ಬ್ರೇಕಿಂಗ್ ನ್ಯೂಸ್
08-07-23 01:45 pm Source: News18 Kannada ಸಿನಿಮಾ
ಕಾಂತಾರದಂತಹ ಹಿಟ್ ಚಿತ್ರ ಕೊಟ್ಟು, ವಿಶ್ವವೇ ಕರುನಾಡಿನತ್ತ ತಿರುಗಿ ನೋಡುವಂತೆ ಮಾಡಿದ ನಿರ್ದೇಶಕ, ನಟ ರಿಷಬ್ ಶೆಟ್ಟಿ ನಿನ್ನೆ ತಮ್ಮ 40ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಕಾಂತಾರ 2 ಸಿನಿಮಾ ಬಗ್ಗೆ ಹೇಳಿದ್ದಾರೆ. ಹುಟ್ಟುಹಬ್ಬದ ಪ್ರಯುಕ್ತ ರಿಷಬ್ ಶೆಟ್ಟಿ ಅಭಿಮಾನಿಗಳನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನ ನಂದಿ ಲಿಂಕ್ ಗ್ರೌಂಡ್ಸ್ ನಲ್ಲಿ ಫ್ಯಾನ್ಸ್ ಜೊತೆ ಮಾತನಾಡಿ ಖುಷಿ ಪಟ್ಟಿದ್ದಾರೆ. ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ.
ನಟ ರಿಷಬ್ ಶೆಟ್ಟಿ ತಮ್ಮ ಹುಟ್ಟುಹಬ್ಬದಂದು ಅಭಿಮಾನಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಕಾಂತಾರ 2 ಸಿನಿಮಾ ರಿಲೀಸ್ ಯಾವಾಗ ಎಂದು ಹೇಳಿದ್ದಾರೆ, ಅದನ್ನು ಕೇಳಿ ಫ್ಯಾನ್ಸ್ ಕಾತುರರಾಗಿದ್ದಾರೆ. 'ಕಾಂತಾರ 2 ಸಂಭಾಷಣೆ ಮುಗಿಸಿದ್ದೇವೆ. ಸಿನಿಮಾ ಕೆಲಸಗಳು ನಡೆಯುತ್ತಿವೆ. ಸಿನಿಮಾ ಮಾಡಲು ಸ್ಥಳ ಮತ್ತು ಕಲಾವಿದರನ್ನು ಆಯ್ಕೆ ಮಾಡಬೇಕಿದೆ. ನಂತರ ಹೊಂಬಾಳೆ ಫಿಲಮ್ಸ್ ಅವರ ಅಧಿಕೃತವಾಗಿ ಸಿನಿಮಾದ ಚಿತ್ರೀಕರಣದ ಬಗ್ಗೆ ಘೋಷಣೆ ಮಾಡಲಿದ್ದಾರೆ ಎಂದು ರಿಷಬ್ ಹೇಳಿದ್ದಾರೆ.

ಅಲ್ಲದೇ ಕಾಂತಾರ 2 ಸಿನಿಮಾದ ಘೋಷಣೆ, ಚಿತ್ರೀಕರಣ, ಬಿಡುಗಡೆ ಇದೇ ವರ್ಷ ಆಗಲಿದೆ ಎಂದ ರಿಷಬ್ ಶೆಟ್ಟಿ ಹೇಳಿದ್ದಾರೆ. ರಿಷಬ್ ಬರ್ತ್ಡೇ ದಿನ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಸಿನಿಮಾ ನೋಡಲು ಫ್ಯಾನ್ಸ್ ಕಾತುರರಾಗಿದ್ದಾರೆ. ಇನ್ನು ಸಿನಿಮಾ ಬಗ್ಗೆ ಮಾತನಾಡಿದ ರಿಷಬ್ ಶೆಟ್ಟಿ, ಮಳೆಯಲ್ಲೇ ಸಿನಿಮಾ ಚಿತ್ರೀಕರಣವನ್ನು ಮಾಡುತ್ತೇವೆ. ಫಿಲ್ಮ್ ಗಾಗಿ ಮಾರುದ್ದ ಗಡ್ಡ ಬಿಡುತ್ತೀನಿ. ವಿಶೇಷ ಕಸರತ್ತುಗಳನ್ನು ಕಲಿಯುತ್ತಿದ್ದೇನೆ ಎಂದು ಹೇಳಿದ್ದಾರೆ.

ಈ ಹಿಂದೆ ರಿಷಬ್ ಶೆಟ್ಟಿ ಅವರು ಮಾತನಾಡಿ, ನೀವು ನೋಡಿದ್ದು ಕಾಂತಾರ ಸಿನಿಮಾದ 2 ನೇ ಭಾಗ. ಇನ್ಮುಂದೆ ನೋಡುವುದು ನೀವು ಕಾಂತಾರದ ಭಾಗ ಒಂದನ್ನು ಎಂದು ಹೇಳಿದ್ದರು. ಏನೇ ಆಗಲಿ ಅಭಿಮಾನಿಗಳಿಗಂತೂ ತುಂಬಾ ಖುಷಿಯಾಗಿದೆ. ಮತ್ತೆ ಈ ವರ್ಷ ಕಾಂತಾರ 2 ಸಿನಿಮಾ ನೋಡಬಹುದು ಎಂದು ಮಾತನಾಡಿಕೊಳ್ತಾ ಇದ್ದಾರೆ. ಕಾಂತಾರ 2 ಸಿನಿಮಾ ಅದ್ಭುತವಾಗಿ ಮೂಡಿ ಬರಲಿ ಎಂದು ವಿಶ್ ಮಾಡ್ತಾ ಇದ್ದಾರೆ.
Director Rishabh Shetty Announce Kantara 2 Film Release Matter.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 11:47 am
HK News Desk
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm