ಬ್ರೇಕಿಂಗ್ ನ್ಯೂಸ್
11-07-23 04:18 pm Source: News18 Kannada ಸಿನಿಮಾ
ಸುದೀಪ್ ಹಾಗೂ ನಿರ್ಮಾಪಕರ ವಿವಾದದ ಬಗ್ಗೆ ಮಾತಾಡಿದ ಭಾಮಾ ಹರೀಶ್, ನಟ ಸುದೀಪ್ ಅವರು ಕಾನೂನಾತ್ಮಕ ಹೋರಾಟ ಮಾಡ್ತಿನಿ ಎಂದು ಹೇಳಿದ್ದಾರೆ. ನಿನ್ನೆ ಸುದೀಪ್ ಪತ್ರ ಬರೆದಿದ್ದಾರೆ. ಈಗ ಅಭಿಮಾನಿಗಳು ಮನವಿ ಪತ್ರ ಕೊಟ್ಟಿದ್ದಾರೆ. ಅನೇಕ ಹೆಸರನ್ನು ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ. ಈ ಬಗ್ಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.
ಪತ್ರದ ಮೂಲಕ ಸುದೀಪ್ ಸ್ಪಷ್ಟನೆ
ನಿರ್ಮಾಪಕರ ಆರೋಪಗಳಿಗೆ ಕೊನೆಗೂ ಕಿಚ್ಚ ಸುದೀಪ್ ಪ್ರತಿಕ್ರಿಯಿಸಿದ್ದಾರೆ. ವಾಣಿಜ್ಯ ಮಂಡಳಿ ಹಾಗೂ ನಿರ್ಮಾಪಕರ ಸಂಘಕ್ಕೆ ಸುದೀರ್ಘ ಪತ್ರ ಬರೆದ ನಟ ಸುದೀಪ್, ನಿರ್ಮಾಪಕರ ಆರೋಪಗಳಿಗೆ ಉತ್ತರ ನೀಡಿದ್ದಾರೆ. ನಿರ್ಮಾಪಕರ ಎಮ್ ಎನ್ ಕುಮಾರ್ ನನ್ನ ಮೇಲೆ ಅರೋಪ ಮಾಡಿದ್ದಾರೆ ನನ್ನ ಮೇಲೆ ಅರೋಪ ಮಾಡಲು ಅವರು ಬಂದಾಗ ನೀವು ಸರಿಯಾದ ದಾಖಲೆಗಳಿವೆಯ ಎಂದು ಪರೀಕ್ಷಿಸ ಮಾಡಬೇಕಿತ್ತು.
ನನಗೂ ಅನೇಕರಿಂದ ಮೋಸ ಆಗಿದೆ
ಈ ಹಿಂದೆ ಇತರರ ಮೇಲೆ ಇಂತಹ ಅರೋಪಗಳ ಬಂದಾಗ ದೂರುಗಳು ಬಂದಾಗ ದಾಖಲೆ ಪರಿಶೀಲನೆ ಆಗ್ತಿತ್ತು. ಅದರೆ ನನ್ನ ವಿಚಾರದಲ್ಲಿ ಈ ಕೆಲಸ ಆಗಿಲ್ಲ ಯಾಕೆ?, ಇಂಡಸ್ಟ್ರಿಯಲ್ಲಿ ಸಾಕಷ್ಟು ಮಂದಿ ನನಗೆ ಮೋಸ ಮಾಡಿದ್ದಾರೆ. ದಾಖಲೆಗಳಿಲ್ಲದ ಕಾರಣ ನಾನು ಸುಮ್ಮನೆ ಆಗಿದ್ದೇನೆ.
ಕುಮಾರ್ ಆತ್ಮಹತ್ಯೆ ಮಾಡಿಕೊಂಡ್ರೆ ನಾನು ಹೊಣೆ ಎಂದ್ರು
ಕುಮಾರ್ ಅವರ ವಿಚಾರದಲ್ಲೂ ನಾನು ಮಾನವೀಯತೆಯ ಆಧಾರದಲ್ಲಿ ನೆರವು ನೀಡಲು ನಿರ್ಧರಿಸಿದ್ದೆ. ಅದರೆ ಕಾರಣಾಂತರಗಳಿಂದ ಅದು ಸಾಧ್ಯವಾಗಲಿಲ್ಲ. ಸುದ್ದಿಗೋಷ್ಠಿಯಲ್ಲಿ ಸುರೇಶ್ ಅವರು ಕುಮಾರ್ ಆತ್ಮಹತ್ಯೆ ಮಾಡಿಕೊಂಡ್ರೆ ನಾನು ಹೊಣೆ ಅಂದಿದ್ದಾರೆ. ಸುರೇಶ್ ಅವರ ಈ ಹೇಳಿಕೆ ನನಗೆ ತುಂಬಾ ನೋವುಂಟು ಮಾಡಿದೆ. ಸಮಾಜಕ್ಕೆ ಅಪಾಯಕಾರಿ ಸಂದೇಶ್ ನೀಡುವಂತಿದೆ. ಸುರೇಶ್ ಅವರಿಗೂ ನೋಟಿಸ್ ನೀಡಿದ್ದೇನೆ. ಯಾವಾಗ ಚಿತ್ರರಂಗದಲ್ಲಿ ಇಂತಹ ಕೆಟ್ಟ ಬೆಳವಣಿಗೆ ಶುರುವಾಯ್ತು. ಸುರೇಶ್ ಹೇಳಿಕೆ ಕಾರಣದಿಂದಾಗಿ ನಾನು ನೋಟಿಸ್ ಕಳಿಸಿದ್ದೇನೆ ಹೊರತು ಆಕ್ರೋಶದಿಂದ ಅಲ್ಲ.
ನನ್ನ ಮೇಲೆ ಒಂದೇ ಒಂದು ಕಪ್ಪು ಚುಕ್ಕಿ ಇಲ್ಲ
27 ವರ್ಷಗಳಿಂದ ನಾನು ಸಿನಿಮಾ ಇಂಡಸ್ಟ್ರಿಯಲ್ಲಿ ಇದ್ದೇನೆ. 45 ಸಿನಿಮಾಗಳಲ್ಲಿ ನಾಯಕ ನಟನಾಗಿದ್ದೇನೆ. ಎಂದಿಗೂ ಕಪ್ಪು ಚುಕ್ಕೆ ಬರುವಂತಹ ಒಂದೇ ಒಂದು ಕೆಲಸ ಮಾಡಿಲ್ಲ. ನನಗೆ ಕೆಲವೊಮ್ಮೆ ಮೋಸವಾಗಿದೆ. ಅನೇಕ ನಿರ್ಮಾಪಕರು ನನಗೆ ಇನ್ನು ಕೂಡ ಕೊಡಬೇಕಾದ ಹಣ ನೀಡಿಲ್ಲ. ನಾನು ಎಂದಿಗೂ ವಾಣಿಜ್ಯ ಮಂಡಳಿ ಮೆಟ್ಟಿಲು ಹತ್ತಿಲ್ಲ. ನಿಮ್ಮ ಪ್ರೀತಿಯ ಸುದೀಪ್ ಒಳ್ಳೆಯ ತನಕ್ಕೆ ಹೆಸರಾಗಿದ್ದಾನೆ ಹೊರತು ಕೆಟ್ಟತನಕ್ಕೆ ಅಲ್ಲ ಎಂದು ಪತ್ರದಲ್ಲಿ ಬರೆದಿದ್ದಾರೆ.
ನನ್ನ ಮೇಲೆ ಒತ್ತಡ ಹಾಕ್ಬೇಡಿ- ಸುದೀಪ್
ದಯವಿಟ್ಟು ಈ ವಿಚಾರದಲ್ಲಿ ನನ್ನ ಮೇಲೆ ಒತ್ತಡ ಹಾಕದೆ ನ್ಯಾಯಾಲಯದಲ್ಲೇ ಬಗೆಹರಿಸಿಕೊಳ್ಳಿ ಎಂದು ಸುದೀಪ್ ಪತ್ರದಲ್ಲಿ ಬರೆದಿದ್ದಾರೆ. ನಾನೇನಾದ್ರೂ ತಪ್ಪು ಮಾಡಿದ್ರೆ ನ್ಯಾಯಾಲಯದಲ್ಲೇ ಶಿರಬಾಗಿ ತಪ್ಪು ಒಪ್ಪಿಕೊಂಡು ದಂಡ ಕಟ್ಟುತ್ತೇನೆ. ನಾನು ಸರಿಯಾಗಿಯೇ ಇದ್ದೇನೆ. ನ್ಯಾಯ, ಸತ್ಯ ಯಾವುದು ಎಂದು ತಿಳಿಸಲು ಕೊಂಚ ಸಮಯ ಬೇಕಿದೆ ಎಂದು ಸುದೀಪ್ ಪತ್ರದಲ್ಲಿ ಬರೆದಿದ್ದಾರೆ.
Complaint from Actor Sudeep Fans Against the Producers.
13-04-26 09:49 pm
HK News Staffer
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
13-04-26 10:35 pm
HK News Staffer
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:52 am
HK News Staffer
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm