ಲ.
ಚೈತನ್ಯ ಹಾಗೂ ನಾನು ಬೇರೆಯಾಗಲು ನಿರ್ಧರಿಸಿದ್ದೇವೆ. ನಾವು ನಮ್ಮ ಬದುಕಿನಲ್ಲಿ ಮುಂದೆ ಸಾಗಲು ನೀವು ನಮಗೆ ಕರುಣೆ ತೋರಿಸಿ ವರ್ತಿಸಬೇಕು. ಈ ಸಂದರ್ಭ ನಮ್ಮ ಬೆಂಬಲವಾಗಿ ನಿಂತ ಸ್ನೇಹಿತರು ಹಾಗೂ ಕುಟುಂಬಸ್ಥರಿಗೆ ಧನ್ಯವಾದಗಳು. ನಾನು ಈ ಸಂದರ್ಭ ನಮ್ಮ ಮುಂದಿನ ಬದುಕಿನಲ್ಲಿ ಮಂದುವರಿಯಲು ಸ್ವಲ್ಪ ಖಾಸಗಿತನವನ್ನು ಕೇಳುತ್ತಿದ್ದೇನೆ. ಅರ್ಥ ಮಾಡಿಕೊಂಡಿದ್ದಕ್ಕೆ ಧನ್ಯವಾದಗಳು ಎಂದು ಬರೆದಿದ್ದಾರೆ. ಇಬ್ಬರೂ ಏಪ್ರಿಲ್ 1 ರಂದು ವಿಚ್ಛೇದನಕ್ಕೆ ಅರ್ಜಿ ಕೋರಿ ಕುಕಟ್ ಪಲ್ಲಿ ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಜೂನ್ 5 ರಂದು ನಿಹಾರಿಕಾ ಮತ್ತು ಚೈತನ್ಯ ಜೊನ್ನಲಗಡ್ಡ ಅವರಿಗೆ ನ್ಯಾಯಾಲಯ ವಿಚ್ಛೇದನ ನೀಡಿದೆ ಎಂದು ವರದಿಯಾಗಿದೆ. ಈ ಮೂಲಕ ಮತ್ತೊಮ್ಮೆ ಸೆಲೆಬ್ರಿಟಿ ಜೋಡಿ ವಿಚ್ಛೇದನ ವಿಚಾರ ಚರ್ಚೆಗೆ ಗ್ರಾಸವಾಗಿದೆ.


ತೆಲುಗು ಸಿನಿಮಾ ಇಂಡಸ್ಟ್ರಿಯ ಸ್ಟಾರ್ ಜೋಡಿಯ ವಿಚ್ಛೇದನೆ ಎಲ್ಲರಿಗೂ ಅಚ್ಚರಿ ಮೂಡಿಸಿದೆ. ನಿಹಾರಿಕಾ ಅವರು ಸದ್ಯ ಡಿವೋರ್ಸ್ನಿಂದ ಹೊರಗೆಬಂದು ಸಿನಿಮಾಗಳತ್ತ ಹೆಚ್ಚು ಗಮನ ಕೊಡುತ್ತಿದ್ದಾರೆ. ನಿಹಾರಿಕಾ ಡಿಸೆಂಬರ್ 2020 ರಲ್ಲಿ ಚೈತನ್ಯ ಜೊನ್ನಲಗಡ್ಡ ಅವರನ್ನು ವಿವಾಹವಾದರು. ಮತ್ತು ಅಂದಿನಿಂದ ವೈವಾಹಿಕ ಜೀವನವನ್ನು ಆನಂದಿಸುತ್ತಿದ್ದಾರೆ. ಆದರೆ ಅನಿರೀಕ್ಷಿತವಾಗಿ ಇವರಿಬ್ಬರ ವಿಚ್ಛೇದನ ವಿಚಾರ ಚರ್ಚೆಗೆ ಗ್ರಾಸವಾಗಿದೆ. ಈ ಹಿನ್ನೆಲೆಯಲ್ಲಿ ನೆಟ್ಟಿಗರು ಮಾಡಿದ ವದಂತಿ ನಿಜವಾಯಿತು.


ನಿಹಾರಿಕಾ ಹೈದರಾಬಾದ್ನ ಕುಕಟ್ಪಲ್ಲಿ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಇಬ್ಬರೂ ಹಿಂದೂ ವಿವಾಹ ಕಾಯ್ದೆ 1955ರ ಅಡಿಯಲ್ಲಿ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದರು. ಇತ್ತೀಚೆಗೆ ನ್ಯಾಯಾಲಯ ಅವರಿಗೆ ವಿಚ್ಛೇದನ ನೀಡಿದೆಯಂತೆ. ನಿಹಾರಿಕಾ ಮತ್ತು ಚೈತನ್ಯ ಜೊನ್ನಲಗಡ್ಡ ಅವರು ಸೋಷಿಯಲ್ ಮೀಡಿಯಾದಲ್ಲಿ ಇನ್ಸ್ಟಾಗ್ರಾಮ್ನಲ್ಲಿ ಪರಸ್ಪರ ಅನ್ಫಾಲೋ ಮಾಡಿದಾಗಿನಿಂದ ವಿಚ್ಛೇದನದ ಅನುಮಾನಗಳು ಪ್ರಾರಂಭವಾದವು.
Niharika Konidela shares Divorce news with Fans turn off comment Section.
03-12-25 03:01 pm
HK News Desk
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
ಕೃತಕ ಬುದ್ಧಿಮತ್ತೆ ಎಫೆಕ್ಟ್ ; ಭವಿಷ್ಯದಲ್ಲಿ ಜನರು ಕ...
01-12-25 10:59 pm
ಸಿಎಂ, ಡಿಸಿಎಂ ಭೇಟಿಯಾಗಿ ಹೊಟ್ಟೆ ತುಂಬ ಉಪಹಾರ ಸೇವನೆ...
01-12-25 08:28 pm
03-12-25 07:19 pm
HK News Desk
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
ಅಫ್ಘಾನಿಸ್ತಾನದಲ್ಲಿ ಒಂದೇ ಕುಟುಂಬದ 13 ಜನರನ್ನು ಕೊಂ...
03-12-25 03:04 pm
ಮುಸ್ಲಿಮರು ಇನ್ನೂ ಎರಡು ಐತಿಹಾಸಿಕ ಸ್ಥಳಗಳನ್ನು ಬಿಟ್...
02-12-25 11:19 pm
03-12-25 10:35 pm
Mangalore Correspondent
Mangalore, CM Siddaramaiah, High Court: ಮಂಗಳೂ...
03-12-25 07:23 pm
CM Siddaramaiah, Mangalore, Narayan Guru: ದೇವ...
03-12-25 04:52 pm
K. C. Venugopal, Mangalore, Dk Shivakumar: ಮಂ...
03-12-25 11:54 am
Bjp, Arun Puthila, Puttur, Mangalore: ಬಿಜೆಪಿ...
01-12-25 09:25 pm
03-12-25 01:41 pm
Bangalore Correspondent
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm
ಇನ್ನೋವಾ ಕಾರಿನಲ್ಲಿ ನಾಲ್ಕು ಕರುಗಳನ್ನು ಸಾಗಿಸುತ್ತಿ...
02-12-25 06:37 pm
ರೈಲಿನಲ್ಲಿ ಬಂದು ನಿಲ್ಲಿಸಿದ್ದ ಸ್ಕೂಟರ್ ಕಳವುಗೈದು ಪ...
02-12-25 02:26 pm
Udupi Rape, Crime, Hindu Jagaran Vedike: ಮದುವ...
01-12-25 04:50 pm