ಬ್ರೇಕಿಂಗ್ ನ್ಯೂಸ್
06-07-23 01:53 pm Source: News18 Kannada ಸಿನಿಮಾ
ಯೂಟ್ಯೂಬ್ಗ್ ಬೆಂಕಿ ಬಿದ್ದಿದೆ. ಬೆಳಗ್ಗೆ 5:12 ಗಂಟೆಯಿಂದ ಬಿರುಗಾಳಿ ಕೂಡ ಎದ್ದಿದೆ. ಅರೇ ಯಾಕೆ ಅಂತ ಕನ್ಫೂಸ್ ಆಗಬೇಡಿ. ಮೋಸ್ಟ್ ವೈಲೆಂಟೆಡ್ ಮ್ಯಾನ್ ಸಲಾರ್ ಸಿನಿಮಾದ ಟೀಸರ್ ರಿಲೀಸ್ ಆಗಿ ಯೂಟ್ಯೂಬ್ನಲ್ಲಿ ಧೂಳೆಬ್ಬಿಸುತ್ತಿದೆ. ಸೇಮ್ ಟು ಸೇಮ್ ಕೆಜಿಎಫ್ ಥೀಮ್ನಲ್ಲೇ ಈ ಸಿನಿಮಾ ಕೂಡ ಬಂದಿದೆ ಅಂತ ಫ್ಯಾನ್ಸ್ ಮಾತನಾಡಿಕೊಳ್ಳುತ್ತಿದ್ದಾರೆ. ಈ ಬಾರಿ ಪ್ರಶಾಂತ್ ನೀಲ್ ಪ್ರಭಾಸ್ ಅವರನ್ನು ಡೈನಾಸರ್ಗೆ ಹೋಲಿಸಿದ್ದಾರೆ. ಟೀಸರ್ ನೋಡಿದವರು ಜಪಿಸ್ತಿರೋದು ಒಂದೇ ಅದು ಸೆಪ್ಟೆಂಬರ್ ತಿಂಗಳು.
ಇನ್ನೂ ಟೀಸರ್ ರಿಲೀಸ್ಗೂ ಮುನ್ನ ಕೆಜಿಎಫ್ ಕಥೆಗೂ ಸಲಾರ್ ಕಥೆಗೂ ಲಿಂಕ್ ಇದೆ ಅನ್ನೋ ಮಾತುಗಳು ಸಿಕ್ಕಾಪಟ್ಟೆ ಕೇಳಿಬಂದಿತ್ತು. ಒಬ್ಬೊಬ್ಬರು ಒಂದೊಂದು ಆ್ಯಂಗಲ್ನಲ್ಲಿ ತಮ್ಮದೇ ಆದ ಉತ್ತರ ನೀಡಿದ್ದರು. ಆದರೆ ಟೀಸರ್ನಲ್ಲೇ ಒಂದು ಬಿಗ್ ಹಿಂಟ್ ಕೊಟ್ರಾ ನೀಲ್ ಅನ್ನೋ ಅನುಮಾನ ಶುರುವಾಗಿದೆ. ಸಲಾರ್ ಭಾಗ 1: CEASEFIRE ನಲ್ಲಿ ರಾಕಿಭಾಯ್ ಎಂಟ್ರಿಯಾಗೋದು ಪಕ್ಕಾ ಅಂತ ಅಭಿಮಾನಿಗಳು ಮಾತನಾಡಿಕೊಳ್ಳುತ್ತಿದ್ದಾರೆ. ಅಭಿಮಾನಿಗಳು ಟೀಸರ್ನಲ್ಲಿರೋ ಸಣ್ಣ ಸಣ್ಣ ವಿಚಾರಗಳನ್ನು ಕೂಡ ಗುರುತಿಸುತ್ತಿದ್ದಾರೆ.



ಅಭಿಮಾನಿಯೊಬ್ಬರು ಕೆಜಿಎಫ್ ಒಳಗೊಂಡ ಎರಡು ಸ್ಕ್ರೀನ್ಶಾಟ್ಗಳನ್ನು ಟ್ವೀಟ್ ಮಾಡಿದ್ದಾರೆ. ಕೆಜಿಎಫ್ 2 ಪೋಸ್ಟ್ ಕ್ರೆಡಿಟ್ ದೃಶ್ಯ ಮತ್ತು ಸಲಾರ್ ಟೀಸರ್ ಚಿತ್ರಗಳು ಒಂದಕ್ಕೊಂದು ಹೋಲುತ್ತವೆ. 516 ಮತ್ತು LALF=81 ಎಂಬ ಬರಹಗಳು ಕೆಜಿಎಫ್ 2 ಮತ್ತು ಸಲಾರ್ ಸಿನಿಮಾಗಳಲ್ಲಿ ಇದೆ. ಹೀಗಾಗಿ ಈ ಸಿನಿಮಾಗೂ ರಾಕಿ ಭಾಯ್ಗೂ ಪಕ್ಕಾ ಲಿಂಕ್ ಇದೆ. ನಿರ್ದೇಶಕ ಪ್ರಶಾಂತ್ ನೀಲ್ ಈ ಗುಟ್ಟನ್ನು ಬಿಟ್ಟುಕೊಡುತ್ತಿಲ್ಲ ಅಂತ ಅಭಿಮಾನಿಗಳು ಮಾತನಾಡಿಕೊಳ್ಳುತ್ತಿದ್ದಾರೆ.



ಪ್ರಭಾಸ್ ಮತ್ತು ಯಶ್ ನಡುವಿನ ಅತಿದೊಡ್ಡ ಸೌತ್ ಕ್ರಾಸ್ಒವರ್ ಅನ್ನು ಒಳಗೊಂಡಿರಬಹುದು ಎಂದು ತೋರುತ್ತದೆ. ಕೆಜಿಎಫ್ ಯೂನಿವರ್ಸ್ ಸೃಷ್ಟಿಸಿದ್ದಾರಾ ಪ್ರಶಾಂತ್ ನೀಲ್ ಎಂಬ ಪ್ರಶ್ನೆ ಮೂಡಿದೆ. ಹೊಂಬಾಳೆ ಫಿಲ್ಮ್ಸ್ನ ಸಲಾರ್ ಭಾಗ 1: CEASEFIRE ನಲ್ಲಿ ಪ್ರಭಾಸ್, ಪೃಥ್ವಿರಾಜ್ ಸುಕುಮಾರನ್, ಶ್ರುತಿ ಹಾಸನ್ ಮತ್ತು ಜಗಪತಿ ಬಾಬು ಸೇರಿದಂತೆ ತಾರಾಬಳಗದ ತಾರಾಗಣವಿದೆ. ಈ ಚಿತ್ರವು ಸೆಪ್ಟೆಂಬರ್ 28, 2023 ರಂದು ತೆಲುಗು, ಕನ್ನಡ, ಮಲಯಾಳಂ, ತಮಿಳು ಮತ್ತು ಹಿಂದಿ ಸೇರಿದಂತೆ ಐದು ಭಾಷೆಗಳಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.
Salaar Teaser KGF Connection Fans Spots major Clue Hinting at Crossover between Yash and Prabhas.
18-06-26 01:25 pm
HK News Staffer
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm